ಸಿದ್ದರಾಮಯ್ಯ ಸಿಎಂ ಆಗಿದ್ದಾಗ 3 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡರು. ರೈತರ ಶಾಪ ಕಾಂಗ್ರೆಸ್ಗೆ ತಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ತುಮಕೂರಿನಲ್ಲಿ ಆಯೋಜಿಸಿದ್ದ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ಬಗ್ಗೆ ಯೋಚನೆ ಮಾಡಿದ ಸಿದ್ದರಾಮಯ್ಯ, ರೈತರ ಬದುಕು ಹಸನು ಮಾಡುವ ಬಗೆ ಯೋಚನೆ ಮಾಡಲಿಲ್ಲ. ರೈತರ ಶಾಪ ಕಾಂಗ್ರೆಸ್ಗೆ ತಟ್ಟಿದೆ. ಹಾಗಾಗಿ ಅನೇಕ ನಾಯಕರು ಕಾಂಗ್ರೆಸ್ ತೊರೆದಿದ್ದರು. ಅತಿ ಹೆಚ್ಚು ಗೋ ಹತ್ಯೆ ನಡೆದಿದ್ದು ಸಿದ್ದರಾಮಯ್ಯ ಕಾಲದಲ್ಲಿ ಎಂದು ವಾಗ್ದಾಳಿ ನಡೆಸಿದರು.
ಇನ್ನು, ಆರ್ಎಸ್ಎಸ್ ಬಗ್ಗೆ ಸಿದ್ದರಾಮಯ್ಯ ಮಾತಾಡುತ್ತಾರೆ. ಆದರೆ, ಕಾಂಗ್ರೆಸ್ ದೇಶವನ್ನು ಮಾರಾಟ ಮಾಡಿದೆ. ಈ ದೇಶವನ್ನು ರಕ್ಷಣೆ ಮಾಡಿದ್ದು ಆರ್ಎಸ್ಎಸ್. ಸೋನಿಯಾ ಗಾಂಧಿ, ಡಿಕೆ ಶಿವಕುಮಾರ್ ಬೇಲ್ನಲಿ ಇದ್ದಾರೆ. ಕಳ್ಳರ ಸಂಘ ನಿಮ್ಮದು. ಆರ್ಎಸ್ಎಸ್ ಪದ ಹೇಳುವ ಯೋಗ್ಯತೆ ನಿಮಗೆ ಇಲ್ಲ. ನೀವು ಸಮಾಜವಾದಿ ಅಲ್ಲ, ಮಜಾವಾದಿ ಎಂದು ಕಿಡಿಕಾರಿದರು.

ಆರ್ಎಸ್ಎಸ್ ರಾಜಕಾರಣ ಮಾಡಲ್ಲ, ರಾಷ್ಟ್ರ ಕಾರಣ ಮಾಡುತ್ತೆ. ನೀವು ಡೋಂಗಿ ರಾಜಕಾರಣಿ. ಸಿದ್ದರಾಮಯ್ಯನಿಂದ ಕಾಂಗ್ರೆಸ್ ಮುಕ್ತ ಕರ್ನಾಟಕ ಆಗುತ್ತಿದೆ. ಜಿ.ಪರಮೇಶ್ವರ ಅವರನ್ನು ಸಿಎಂ ಮಾಡಲು ಬಿಡಲಿಲ್ಲ. ಡಿಕೆ ಶಿವಕುಮಾರ್ ಅವರ ರಾಜಕೀಯ ಮುಗಿಸಲು ಹೋಗಿದ್ದೀರಾ. ಮತ್ತೆ ಸಿಎಂ ಆಗಲು ಟವೆಲ್ ಹಾಕಿದ್ದೀರಿ. ನೀವೆಂದು ಮತ್ತೇ ಸಿಎಂ ಆಗಲ್ಲ. ಹೆಸರು ರಾಮಂದು ಮುಖ ರಾವಣಂದು. ಕುರುಬರ ಸಮುದಾಯಕ್ಕೆ ಅನ್ಯಾಯ ಮಾಡಿದ್ರಿ ಎಂದು ವಾಗ್ದಾಳಿ ನಡೆಸಿದರು.






