• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತದಲ್ಲಿ 2 ಲಕ್ಷಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ಪತ್ತೆ; ಗೊಂದಲದಲ್ಲಿ ಜನತೆ

ಫೈಝ್ by ಫೈಝ್
April 21, 2021
in ದೇಶ
0
ಭಾರತದಲ್ಲಿ 2 ಲಕ್ಷಕ್ಕೂ ಅಧಿಕ ಹೊಸ ಕೋವಿಡ್ ಪ್ರಕರಣಗಳು ಪತ್ತೆ; ಗೊಂದಲದಲ್ಲಿ ಜನತೆ
Share on WhatsAppShare on FacebookShare on Telegram

ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿದ ಪ್ರಕಟಣೆ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,00,739 ಹೊಸ ಕರೋನಾ  ಪ್ರಕರಣಗಳು ದಾಖಲಾಗಿದ್ದು, ಇದು ಈವರೆಗಿನ ದಾಖಲೆಯಾಗಿದೆ. 1,038 ಹೊಸ ಮರಣ ವರದಿಯಾಗಿದ್ದು, ಒಟ್ಟು 1,73,123  ಮಂದಿ ಕರೋನಾ ಸಂಬಂಧಿಸಿ ಮೃತಪಟ್ಟಿದ್ದಾರೆ.

ADVERTISEMENT

ದೇಶದಲ್ಲಿ ಇದುವರೆಗೂ 1.41 ಕೋಟಿಗೂ ಅಧಿಕ ಮಂದಿ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ. 1,24,29,564 ಮಂದಿ ಇದುವರೆಗೂ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರ ಒಂದರಲ್ಲೇ ಸರಿ ಸುಮಾರು 60,000 ಹೊಸ ಪ್ರಕರಣಗಳು ದಾಖಲಾಗಿದ್ದು, ದೆಹಲಿಯಲ್ಲಿ 17,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕರ್ನಾಟಕದಲ್ಲಿ 11,265 ಹೊಸ ಪ್ರಕರಣಗಳು ದಾಖ ಲಾಗಿವೆ.

ಕರ್ನಾಟಕದಲ್ಲಿ 11,265 ಹೊಸ ಪ್ರಕರಣಗಳು ದಾಖಲು

ಕಳೆದ 24 ಗಂಟೆಗಳಲ್ಲಿ 11,265 ಹೊಸ ಪ್ರಕರಣಗಳೊಂದಿಗೆ ಕರ್ನಾಟಕವು ಈ ವರ್ಷ COVID-19 ಪ್ರಕರಣಗಳಲ್ಲಿ ಅತಿ ಹೆಚ್ಚು ಏಕದಿನ ಏರಿಕೆ ದಾಖಲಿಸಿದೆ, ಇದು ಒಟ್ಟಾರೆ ಪ್ರಕರಣಗಳ ಸಂಖ್ಯೆ 10.94 ಲಕ್ಷಕ್ಕೂ ಹೆಚ್ಚಾಗಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಹಾಕುವ ಕುರಿತು ಊಹಾಪೋಹಗಳು ಹರಿದಾಡಿದ್ದು, ಲಾಕ್ ಡೌನ್ ಮಾಡುವ ಸಾಧ್ಯತೆಯನ್ನು ರಾಜ್ಯ ಸರ್ಕಾರ ತಳ್ಳಿಹಾಕಿದೆ. ಬದಲಾಗಿ, ರಾಜಧಾನಿ ಬೆಂಗಳೂರು ಸೇರಿದಂತೆ ಏಳು ಜಿಲ್ಲಾ ಕೇಂದ್ರಗಳಲ್ಲಿ ಏಪ್ರಿಲ್ 20 ರವರೆಗೆ ರಾತ್ರಿ ಕರ್ಫ್ಯೂ ಆದೇಶಿಸಿದೆ.

ವಲಸೆ ಕಾರ್ಮಿಕರ ಆತಂಕ

ಕರೋನಾ ನಿಯಂತ್ರಣಕ್ಕೆ ಮಹಾರಾಷ್ಟ್ರ, ದೆಹಲಿ, ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳು ಹಲವು ಹಂತದ ನಿರ್ಬಂಧ ವಿಧಿಸಲು ತೀರ್ಮಾನಿಸಿದ್ದು, ಇದು ದಿನಗೂಲಿ ಹಾಗೂ ವಲಸೆ ಕಾರ್ಮಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ವರದಿಗಳ ಪ್ರಕಾರ, ಈ ರಾಜ್ಯಗಳಲ್ಲಿ ನೆಲೆಸಿರುವ ಕಾರ್ಮಿಕರು ತಂತಮ್ಮ ತಾಯ್ನಾಡಿಗೆ ಮರಳಲು ಈಗಾಗಲೇ ಸಾಕಷ್ಟು ತಯಾರಿ ಮಾಡಿಕೊಂಡಿದ್ದು, ರೈಲ್ವೇ ನಿಲ್ದಾಣ, ಬಸ್‌ ನಿಲ್ದಾಣಗಳಲ್ಲಿ ಜನಸಂದಣಿ ಹೆಚ್ಚಾಗಿದೆ.

ಔಷಧ ವಸ್ತುಗಳ ಕೊರತೆ

ಈ ನಡುವೆ, ದೇಶದಲ್ಲಿ ಕರೋನಾ ಲಸಿಕೆಗಳ ಅಭಾವ ಎದುರಾಗಿದ್ದು, ವಿದೇಶಗಳಲ್ಲಿ ಅನುಮೋದನೆ ಪಡೆದ ಕರೋನಾ ಲಸಿಕೆಗಳ ತುರ್ತುಬಳಕೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಅಲ್ಲದೆ, ಕರೋನಾ ಲಸಿಕೆಗಳ ಕೊರತೆ ನಡುವೆ, ಕರೋನಾ ಸೋಂಕಿತರ ಚಿಕಿತ್ಸೆಗೆ ಬಳಕೆಯಾಗುವ ರೆಮಿಡ್ಸ್‌ವಿರ್‌ ಔಷಧಗಳ ಕೊರತೆಯೂ ಎದುರಾಗಿದ್ದು, ಈ ಔಷಧಗಳ ರಫ್ತನ್ನು ಕೇಂದ್ರ ತಾತ್ಕಾಲಿಕ ತಡೆಹಿಡಿದಿದೆ.

ರಾಜಸ್ಥಾನದಲ್ಲಿ ನೈಟ್‌ಕರ್ಫ್ಯೂ

ರಾಜಸ್ಥಾನ ರಾಜ್ಯ ಸರ್ಕಾರ ರಾಜ್ಯಾದ್ಯಂತ ನೈಟ್‌ ಕರ್ಫ್ಯೂ ಹೇರಿದ್ದು, ಸಂಜೆ 6 ರಿಂದ ಬೆಳಗ್ಗೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ರಾಜಧಾನಿ ಜೈಪುರಿನಲ್ಲಿ 1,325 ಹೊಸ ಪ್ರಕರಣ ಸೇರಿದಂತೆ, ರಾಜ್ಯಾದ್ಯಂತ ಒಟ್ಟು 6,200 ಪ್ರಕರಣಗಳು ದಾಖಲಾಗಿವೆ.

ಯಾವುದೇ ಕಾರಣಕ್ಕೂ ಕುಂಭಮೇಳ ಮೊಟಕುಗೊಳಿಸುವುದಿಲ್ಲ

ದೇಶಾದ್ಯಂತ ಕೋವಿಡ್ ಎರಡನೇ ಅಲೆ ವಿಪರೀತವಾಗಿದ್ದರೂ, ಕುಂಭಮೇಳದಲ್ಲಿ ಲಕ್ಷಾಂತರ ಜನ ಸೇರಿ ಧಾರ್ಮಿಕ ವಿಧಿ ಆಚರಣೆ ನಡೆಸುತ್ತಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಕುಂಭಮೇಳವನ್ನು ಎರಡುವಾರಗಳ ಮುಂಚಿತವಾಗಿಯೇ ಸ್ಥಗಿತಗೊಳಿಸುವುದಾಗಿ ವರದಿಯಾಗಿದ್ದರೂ, ಅಧಿಕಾರಿಗಳು ಇವನ್ನು ತಳ್ಳಿ ಹಾಕಿದ್ದು, ನಿಗದಿತ ದಿನಾಂಕದವರೆಗೆ ಕುಂಭಮೇಳ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

ಬುಧವಾರದಂದು ಕುಂಭಮೇಳವನ್ನು ಅಂತ್ಯಗೊಳಿಸುವುದಾಗಿ ಮೂಲಗಳು ತಿಳಿಸಿವೆಯೆಂದು ಎನ್‌ಡಿಟಿವಿ ವರದಿ ಮಾಡಿತ್ತು.

Previous Post

ಜೀವ-ಜೀವನದ ನಡುವೆ ಜನರು ಸಿಲುಕಿಕೊಂಡಿದ್ದಾರೆ, ಲಾಕ್‌ಡೌನ್ ಬೇಡ: ಡಿ.ಕೆ ಶಿವಕುಮಾರ್

Next Post

ಮೂರ್ಖತನಕ್ಕೆ ಅಂತ್ಯ ಇಲ್ಲ: ಕರೋನಾ ನಡುವೆ ನಡೆದ ಕುಂಭಮೇಳ ಕುರಿತು RGV ಟೀಕೆ

Related Posts

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?
ದೇಶ

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

by ಪ್ರತಿಧ್ವನಿ
July 5, 2025
0

ಪ್ರಶ್ನೆಯೊಂದಿಗೆ ಕನ್ನಡದ ಎಎಂಆರ್‌ ರಮೇಶ್ ರಾಜೀವ್‌ ಗಾಂಧಿ ಹತ್ಯೆ ಕುರಿತು ಚಿತ್ರ/ ವೆಬ್‌ ಸೀರೀಸ್‌ ಮಾಡಲು ಕಳೆದ ಮೂವತ್ತು ವರ್ಷಗಳಿಂದ ಕನಸುತ್ತಿರುವ ಕನ್ನಡದ ಎಎಂಆರ್‌ ರಮೇಶ್‌ ಈಗ...

Read moreDetails

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post
ಮೂರ್ಖತನಕ್ಕೆ ಅಂತ್ಯ ಇಲ್ಲ: ಕರೋನಾ ನಡುವೆ ನಡೆದ ಕುಂಭಮೇಳ ಕುರಿತು RGV ಟೀಕೆ

ಮೂರ್ಖತನಕ್ಕೆ ಅಂತ್ಯ ಇಲ್ಲ: ಕರೋನಾ ನಡುವೆ ನಡೆದ ಕುಂಭಮೇಳ ಕುರಿತು RGV ಟೀಕೆ

Please login to join discussion

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada