ಬಾಂಗ್ಲಾದೇಶದದಲ್ಲಿ (Bangaldesh) ಹಿಂದೂಗಳ (Hindus) ಮೇಲಿನ ದೌರ್ಜನ್ಯ ನಿರಂತರವಾಗಿ ಮುಂದುವರೆದಿದೆ. ಬಾಂಗ್ಲಾದೇಶದ ದಂಗೆಯ (Bangladesh riots) ನಂತರವಂತೂ ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಇನ್ನಷ್ಟು ಹೆಚ್ಚಾಗಿದೆ.
ಇತ್ತೀಚೆಗೆ ಸರ್ಕಾರದ ವಿರುದ್ಧ ಪ್ರತಿಭಟನೆಯ ವೇಳೆ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗಿತ್ತು ಮತ್ತು ಹಿಂದೂ ಸನ್ಯಾಸಿ ಚಿನ್ಮಯಿ ಕೃಷ್ಣ ದಾಸ್ ಅವರ ಬಂಧನದ ನಂತರ, ಇದೀಗ ಹಿಂದೂ ಕುಟುಂಬದ 4 ಜನರನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ.

ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ನಗರದಲ್ಲಿ ಈ ಪ್ರಕರಣ ನಡೆದಿದ್ದು, 32 ವರ್ಷದ ಜಾನಿ ಬಿಸ್ವಾಸ್, ಇವರ ಗರ್ಭಿಣಿ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಪಾಪಿಗಳು ಹತ್ಯೆ ಮಾಡಿದ್ದಾರೆ. ಆರಂಭದಲ್ಲಿ ಪೊಲೀಸರು ಇದನ್ನು ಆತ್ಮಹತ್ಯೆ ಎಂದಿದ್ದರು.ಆದರೆ ನಂತರ, ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಅರಿತು, ಸದ್ಯ ಪ್ರಕರಣ ದಾಖಲಿಸಿದ್ದಾರೆ.