
ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಸರ್ಕಾರ ಪರಿಹಾರದ ಮೊತ್ತವನ್ನು ಐದು ಲಕ್ಷಕ್ಕೆ ಏರಿಸಿದೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ನಾಡಿನ ಜನತೆ ಎದುರಿಗೆ ಕೊಟ್ಟ ಎಲ್ಲಾ ಭರವಸೆಗಳನ್ನೂ ಹಂತ ಹಂತವಾಗಿ ಈಡೇರಿಸುತ್ತಿದ್ದೇವೆ.ನಮ್ಮ ಜನರ ಆರ್ಥಿಕ ಶಕ್ತಿ ಮತ್ತು ಕೊಳ್ಳುವ ಸಮರ್ಥ್ಯವನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡುವುದರ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ ಎಂದರು.

2014-2018 ರಲ್ಲಿ ನರೇಂದ್ರ ಮೋದಿಯವರು ಕೊಟ್ಟ ಭರವಸೆಗಳನ್ನು ನೆನಪಿಸಿಕೊಳ್ಳಿ. ಅವುಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ ನೋಡಿ. ಮೋದಿಯವರು ನಿಮಗೆ ಈ ಮಟ್ಟದ ಮೋಸ ಮಾಡಿದ್ದಾರಲ್ಲಾ ಇದನ್ನು ಪ್ರಶ್ನಿಸಬೇಕಿದೆ ಎಂದರು.
ಮೋದಿ ಅಚ್ಚೆ ದಿನ್ ತರಲಿಲ್ಲ, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ, ವಿದೇಶದಿಂದ ಕಪ್ಪು ಹಣ ತರಲಿಲ್ಲ, ನಿಮ್ಮ ಖಾತೆಗೆ 15 ಲಕ್ಷ ಹಾಕಲಿಲ್ಲ. ಬರೀ ಭಾಷಣದಲ್ಲೇ ಮೋದಿಯವರು ಎಲ್ಲಾ ಮುಗಿಸಿ ಹೋದರು ಎಂದು ವಿವರಿಸಿದರು.