ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಎಲ್ಲಾ ಐದು ರಾಜ್ಯಗಳಲ್ಲಿಯೂ ನಮ್ಮ ಕಾಂಗ್ರೆಸ್ ಪಕ್ಷವೇ ಸರ್ಕಾರ ರಚಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.
ಕಲಬುರ್ಗಿಯಲ್ಲಿ ಎಎನ್ಐ ಜೊತೆ ಮಾತನಾಡಿದ ಖರ್ಗೆ, ಐದು ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ನ ಸಿದ್ಧತೆಗಳು ಉತ್ತಮವಾಗಿ ನಡೆಯುತ್ತಿವೆ. ನಾವು ಎಲ್ಲಾ ರಾಜ್ಯಗಳಲ್ಲಿ ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ಮುಖ್ಯವಾಗಿ ಹಣದುಬ್ಬರ ಮತ್ತು ನಿರುದ್ಯೋಗದಿಂದಾಗಿ ಬಿಜೆಪಿಗೆ ಆಡಳಿತ ವಿರೋಧಿ ಅಲೆ ಎದುರಾಗಿದೆ ಎಂದು ಹೇಳಿದ್ದಾರೆ.
ನವೆಂಬರ್ನಲ್ಲಿ ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ಮಿಜೋರಾಂ ಸೇರಿ ಎಲ್ಲಾ ಐದು ರಾಜ್ಯಗಳಲ್ಲಿ ಒಂದು ಮತ್ತು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಛತ್ತೀಸ್ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿವೆ ಮತ್ತು ಅಲ್ಲಿನ ಜನರು ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ.
![ಮಲ್ಲಿಕಾರ್ಜುನ ಖರ್ಗೆ](https://pratidhvani.com/wp-content/uploads/2023/08/karrrage.jpg)
ನವೆಂಬರ್ 7ರಂದು ಮಿಜೋರಾಂ, ನವೆಂಬರ್ 7 ಮತ್ತು ನವೆಂಬರ್ 17ರಂದು ಛತ್ತೀಸ್ಗಢ, ನವೆಂಬರ್ 17ರಂದು ಮಧ್ಯಪ್ರದೇಶ, ನವೆಂಬರ್ 25ರಂದು ರಾಜಸ್ಥಾನ ಮತ್ತು ನವೆಂಬರ್ 30ರಂದು ತೆಲಂಗಾಣದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಎಲ್ಲಾ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.