• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 6,000 ಮಕ್ಕಳು ಶಿಕ್ಷಣದಿಂದ ವಂಚಿತರು!

Any Mind by Any Mind
November 3, 2021
in ಕರ್ನಾಟಕ
0
ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 6,000 ಮಕ್ಕಳು ಶಿಕ್ಷಣದಿಂದ ವಂಚಿತರು!
Share on WhatsAppShare on FacebookShare on Telegram

ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ಶಾಲೆಗೆ ತೆರಳುವ ಮಕ್ಕಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡಿದ್ದು, ಮಕ್ಕಳ ಶಿಕ್ಷಣದಲ್ಲಿಯೂ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದ 34,000 ಮಕ್ಕಳು ಶಾಲೆಯಿಂದ ಹೊರಗುಳಿದಿರುವ ವರದಿ ಬಹಿರಂಗವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲೇ 6,000 ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದಾಗಿ ಸಮೀಕ್ಷೆ ತಿಳಿಸಿದೆ.

ADVERTISEMENT

ಭಾರತದ ಐಟಿ ರಾಜಧಾನಿಯಾಗಿರುವ ಬೆಂಗಳೂರಿನಲ್ಲಿಯೇ ಹೆಚ್ಚಿನ ಮಕ್ಕಳು ಶಾಲೆಗೆ ಹೋಗದೇ ಇರುವುದು ತಿಳಿದುಬಂದಿದೆ. ಇದಕ್ಕಾಗಿಯೇ ಮನೆಮೆನೆಗೆ ತೆರಳಿ ಸಮೀಕ್ಷೆ ನಡೆಸಿದಾಗ ಅಂತಿಮ ವರದಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)  ವ್ಯಾಪ್ತಿಯಲ್ಲೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ವರದಿಯಾಗಿದೆ.

ಈ ಸಮೀಕ್ಷೆಯು ಮಕ್ಕಳು ಶಿಕ್ಷಣದಿಂದ ವಂಚಿತರಾಗಲು ಪ್ರಮುಖ ಕಾರಣಗಳನ್ನು ಬಹಿರಂಗಪಡಿಸಿದ್ದು, ಅವುಗಳಲ್ಲಿ ಪ್ರಮುಖವಾಗಿ, ಆರೋಗ್ಯ ಸಮಸ್ಯೆಗಳು, ಆರ್ಥಿಕ ಬಿಕ್ಕಟ್ಟು ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಮಕ್ಕಳಿಗೆ ಶಾಲಾ ಮೆಟ್ಟಿಲೇರಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ.

ಸರ್ವ ಶಿಕ್ಷಣ ಅಭಿಯಾನದಡಿ ಸಮಗ್ರ ಶಿಕ್ಷಣ ಕರ್ನಾಟಕ (ಎಸ್‌ಎಸ್‌ಕೆ) ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದಲ್ಲಿ 34,411 ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ವರದಿ ಮಾಡಿದೆ. ಇದರಲ್ಲಿ ದಾಖಲೇ ಆಗದವರು, ಶಾಲೆ ಬಿಟ್ಟ ಮಕ್ಕಳು ಕೂಡ ಸೇರಿದ್ದಾರೆ. ಇವರಲ್ಲಿ 6,608 ಮಂದಿ ಬಿಬಿಎಂಪಿ ವ್ಯಾಪ್ತಿಯವರೇ ಆಗಿದ್ದಾರೆ.

ಸಮಗ್ರ ಶಿಕ್ಷಣ ಕರ್ನಾಟಕದ ಸಮೀಕ್ಷೆಯ ವಿವರಗಳನ್ನು ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಾಗಿದೆ. ತಾಲ್ಲೂಕು ಮತ್ತು ಬ್ಲಾಕ್ ಮಟ್ಟದ ಅಧಿಕಾರಿಗಳೊಂದಿಗೆ ಅಂಕಿ ಅಂಶಗಳನ್ನು ಹಂಚಿಕೊಳ್ಳಲು ಅಧಿಕಾರಿಗಳನ್ನು ಕೇಳಲಾಗಿದೆ. ಈ ಅಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳ ಪೋಷಕರನ್ನು ಭೇಟಿಯಾಗಿ ಅವರು ಶಾಲೆಗಳಿಂದ ದೂರವಿರಲು ಕಾರಣಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವರದಿಯನ್ನು ಸಲ್ಲಿಸಬೇಕಾಗಿದೆ.

ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಶಿಕ್ಷಣವಂಚಿತರು!

ಬಿಬಿಎಂಪಿ ವ್ಯಾಪ್ತಿಯಲ್ಲಿ  14 ರಿಂದ 16 ವಯಸ್ಸಿನೊಳಗಿನ 4,465 ಮಕ್ಕಳು ಶಾಲೆಗೆ ಹೋಗುತ್ತಿಲ್ಲ.  6 ರಿಂದ 14 ವಯಸ್ಸಿನೊಳಗಿನ 2,143 ಮಕ್ಕಳು ಶಾಲೆಗಳಿಂದ ಹೊರಗುಳಿದ್ದಿದ್ದಾರೆ. ಬೀದರ್ ಜಿಲ್ಲೆ 2,609 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಉಡುಪಿ ಜಿಲ್ಲೆಯಲ್ಲಿ ಕೇವಲ 172 ಮಂದಿ ಮಕ್ಕಳಷ್ಟೇ ಶಿಕ್ಷಣದಿಂದ ವಂಚಿತರಾಗಿದ್ದಾರೆ. 

ಸಾಂಕ್ರಾಮಿಕ ರೋಗದ ಸಮಯದಲ್ಲಿ ಮನೆಯ ಹಿರಿಯ ಮಕ್ಕಳು ಮನೆಯವರನ್ನು ಬಿಟ್ಟು ತಮ್ಮದೇ ಉದ್ಯೋಗಗಳ ಕಡೆಗೆ ಮುಖ ಮಾಡಿದ್ದಾರೆ. 31 ಜಿಲ್ಲೆಗಳಲ್ಲಿ 21,300 ರಷ್ಟು ಮಕ್ಕಳು ವಿವಿಧ ಕಾರಣಗಳಿಂದ ಶಾಲೆ ತೊರೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇತ್ತೀಚೆಗೆ, ಕರ್ನಾಟಕ ಹೈಕೋರ್ಟ್ ಹೆಚ್ಚಿನ ಸಂಖ್ಯೆಯ ಮಕ್ಕಳು ಶಿಕ್ಷಣದಿಂದ ವಂಚಿತರಾದವರನ್ನು ಗಮನಿಸಿ, ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿತ್ತು.

Tags: BBMPCovid 19Government SchoolsKannada SchoolsPrivate SchoolsSchoolsಕರೋನಾಕೋವಿಡ್-19
Previous Post

ಸಮಕಾಲೀನ ಸವಾಲುಗಳ ನಡುವೆ ಸಮಾನತೆಯೆಡೆಗೆ

Next Post

ಎಲ್ಲಾ ಕೇಸ್‌ಗಳನ್ನು ಅಟ್ರಾಸಿಟಿ ಸೆಕ್ಷನ್ ಅಡಿ ದಾಖಲಿಸಬೇಡಿ: ಹೈಕೋರ್ಟ್

Related Posts

Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ
Top Story

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

by ಪ್ರತಿಧ್ವನಿ
June 13, 2026
0

ಬೆಂಗಳೂರು: ರಾಜ್ಯದ ಟಿಯರ್-2 ಹಾಗೂ ಟಿಯರ್-3 ನಗರಗಳು ಮತ್ತು ಪಟ್ಟಣಗಳ ಯುವಕರಿಗೆ ಉದಯೋನ್ಮುಖ ತಂತ್ರಜ್ಞಾನಗಳ ಪ್ರವೇಶವನ್ನು ವಿಸ್ತರಿಸುವ ಹಾಗೂ ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಕರ್ನಾಟಕ ಸರ್ಕಾರವು...

Read moreDetails
ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

June 13, 2026
Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

June 13, 2026
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
Next Post
ಶಾಲೆಗಳಲ್ಲಿ ಕನ್ನಡ ಕಡ್ಡಾಯ ಪ್ರಶ್ನಿಸಿ 4ನೇ ತರಗತಿ ವಿದ್ಯಾರ್ಥಿ ಮನವಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಎಲ್ಲಾ ಕೇಸ್‌ಗಳನ್ನು ಅಟ್ರಾಸಿಟಿ ಸೆಕ್ಷನ್ ಅಡಿ ದಾಖಲಿಸಬೇಡಿ: ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada