• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜನರ ಆಸ್ತಿ ದಾಖಲೆಗಳ ರಕ್ಷಣೆಗೆ ಸರ್ಕಾರದಿಂದ 6ನೇ ಗ್ಯಾರಂಟಿ

ಪ್ರತಿಧ್ವನಿ by ಪ್ರತಿಧ್ವನಿ
October 15, 2025
in Top Story, ಕರ್ನಾಟಕ, ರಾಜಕೀಯ, ವಿಶೇಷ
0
ಜನರ ಆಸ್ತಿ ದಾಖಲೆಗಳ ರಕ್ಷಣೆಗೆ ಸರ್ಕಾರದಿಂದ 6ನೇ ಗ್ಯಾರಂಟಿ
Share on WhatsAppShare on FacebookShare on Telegram

ನವೆಂಬರ್ 1 ರಿಂದ 100 ದಿನಗಳ ಕಾಲ ‘ಎ‌’ ಖಾತಾ ಅಭಿಯಾನ: ಡಿಸಿಎಂ ಡಿ.ಕೆ. ಶಿವಕುಮಾರ್

ADVERTISEMENT

ದೀಪಾವಳಿ ಕೊಡುಗೆ, ಬೆಂಗಳೂರು ನಾಗರಿಕರ ಬದುಕಿನಲ್ಲಿ ಕ್ರಾಂತಿಕಾರಕ ಬದಲಾವಣೆ; ಆಸ್ತಿ ಶುದ್ಧೀಕರಣಕ್ಕೆ ನಾಂದಿ

ಜನರ ಆಸ್ತಿ ದಾಖಲೆಗಳ ರಕ್ಷಣೆಗೆ ಸರ್ಕಾರದಿಂದ 6ನೇ ಗ್ಯಾರಂಟಿ

ಬೆಂಗಳೂರಿನಲ್ಲಿ ಮೊದಲ ಬಾರಿಗೆ ಏಕರೂಪ ಖಾತಾ ವ್ಯವಸ್ಥೆ ಜಾರಿ

ಬೆಂಗಳೂರು, ಅ.15:

Satish Jarkiholi Reacts On CM Post, Says He Is Out Of The Race | ಸಿಎಂ ರೇಸ್​ನಿಂದ ನಾನು ಹೊರಗೆ

“ನವೆಂಬರ್ 1 ನೇ‌ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ.‌ ಆಸ್ತಿ ಶುದ್ಧೀಕರಣಕ್ಕೆ ನಾಂದಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಅವರು ಹೇಳಿದರು.

ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ರವರು ವಿಧಾನಸೌಧದಲ್ಲಿ ಬುಧವಾರ ಚಾಲನೆ ನೀಡಿ, ಮಾತನಾಡಿದರು.

“2 ಸಾವಿರ ಚ.ಮೀ. ವಿಸ್ತೀರ್ಣದ ಆಸ್ತಿಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರುತ್ತವೆ. 2 ಸಾವಿರ ಚದರ ಮೀಟರ್ ಗಿಂತ ಹೆಚ್ಚು ವಿಸ್ತೀರ್ಣದ ಆಸ್ತಿಗಳಿಗೆ ಕ್ಯಾಡ್ ಡ್ರಾಯಿಂಗ್ ಸೇರಿದಂತೆ ಇತರೇ ದಾಖಲೆಗಳನ್ನು ನೀಡಬೇಕಾಗುತ್ತದೆ. ನವೆಂಬರ್ 1 ರಿಂದ ಪ್ರಾರಂಭವಾಗುವ ಈ ಅಭಿಯಾನ 100 ದಿನಗಳ ನಡೆಯಲಿದೆ. 500 ರೂಪಾಯಿ ಅರ್ಜಿ ಶುಲ್ಕವನ್ನು ಕಟ್ಟಿ ಆನ್ ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡರೆ ಪಾಲಿಕೆ ಅಧಿಕಾರಿಗಳೇ ಮನೆ ಬಾಗಿಲಿಗೆ ಬಂದು ಸೇವೆ ನೀಡುತ್ತಾರೆ” ಎಂದು ಮಾಹಿತಿ ನೀಡಿದರು.

“ಆಸ್ತಿ ಮಾಲೀಕರು ಸದರಿ ಆಸ್ತಿಯ ಗೈಡೆನ್ಸ್ ದರದ ಶೇ.‌5 ರಷ್ಟನ್ನು ಶುಲ್ಕವಾಗಿ ಸರ್ಕಾರಕ್ಕೆ ಪಾವತಿಸಬೇಕಾಗುತ್ತದೆ. ಇಂತಹ ಬಡಾವಣೆಗಳಿಗೆ ವಿದ್ಯುತ್, ನೀರು, ಒಳಚರಂಡಿ ಸೇರಿದಂತೆ ಇತರೇ ಮೂಲಸೌಕರ್ಯ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ. ಈ ದೃಷ್ಟಿಯಿಂದ ಗೈಡೆನ್ಸ್ ದರದ ಶೇ.5 ರಷ್ಟು ‌ಮಾತ್ರ ಶುಲ್ಕ ವಿಧಿಸಲಾಗಿದೆ.‌ 100 ದಿನದ ನಂತರ ಹೆಚ್ಚುವರಿ ಶುಲ್ಕ ನಿಗದಿ ಮಾಡಲಾಗುತ್ತದೆ.‌ ಹೆಚ್ಚುವರಿ ಶುಲ್ಕದ ಪ್ರಮಾಣ ಆನಂತರ ತಿಳಿಸಲಾಗುವುದು” ಎಂದರು.

“ಪ್ರತಿ ಪಾಲಿಕೆಯು ಎರಡೆರಡು ಸ್ಥಳಗಳಲ್ಲಿ ‘ಹೆಲ್ಪ್ ಡೆಸ್ಕ್’ (ಕಚೇರಿ) ಗಳನ್ನು ತೆಗೆಯಲಾಗುವುದು. ಬೆಂಗಳೂರು ಒನ್ ಕೇಂದ್ರದಲ್ಲಿಯೂ ನೋಂದಣಿಯಾಗಲು ಅವಕಾಶ ಕಲ್ಪಿಸಲಾಗುವುದು. ಸಾರ್ವಜನಿಕರು ಯಾರೂ ಸಹ ಒಂದೇ ಒಂದು ರೂಪಾಯಿ ಲಂಚ ನೀಡುವಂತಿಲ್ಲ” ಎಂದರು.

“ಓಸಿ, ಸಿಸಿಗೂ ಇದಕ್ಕೂ ಸಂಬಂಧವಿಲ್ಲ. ಬಿ ಖಾತಾ ಮಾಲೀಕರಿಗೆ ಕಟ್ಟಡ ಯೋಜನೆ ಅನುಮೋದನೆ ಸಧ್ಯಕ್ಕೆ ದೊರೆಯುವುದಿಲ್ಲ. ಬಿ ಖಾತಾ ಬಹುಮಹಡಿ ಕಟ್ಟಡಗಳು ಎ‌ ಖಾತೆಗಳಾಗಿ ಬದಲಾವಣೆ ಆಗುವುದಿಲ್ಲ. ಮೊದಲು ಭೂಮಿಗೆ ನಾವು ಖಾತೆ ನೀಡುತ್ತೇವೆ. ಆ ಜಾಗದಲ್ಲಿರುವ ಕಟ್ಟಡ ಕಾನೂನಿನ ವ್ಯಾಪ್ತಿಯಲ್ಲಿ ಇದೆಯೇ ಇಲ್ಲವೇ ಎಂದು ಮೊದಲು ನೋಡುತ್ತೇವೆ. ಆನಂತರ ಕಟ್ಟಡ ಅದಕ್ಕೆ ಏನು ಶುಲ್ಕ ಎಂದು ನಿಗಧಿ ಮಾಡುತ್ತೇವೆ. ಅನಿಯಂತ್ರಿತ, ಅನಧಿಕೃತ‌ ಮಾರಾಟ ಮತ್ತು ಅಕ್ರಮ ಆಸ್ತಿಗಳಿಗೆ ಮುಂದಕ್ಕೆ ಅವಕಾಶ ದೊರೆಯದಂತೆ ಮಾಡುವುದು, ನಕಲಿ ಖಾತೆಗಳನ್ನು ಸೃಷ್ಟಿಸಿ ಮೋಸ ಮಾಡುವುದನ್ನು ತಪ್ಪಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದರು.

“ಅರ್ಜಿ ಹಾಕಿದ ನಂತರ ಪಾಲಿಕೆ ಅಧಿಕಾರಿಗಳು ಪ್ರತಿ ಆಸ್ತಿಯ ಮುಂದೆ ಮಾಲೀಕನ ನಿಲ್ಲಿಸಿ ವಿಡಿಯೋ, ಫೋಟೊ ದಾಖಲೀಕರಣ ಮಾಡಿ ಅಪ್‌ ಲೋಡ್ ಮಾಡುತ್ತಾರೆ. ಇದನ್ನು ಪರಿಶೀಲಿಸಲು ಹಾಗೂ ತಕರಾರುಗಳನ್ನು ಸಲ್ಲಿಸಲು ಸಹ ಅವಕಾಶ ನೀಡಲಾಗಿದೆ. ಸರ್ಕಾರಿ ಜಾಗ, ಪಿಟಿಸಿಎಲ್ ಪ್ರಕರಣಗಳ ಆಸ್ತಿಗಳು, 94 ಸಿ ಸೇರಿದಂತೆ ಇತರೇ ಪ್ರಕರಣಗಳ ಜಾಗ ಇಲ್ಲಿ ಒಳಪಡುವುದಿಲ್ಲ” ಎಂದರು.

Dr GParameshwar : ಸಚಿವ ಪ್ರಿಯಾಂಕ್‌ ಖರ್ಗೆ ಜೀವ ಬೆದರಿಕೆ ಕರೆ: ಗೃಹ ಸಚಿವ ಹೇಳಿದ್ದೇನು..! #drgparameshwar

ಬೆಂಗಳೂರಿನಲ್ಲಿ ಮೊದಲ ಬಾರಿಗೆ ಏಕರೂಪ ಖಾತಾ ವ್ಯವಸ್ಥೆ ಜಾರಿ:

“ಬೆಂಗಳೂರಿನಲ್ಲಿ ಮೊದಲ ಬಾರಿಗೆ ಏಕರೂಪ ಖಾತಾ ವ್ಯವಸ್ಥೆ ಜಾರಿಗೆ ತರಲಾಗಿದೆ. ಎಲ್ಲರಿಗೂ ಒಂದೇ ರೀತಿ ಖಾತ ನೀಡಲು ಮುಂದಾಗಿದ್ದೇವೆ. ಮೊದಲು ನಾವು ಇ ಖಾತಾ ನೀಡಲು ಆರಂಭಿಸಿದೆವು. ಇಲ್ಲಿ ಎದುರಿಸಿದ ಅಡಚಣೆಗಳನ್ನು ಸರಿಪಡಿಸಿದ್ದೇವೆ. ಆಸ್ತಿಗಳ ದಾಖಲೆ ಡಿಜಿಟಲೀಕರಣ ಮಾಡಲು ಸ್ಕ್ಯಾನ್ ಮಾಡಿದ್ದೇವೆ. ಆನ್ ಲೈನ್ ಖಾತಾ ವ್ಯವಸ್ಥೆ ತಂದಿದ್ದೇವೆ. ಇದೆಲ್ಲದರ ನಂತರ ನಾವು ಈ ಖಾತಾ ಪರಿವರ್ತನೆ ಮಾಡುತ್ತಿದ್ದೇವೆ. ಕಳೆದ 50 ವರ್ಷಗಳಿಂದ ಇಂತಹ ತೀರ್ಮಾನ ಆಗಿರಲಿಲ್ಲ. ನಮ್ಮ ಸರ್ಕಾರ ಈ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ಇದು ನಮ್ಮ ಸರ್ಕಾರದ ಆರನೇ ಗ್ಯಾರಂಟಿಯಾಗಿದೆ. ನಿಮ್ಮ ಆಸ್ತಿ, ನಿಮ್ಮ ಹಕ್ಕು. ನಿಮ್ಮ ಹಕ್ಕನ್ನು ನಾವು ಸರಿಪಡಿಸುತ್ತಿದ್ದೇವೆ” ಎಂದು ತಿಳಿಸಿದರು.

“ಜಿಬಿಎ ವ್ಯಾಪ್ತಿಯಲ್ಲಿನ ಐದು ಪಾಲಿಕೆಗಳಲ್ಲಿರುವ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತಿಸುವ ಐತಿಹಾಸಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೀಪಾವಳಿ ಹಬ್ಬದ ನಂತರ ಬೆಂಗಳೂರಿನ ನಾಗರೀಕರ ಬದುಕಿನಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ನಮ್ಮ ಸರ್ಕಾರ ಮುಂದಾಗಿದೆ. ನಗರದಲ್ಲಿ 25 ಲಕ್ಷ‌‌‌ ಆಸ್ತಿಗಳಿದ್ದು, ಇದರಲ್ಲಿ 7.5 ಲಕ್ಷ‌‌ ಎ‌ ಖಾತೆಗಳು, 7.5 ಲಕ್ಷ‌ ಆಸ್ತಿಗಳು ಬಿ ಖಾತೆ ಹೊಂದಿವೆ. ಇನ್ನು 7-8 ಲಕ್ಷ‌ ಆಸ್ತಿಗಳು ಬಿ ಖಾತೆ ಪಡೆಯಲೂ ಅನುಮೋದನೆ ಪಡೆದಿಲ್ಲ. ಈ ಕಾರ್ಯಕ್ರಮದ ಮೂಲಕ ಜನರ ಆಸ್ತಿ ದಾಖಲೆಗಳನ್ನು ಕಾಪಾಡಿಕೊಳ್ಳಲು ನಮ್ಮ ಸರ್ಕಾರ 6ನೇ ಗ್ಯಾರಂಟಿ ನೀಡುತ್ತಿದೆ” ಎಂದು ತಿಳಿಸಿದರು.

ನಿವೇಶನಗಳಿಗೆ ಮಾತ್ರ ಎ ಖಾತೆ, ಕಟ್ಟಡಗಳ ಸಕ್ರಮವಿಲ್ಲ

“ಕೆಟಿಸಿಪಿ ಕಾಯ್ದೆ 61 ರ ಅಡಿಯಲ್ಲಿ ಅನುಮೋದನೆಗೊಂಡ‌ ಕಂದಾಯ ಜಮೀನಿನಲ್ಲಿ ಇರುವ ನಿವೇಶನಗಳು. ಅಂದರೆ ಈ ಭೂಮಿಯಲ್ಲಿ ಒಂದಷ್ಟು ‌ಜನರು ಭೂ ಪರಿವರ್ತನೆ ಮಾಡಿಕೊಳ್ಳದೆ ಕಟ್ಟಡಗಳನ್ನು ಕಟ್ಟಿಕೊಂಡಿದ್ದಾರೆ. ಈ ಆಸ್ತಿಗಳಿಗೆ ಬಿ ಖಾತಾ ನೀಡಲಾಗಿತ್ತು. ಇಂತಹವರಿಗೆ ಬ್ಯಾಂಕ್ ಸಾಲ ದೊರೆಯುತ್ತಿರಲಿಲ್ಲ, ಕಾನೂನು ಪ್ರಕಾರ ಕಟ್ಟಡ ನಕ್ಷೆಗೆ ಅನುಮತಿ ಸೇರಿದಂತೆ ಯಾವುದೇ ಸೌಲಭ್ಯಗಳನ್ನು ಪಡೆಯಲು ಪರದಾಡಬೇಕಿತ್ತು. ಸರ್ಕಾರದ ಈ ಕ್ರಮದಿಂದ ಜನರಿಗೆ ಈ ಪರದಾಟ ತಪ್ಪಲಿದೆ. ನಾವು ಈ ನಿವೇಶನಗಳಲ್ಲಿ ಕಟ್ಟಿರುವ ಕಟ್ಟಡಗಳನ್ನು ಸಕ್ರಮಗೊಳಿಸಲು ಈಗ ಕೈಹಾಕುತ್ತಿಲ್ಲ” ಎಂದು ಹೇಳಿದರು.

“ನಾವು ಮೊದಲನೆಯದಾಗಿ ಕಂದಾಯ ಜಮೀನಿನಲ್ಲಿ ಇರುವ ಎಲ್ಲಾ ಬಡಾವಣೆ ರಸ್ತೆಗಳನ್ನು ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಿದ್ದೇವೆ. ಏಕೆಂದರೆ ಜಮೀನಿನ ಮಾಲೀಕರು ಎರಡಕ್ಕಿಂತ ಹೆಚ್ಚು ಖರೀದಿದಾರರಿಗೆ ನಿವೇಶನ ನೋಂದಣಿ ಮಾಡಿಸಿ ದೋಖಾ ಮಾಡುತ್ತಿದ್ದರು.‌ ಇದನ್ನು ತಪ್ಪಿಸಲು ಕಳೆದ ವಿಧಾನಸಭಾ ಅಧಿವೇಶನದಲ್ಲಿಯೇ ಈ ತೀರ್ಮಾನ ‌ತೆಗೆದುಕೊಳ್ಳಲಾಯಿತು” ಎಂದರು.

“ನಗರ ಯೋಜನಾ ಪ್ರಾಧಿಕಾರವಾಗಿ ಬಿಡಿಎ ನಿರ್ವಹಣೆ ಮಾಡುತ್ತಿದ್ದ ಕೆಲಸವನ್ನು ಇನ್ನುಮುಂದೆ ಜಿಬಿಎ ನಿರ್ವಹಿಸಲಿದೆ. ಇಲ್ಲಿ ಏಕಗವಾಕ್ಷಿ ಯೋಜನೆ ತಂದಿದ್ದೇವೆ. ಆಮೂಲಕ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಿದ್ದೇವೆ. ಅಲಿನೇಷನ್ ಹಣವನ್ನು ನಾವೇ ತೆಗೆದುಕೊಂಡು ಕಂದಾಯ ಇಲಾಖೆಗೆ ಪಾವತಿ ಮಾಡುವುದು. ಆನಂತರ ನಮ್ಮ ಶುಲ್ಕವನ್ನು ಪಡೆಯುವುದು ಎಲ್ಲವೂ ಒಂದೇ ಕಡೆ ನಡೆಯುತ್ತದೆ. ಕಳೆದ 50 ವರ್ಷಗಳಿಂದ ಯಾರೂ ಮಾಡದ ಕೆಲಸವನ್ನು ಈಗ ಮಾಡಲಾಗುತ್ತಿದೆ” ಎಂದರು.

ಆಸ್ತಿ ದಾಖಲೆ ಡಿಜಿಟಲೀಕರಣಕ್ಕೆ ಮೋದಿ ಸರ್ಕಾರದಿಂದ ಪ್ರಶಸ್ತಿ:

“ನಮ್ಮ ಸರ್ಕಾರದ ಈ ಕೆಲಸವನ್ನು ನೋಡಿ ಪ್ರಧಾನಿ ನರೇಂದ್ರ ‌ಮೋದಿ ಅವರ ಕೇಂದ್ರ ಸರ್ಕಾರ ನಮ್ಮ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿದೆ. ದೇಶದಲ್ಲಿಯೇ ಯಾರೂ ಇಂತಹ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿಲ್ಲ ಎಂದು ಪ್ರಶಂಸೆ ಮಾಡಿ ಶುಭ ಹಾರೈಸಿದೆ. ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಿ ಒಳ್ಳೆ ಕೆಲಸ ಮಾಡಿದ್ದೀರಿ ಎಂದು ಪ್ರಶಸ್ತಿ ನೀಡಿದ್ದಾರೆ. ಇದಕ್ಕೆ ಶ್ರಮಿಸುತ್ತಿರುವ ಎಲ್ಲ ಅಧಿಕಾರಿಗಳಿಗೆ ಜನರು ಹಾಗೂ ಸರ್ಕಾರದ ಪರವಾಗಿ ಅಭಿನಂದಿಸುತ್ತೇನೆ” ಎಂದರು.

Satish Jarkiholi Reacts On CM Post, Says He Is Out Of The Race | ಸಿಎಂ ರೇಸ್​ನಿಂದ ನಾನು ಹೊರಗೆ

ಪ್ರಶ್ನೋತ್ತರ

ಈ ಎಲ್ಲಾ ಪ್ರಕ್ರಿಯೆ ನಡೆಸಲು ಮಾನವ ಸಂಪನ್ಮೂಲ ನಿಮ್ಮ ಬಳಿ ಇದೆಯೇ ಎಂದು ಕೇಳಿದಾಗ, “ನಾವು ಸಕಲ ಸಿದ್ಧತೆ ಮಾಡಿಕೊಂಡೇ ಈ ತೀರ್ಮಾನಕ್ಕೆ ಬಂದಿದ್ದೇವೆ. ನಾಗರೀಕರಿಗೆ ಅನುಕೂಲ ಮಾಡಿಕೊಡಬೇಕು, ನಗರದ ಆಸ್ತಿಗಳನ್ನು ಒಂದು ವ್ಯವಸ್ಥೆಯೊಳಗೆ ತರಲು ಅಧಿಕಾರಿಗಳು ಕಳೆದ ಒಂದು ವರ್ಷದಿಂದ ಹಗಲು ರಾತ್ರಿ ಈ ಯೋಜನೆ ಜಾರಿಗೆ ಶ್ರಮಿಸಿದ್ದಾರೆ” ಎಂದರು.

ಸರ್ಕಾರಿ ರಸ್ತೆ ಎಂದು ಎಷ್ಟು ರಸ್ತೆಗಳು ಘೋಷಣೆಯಾಗಿಲ್ಲ ಎಂದು ಕೇಳಿದಾಗ, “ಈ ಯೋಜನೆ ಜಾರಿ ನಂತರ ಒಂದು ಆಸ್ತಿ ಪಕ್ಕ ರಸ್ತೆ ಇದ್ದರೂ ಅದನ್ನು ಸರ್ಕಾರಿ ರಸ್ತೆ ಎಂದೇ ಪರಿಗಣಿಸಲಾಗುವುದು. ಕೆಲವರು ಗೇಟೆಡ್ ಕಮ್ಯುನಿಟಿ ಎಂದು ಮಾಡಿಕೊಂಡಿದ್ದರು. ಆಗ ರಸ್ತೆ ಜಾಗದ ಪಹಣಿ ಆ ಜಮೀನಿನ ಮಾಲೀಕ ಹೆಸರಿನಲ್ಲೇ ಇರುತ್ತಿತ್ತು. ಈಗ ಇದೆಲ್ಲವನ್ನು ಸರಿಪಡಿಸುತ್ತಿದ್ದೇವೆ” ಎಂದು ತಿಳಿಸಿದರು.

ಇದರಿಂದ ಆದಾಯ ಎಷ್ಟು ಬರಬಹುದು ಎಂದು ಕೇಳಿದಾಗ. “ಅದನ್ನು ಈಗಲೇ ಹೇಗೆ ಲೆಕ್ಕ ಹಾಕಲು ಸಾಧ್ಯ? ಮೊದಲು ಜನ ಖಾತಾ ಬದಲಾವಣೆಗೆ ಅರ್ಜಿ ಹಾಕಲಿ. ಆನಂತರ ಎಷ್ಟು ಬರಲಿದೆ ಎಂದು ಲೆಕ್ಕ ಹಾಕಬಹುದು. ಬೆಂಗಳೂರು ಪಾಲಿಕೆಗಳ ವ್ಯಾಪ್ತಿಯಲ್ಲಿ 25 ಲಕ್ಷ ಆಸ್ತಿಗಳಿವೆ. ಪಾಲಿಕೆ ವ್ಯಾಪ್ತಿಯ ಹೊರಗೆ ಶೇ.30 ರಷ್ಟು ಜಾಗ ಸೇರ್ಪಡೆಯಾಗಿದ್ದು, ಇವುಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಬೆಂಗಳೂರಿನ ಹೊರಗಿನ ಕೆಲವು ಪ್ರದೇಶಗಳನ್ನು ನನ್ನ ಇಲಾಖೆಗೆ ಸೇರಿಸಿಕೊಂಡಿದ್ದೇನೆ” ಎಂದು ತಿಳಿಸಿದರು.

ಒಬ್ಬರು ಇಬ್ಬರು ಮೂವರಿಗೆ ಖಾತಾ ಮಾಡಿದ್ದರೆ ಅಂತಹ ಪ್ರಕರಣಗಳನ್ನು ಹೇಗೆ ಬಗೆಹರಿಸುತ್ತೀರಿ ಎಂದು ಕೇಳಿದಾಗ, “ಇದಕ್ಕಾಗಿ ನಮ್ಮ ಕಂದಾಯ ಇಲಾಖೆಯಲ್ಲಿ ಐತಿಹಾಸಿಕ ಕಾನೂನು ತಂದಿದ್ದು, ಬೋಗಸ್ ಆಗಿ ನೋಂದಣಿಯಾಗಿರುವ ದಾಖಲೆಗಳನ್ನು ವಜಾಗೊಳಿಸಲು ಜಿಲ್ಲಾ ನೋಂದಣಧಿಕಾರಿಗೆ ಅಧಿಕಾರ ನೀಡಲಾಗಿದೆ. ಇದು ವಿಧಾನಸಭೆಯಲ್ಲಿ ಅನುಮೋದನನೆ ಪಡೆಯಲಾಗಿದೆ” ಎಂದು ತಿಳಿಸಿದರು.

ಸರ್ವರ್ ಸಮಸ್ಯೆ ಉಂಟಾಗಲಿದೆಯೇ ಎಂದು ಕೇಳಿದಾಗ, “ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ‌ಆದರೆ ನಾವು ಸರಿಪಡಿಸುತ್ತೇವೆ‌‌. ಐದು ಪಾಲಿಕೆಗಳು ಇರುವ ಕಾರಣಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಸಮಸ್ಯೆಯಾಗಬಾರದು ಎಂದು 10 ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ಅದು ಸಾಲದಿದ್ದರೆ ಇನ್ನೂ ಐದು ಕೇಂದ್ರಗಳನ್ನು ಸ್ಥಾಪಿಸುತ್ತೇವೆ” ಎಂದರು.

ಪಾಲಿಕೆಗಳ ಆದಾಯ ಸರ್ಕಾರಕ್ಕೆ ಸೇರಲಿದೆಯೇ ಎಂದಾಗ, “ಆಯಾಯ ಪಾಲಿಕೆಗಳ ಅದಾಯ ಅದೇ ಪಾಲಿಕೆಗಳಿಗೆ ಸೇರಲಿದೆ. ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲ. ಒಂದು ರೂಪಾಯಿಯೂ ಸರ್ಕಾರಕ್ಕೆ ಬರುವುದಿಲ್ಲ. ಭೂ ಪರಿವರ್ತನಾ ಶುಲ್ಕ ಒಂದೆರಡು ರೂಪಾಯಿ ಕಂದಾಯ ಇಲಾಖೆಗೆ ಹೋಗಬಹುದು” ಎಂದರು.

ಓಸಿ ಸಿಸಿ ವಿಚಾರವಾಗಿ ಸರ್ಕಾರದ ತೀರ್ಮಾನದ ಬಗ್ಗೆ ಹೇಳಿ ಎಂದು ಕೇಳಿದಾಗ, “1200 ಅಡಿಗಳವರೆಗಿನ ನಿವೇಶನಗಳಿಗೆ ಅನುಮತಿ ನೀಡಿದ್ದೇವೆ. ಉಳಿದಂತೆ ಸುಪ್ರೀಂ ಕೋರ್ಟ್ ತೀರ್ಪಿಗೆ ಧಕ್ಕೆಯಾಗದಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾನೂನು ಇಲಾಖೆ, ತಜ್ಞರು ಚರ್ಚೆ ಮಾಡಿ ಸಲಹೆ ನೀಡಲಿದ್ದಾರೆ. ಜನರಿಗೆ ಸಹಾಯ ಮಾಡಬೇಕು ಎಂದು ಮುಖ್ಯಮಂತ್ರಿಗಳು ವಿಚಾರವಾಗಿಯೇ 8 ಸಭೆಗಳನ್ನು ನಡೆಸಿದ್ದಾರೆ. ಮೂರು ಬಾರಿ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗಿದೆ. ನಾವು ಪ್ರತ್ಯೇಕವಾಗಿ ಎರಡು ಮೂರು ಬಾರಿ ಸಭೆ ಮಾಡಿದ್ದೇವೆ” ಎಂದರು.

ಇನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಕೇಳಿದಾಗ, “ನಾವು ಹೆಚ್ಚು ಶಕ್ತಿಶಾಲಿಯಾದಷ್ಟು, ಶತ್ರುಗಳು ಹೆಚ್ಚು, ಕಡಿಮೆ ಶಕ್ತಿ ಇದ್ದರೆ ಕಡಿಮೆ ಶತ್ರುಗಳು, ಶಕ್ತಿಯೇ ಇಲ್ಲದಿದ್ದರೆ, ಶತ್ರುಗಳೂ ಇರುವುದಿಲ್ಲ” ಎಂದು ತಿಳಿಸಿದರು.

Tags: 5 congress guaranteeBJPcongress 5 guaranteecongress 5 guarantee schemecongress 6 guaranteeCongress GuaranteeCongress Guarantee Cardcongress guarantee free ricecongress guarantee latest newscongress guarantee listcongress guarantee newscongress guarantee schemecongress guarantee schemescongress guarantee today newscongress guarantee update newscongress guarantee updatescongress gurantee cardCongress Partyguarantee congressಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ಡಿಸಿಎಂ

Next Post

ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬೆದರಿಕೆ: ರಕ್ಷಣೆ ಒದಗಿಸಲಾಗುವುದು

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post
ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬೆದರಿಕೆ: ರಕ್ಷಣೆ ಒದಗಿಸಲಾಗುವುದು

ಸಚಿವ ಪ್ರಿಯಾಂಕ ಖರ್ಗೆಯವರಿಗೆ ಬೆದರಿಕೆ: ರಕ್ಷಣೆ ಒದಗಿಸಲಾಗುವುದು

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada