ಮಧ್ಯಪ್ರದೇಶ ರಾಜ್ಯದಲ್ಲಿ ವಿಲಕ್ಷಣ ಘಟನೆಯೊಂದು ನಡೆದಿದೆ. ಶಿಕ್ಷಕಿಯೊಬ್ಬರು ಮೃತಪಟ್ಟು 10 ವರ್ಷಗಳ ನಂತರ ಅವರ ಹೆಸರಿಗೆ ಆದಾಯ ತೆರಿಗೆ ಇಲಾಖೆ 7.55 ಕೋಟಿ ರೂ. ಮೌಲ್ಯದ ತೆರಿಗೆ ನೋಟಿಸ್ ನೀಡಿದೆ.
ಉಷಾ ಸೋನಿ ಹೆಸರಿನ ಸರ್ಕಾರಿ ಶಾಲೆಯ ಶಿಕ್ಷಕಿ 2013ರಲ್ಲಿ ನಿಧನರಾಗಿದ್ದರು. ಅವರಿಗೆ ನೀಡಿರುವ ನೋಟಿಸ್ 2017-18ನೇ ಸಾಲಿಗೆ ಸೇರಿದ್ದಾಗಿದ್ದು ಇತ್ತೀಚೆಗೆ ಬೆಳಕಿಗೆ ಬಂದಿದೆ ಎಂದು ಬುಧವಾರ (ಆಗಸ್ಟ್ 2) ಮಾಧ್ಯಮಗಳು ವರದಿ ಮಾಡಿವೆ.
ಮಧ್ಯಪ್ರದೇಶ ಮೃತ ಶಿಕ್ಷಕಿ ಹೆಸರಿನ ಪಾನ್ ಕಾರ್ಡ್ ವಿವರಗಳನ್ನು ಬಳಸಿಕೊಂಡು 4.54 ಕೋಟಿ ರೂ. ಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಖರೀದಿ ಮಾಡಲಾಗಿದೆ. ಅದಕ್ಕಾಗಿ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಆದಾಯ ತೆರಿಗೆ ಇಲಾಖೆ ಬಹಕೋಟಿ ಮೊತ್ತದ ತೆರಿಗೆ ವಿಧಿಸಿದೆ ಎನ್ನಲಾಗಿದೆ.
ಶಿಕ್ಷಕಿ ಕುಟುಂಬದವರು ಮಾತ್ರವಲ್ಲ, ಆದಿವಾಸಿಗಳ ಪ್ರಾಬಲ್ಯ ಹೆಚ್ಚಾಗಿರುವ ಮಧ್ಯಪ್ರದೇಶ ಬೇತುಲ್ ಜಿಲ್ಲೆಯ 44 ಮಂದಿಗೆ 1 ರಿಂದ 10 ಕೋಟಿ ರೂ.ಗಳವರೆಗೆ ತೆರಿಗೆ ನೋಟೀಸ್ ನೀಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.
ಉಷಾ ಸೋನಿ ಶಿಕ್ಷಕಿ ಪಟಖೇಡ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. ಕಳೆದ ಜುಲೈ 26 ರಂದು ಆಕೆಯ ಕುಟುಂಬಕ್ಕೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಬಂದಿದ್ದು, 7.55 ಕೋಟಿ ರೂ. ತೆರಿಗೆ ಪಾವತಿಗೆ ಆದೇಶ ನೀಡಿತ್ತು. ನಂತರ ಅವರ ಮಗ ಪವನ್ ಸೋನಿ, “ನನ್ನ ತಾಯಿ 2013ರ ನವೆಂಬರ್ 16ರಂದೇ ದೀರ್ಘಕಾಲಿಕ ಅನಾರೋಗ್ಯದಿಂದ ನಿಧನರಾದರು. ಅಲ್ಲದೇ ಈ ನೋಟಿಸ್ 2017-18ನೇ ಸಾಲಿಗೆ ಸಂಬಂಧಿಸಿದ್ದಾಗಿದೆ. ದಾಖಲೆಯಲ್ಲಿ ನ್ಯಾಚುರಲ್ ಕಾಸ್ಟಿಂಗ್ ಕಂಪನಿ ಎಂದು ಉಲ್ಲೇಖಿಸಲಾಗಿದೆ. ಅದು ಇನ್ನೂ ಖರೀದಿ ಹಂತದಲ್ಲಿದೆ” ಎಂದು ತಿಳಿಸಿದ್ದಾರೆ.
“ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಿಸಿದ್ದೇವೆ. ನನ್ನ ತಾಯಿಯ ಪ್ಯಾನ್ಕಾರ್ಡ್ ದುರುಪಯೋಗಪಡಿಸಿಕೊಳ್ಳಲಾಗಿದೆ. ಈ ನೋಟಿಸ್ ಬಗ್ಗೆ ನಮಗೇನು ತಿಳಿದಿಲ್ಲ” ಎಂದು ಹೇಳಿದ್ದಾರೆ.
ನಿತಿನ್ ಜೈನ್ ಅವರು ಕಬ್ಬಿಣದ ಅಂಗಡಿಯಲ್ಲಿ ಮಾಸಿಕ 5-7 ಸಾವಿರ ರೂ. ಸಂಪಾದಿಸುತ್ತಿದ್ದಾರೆ ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಮಣಿಪುರ ವಿಚಾರವಾಗಿ ರಾಷ್ಟ್ರಪತಿ ಭೇಟಿಗೆ ಸಮಯ ಕೋರಿದ ಮಲ್ಲಿಕಾರ್ಜುನ ಖರ್ಗೆ
ಮಧ್ಯಪ್ರದೇಶ ನಿತಿನ್ ಜೈನ್ ಅವರು ಆದಾಯ ತೆರಿಗೆ ಖಾತೆ ತೆರೆಯಲು ಹೋದಾಗ, ತಮಿಳುನಾಡಿನ ಕುರ್ಟಾಲಂನಲ್ಲಿ ಅವರ ಹೆಸರಲ್ಲಿ ಖಾತೆ ಇರುವುದು ಕಂಡು ಬಂದಿದೆ. 2014-15ರಲ್ಲಿ ಅವರ ಹೆಸರಿನಲ್ಲಿ ಖಾತೆ ತೆರೆಯಲಾಗಿದ್ದು, ಇದೇ ಖಾತೆಯಲ್ಲಿ ದೊಡ್ಡ ಪ್ರಮಾಣದ ವಹಿವಾಟು ನಡೆದಿದೆ. ಈ ಕಾರಣಕ್ಕಾಗಿ ನೋಟಿಸ್ ಬಂದಿದೆ ಎಂದು ನಿತಿನ್ ದೂರಿನಲ್ಲಿ ಹೇಳಿದ್ದಾರೆ.
ಪ್ಯಾನ್ ವಿವರಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎರಡು ದೂರುಗಳನ್ನು ಸ್ವೀಕರಿಸಲಾಗಿದೆ. “ನಾವು ವಿವರವಾದ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಆ ಎರಡು ವಿಷಯಗಳ ಬಗ್ಗೆ ಐಟಿ ಇಲಾಖೆಯಿಂದ ಹೆಚ್ಚಿನ ವಿವರಗಳನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ” ಎಂದು ಬೆತುಲ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಚೌಧರಿ ಹೇಳಿದ್ದಾರೆ.