ನಿಂತಿದ್ದ ಟ್ರೇಲರ್ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟು ಮೂವರು ಗಾಯಗೊಂಡಿರುವ ಭೀಕರ ಘಟನೆ ಛತ್ತೀಸ್ ಗಢದ ರಾಯ್ ಪುರ ಸಮೀಪ ಸೋಮವಾರ ಮುಂಜಾನೆ ಸಂಭವಿಸಿದೆ.
ಕೋಬ್ರಾ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಮದಾಯಿ ಘಾಟ್ ಬಳಿ ಸೋಮವಾರ ಮುಂಜಾನೆ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಯಪುರದಿಂದ ಅಂಬಿಕಾಪುರದ ಸೀತಾಪುರಕ್ಕೆ ತೆರಳುತ್ತಿದ್ದ ಬಸ್ ನಿಂತಿದ್ದ ಟ್ರೇಲರ್ ಲಾರಿಯನ್ನು ಓವರ್ ಟೇಕ್ ಮಾಡುವಾಗ ಉಜ್ಜಿಕೊಂಡು ಹೋಗಿದೆ. ಇದರಿಂದ ಕಿಟಕಿ ಬದಿಯಲ್ಲಿ ಕುಳಿತಿದ್ದವರಿಗೆ ಹೆಚ್ಚು ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಚಾಲಕನ ಬೇಜಾವಾಬ್ದಾರಿಯಿಂದ ಈ ದುರ್ಘಟನೆ ಸಂಭವಿಸಿದ್ದು, ಚಾಲಕನ್ನು ಮಂಗಾ ಠಾಣೆಯ ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.