• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಹದಾಯಿ ಹೋರಾಟಕ್ಕೆ 7 ವರ್ಷ; ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ರೈತರು ನಿರ್ಧಾರ

ಪ್ರತಿಧ್ವನಿ by ಪ್ರತಿಧ್ವನಿ
July 17, 2021
in ಕರ್ನಾಟಕ
0
ಮಹದಾಯಿ ಹೋರಾಟಕ್ಕೆ 7 ವರ್ಷ; ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಲು ರೈತರು ನಿರ್ಧಾರ
Share on WhatsAppShare on FacebookShare on Telegram


ಆರು ವರ್ಷಗಳು ಪೂರೈಸಿ ಏಳನೇ ವರ್ಷಕ್ಕೆ ಪಾದರ್ಪಣೆ ಮಾಡುತ್ತಿರುವ ಮಹದಾಯಿ ಮತ್ತು ಕಳಸಾ- ಬಂಡೂರಿ ಹೋರಾಟದ ಕಿಚ್ಚು ಮತ್ತೊಮ್ಮೆ ಭುಗಿಲೇಳುವ ಲಕ್ಷಣಗಳು ಕಾಣಿಸುತ್ತಿವೆ. ಮಹಾದಾಯಿ ಯೋಜನೆ ವಿಳಂಬ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೆಟ್ಟಿಲೇರಲು ರೈತರು ನಿರ್ಧರಿಸಿದ್ದಾರೆ. ಕೇವಲ ಭರವಸೆಗಳಿಂದ ಬೇಸತ್ತಿರುವ ಅನ್ನದಾತರು ಯೋಜನೆ ಜಾರಿಗಾಗಿ ಮತ್ತೊಂದು ಸುತ್ತಿನ ಬೃಹತ್ ಹೋರಾಟಕ್ಕೆ ಸನ್ನದ್ಧವಾಗುತ್ತಿದ್ದಾರೆ.

ADVERTISEMENT

ಈ ಕುರಿತು ಸುದ್ದಿಗಾರರೊಂದಿಗೆ ಮಾತಾಡಿರುವ ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಅವರು, ಮಹದಾಯಿ ಯೋಜನೆ ಜಾರಿಗೆ ಮತ್ತೊಂದು ಸುತ್ತಿನ ಬೃಹತ್ ಹೋರಾಟ ರೂಪಿಸಲಿದ್ದೇವೆ. ಇದರ ಭಾಗವಾಗಿ ಮಹದಾಯಿ ಯೋಜನೆ ವಿಳಂಬ ಪ್ರಶ್ನಿಸಿ ಸದ್ಯದಲ್ಲೇ ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದೇವೆ. ಜಾರಿಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕುತ್ತೇವೆ ಎಂದರು.

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಯಾವುದೇ ಪಕ್ಷಗಳು ನಮ್ಮ ಹೋರಾಟದ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಮಾಡಿಲ್ಲ. ನಮಗೆ ಈ ರಾಜಕೀಯ ಪಕ್ಷಗಳ ಬೆಂಬಲ ಬೇಕಿಲ್ಲ. 7 ವರ್ಷ ಪೂರೈಸಿದ ಕಾರಣ ಇಂದು ಮಹದಾಯಿ ಹೋರಾಟಗಾರರು ಸಭೆ ನಡೆಸಿದೆವು. ಸಭೆಯ ಮೊದಲ ನಿರ್ಣಯವೇ ಸುಪ್ರೀಂ ಕೋರ್ಟ್ನಲ್ಲಿ ಕಾನೂನಾತ್ಮಕ ಹೋರಾಟ ನಡೆಸುವುದು ಎಂದು ತಿಳಿಸಿದರು.

ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆಗೆ ಆರಂಭದಿಂದಲೂ ಒಂದರ ಮೇಲೊಂದರಂತೆ ವಿಘ್ನಗಳು ಎದುರಾಗುತ್ತಿವೆ. ಮಹದಾಯಿ ನ್ಯಾಯಾಧಿಕರಣ ರಾಜ್ಯಕ್ಕೆ ಸಿಗಬೇಕಾದ ನೀರನ್ನು ಹಂಚಿಕೆ ಮಾಡಿದರೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಲಿಲ್ಲ. ಕೇಂದ್ರ ಪರಿಸರ ಇಲಾಖೆಯೂ ಕಾಮಗಾರಿಗೆ ಹಸಿರು ನಿಶಾನೆ ತೋರಿಸಿದರೂ ಗೋವಾ ಸರ್ಕಾರ ತಗಾದೆ ತೆಗೆದಿದೆ ಎಂದು ಯೋಜನೆಯೇ ಮುಂದುವರಿಸುತ್ತಿಲ್ಲ. ಕೇಂದ್ರದ ಈ ದ್ವಂದ್ವ ನೀತಿ ಮಹದಾಯಿ ಹೋರಾಟಗಾರರನ್ನು ಕೆರಳಿಸಿದೆ.
ಈ ಹಿಂದೆಯೇ ಕಳಸಾ-ಬಂಡೂರಿ ಯೋಜನೆ ಕಾಮಗಾರಿ ಪ್ರಾರಂಭಿಸಬಹುದು ಎಂದು ರಾಜ್ಯ ಸರ್ಕಾರಕ್ಕೆ ಕೇಂದ್ರ ಪತ್ರ ಬರೆದಿತ್ತು. ಪರಿಸರದ ಮೇಲಾಗುವ ಪರಿಣಾಮದ ಮೌಲ್ಯಮಾಪನ ಪೂರ್ಣಗೊಳಿಸಿದ ಬಳಿಕವೇ ಈ ನಿರ್ಧಾರಕ್ಕೆ ಬಂದಿತ್ತು. ಗ್ರೀನ್ ಸಿಗ್ನಲ್ ಕೊಟ್ಟ ಕೆಲವೇ ದಿನಗಳಲ್ಲಿ ಮತ್ತೆ ತನ್ನ ಆದೇಶಕ್ಕೆ ಕೇಂದ್ರ ತಡೆ ನೀಡಿದ್ದನ್ನು ಸ್ಪಷ್ಟಪಡಿಸಿತ್ತು.

ಮಹದಾಯಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮೋಸ ಮಾಡುತ್ತಿದೆ. ಈ ಯೋಜನೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಯಾಕೆ ಹೊರಡಿಸುತ್ತಿಲ್ಲ? ಚುನಾವಣಾ ಸಂದರ್ಭದಲ್ಲಿ ಮೂರು ರಾಜ್ಯಗಳ ಸಿಎಂ ಸಭೆ ಕರೆದು ಸಮಸ್ಯೆ ಪರಿಹರಿಸುವುದಾಗಿ ಹೇಳಿದ್ದ ಮೋದಿ ಮೌನ ಯಾಕೇ ಎಂದು ಮಹಾದಾಯಿ ಹೋರಾಟಗಾರರು ಪ್ರಶ್ನಿಸುತ್ತಿದ್ದಾರೆ.

ಹೀಗಿರುವಾಗಲೇ ಮಹಾದಾಯಿ ಹೋರಾಟಗಾರರು ಇಂದು ಸಭೆ ನಡೆಸಿ ಪ್ರಮುಖ ಐದು ನಿರ್ಧಾರಗಳನ್ನು ತೆಗದುಕೊಂಡಿದ್ದಾರೆ. ರೈತರ ಬೆಳೆಗೆ ಬೆಂಬಲಗೆ ಆಗ್ರಹಿಸುವ, ಮಹದಾಹಿ ಹೋರಾಟದಲ್ಲಿ ಮೃತಪಟ್ಟ 11 ಜನರಿಗೆ ಪರಿಹಾರಕ್ಕೆ ಒತ್ತಾಯಿಸುವ, ಮಲಪ್ರಭಾ ನದಿಯ ಅಚ್ಚುಕಟ್ಟು ಪ್ರದೇಶಗಳ ಕಾಲುವೆಗಳ ಕಳಪೆ ಕಾಮಗಾರಿ ಕುರಿತು ಹೋರಾಟ ರೂಪಿಸುವ, ಕಳಸಾ ಹೋರಾಟಗಾರರಿಗೆ ರಾಜ್ಯಪಾಲರನ್ನ ಭೇಟಿ ಮಾಡಲು ಅವಕಾಶ ಮಾಡಿಕೊಡಿ ಎಂದು ಒತ್ತಡ ಹೇರುವ ಇತ್ಯಾದಿ ನಿರ್ಣಯಗಳು ಇವಾಗಿವೆ.

Previous Post

ಶಿವಮೊಗ್ಗ ವಿಮಾನ ನಿಲ್ದಾಣ: ವಿನ್ಯಾಸದ ಬಳಿಕ ಹೆಡೆ ಎತ್ತಿತು ನಾಮಕರಣ ವಿವಾದ!

Next Post

ಕರೋನ ಕಾರಣದಿಂದ ಮಕ್ಕಳ ಲಸಿಕೆಗಳಿಗೆ ಕತ್ತರಿ, ಭಾರತದಲ್ಲೇ ಹೆಚ್ಚು ಲಸಿಕೆ ವಂಚಿತ ಮಕ್ಕಳು : ಯುನಿಸೆಫ್

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ಕರೋನ ಕಾರಣದಿಂದ ಮಕ್ಕಳ ಲಸಿಕೆಗಳಿಗೆ ಕತ್ತರಿ, ಭಾರತದಲ್ಲೇ ಹೆಚ್ಚು ಲಸಿಕೆ ವಂಚಿತ ಮಕ್ಕಳು : ಯುನಿಸೆಫ್

ಕರೋನ ಕಾರಣದಿಂದ ಮಕ್ಕಳ ಲಸಿಕೆಗಳಿಗೆ ಕತ್ತರಿ, ಭಾರತದಲ್ಲೇ ಹೆಚ್ಚು ಲಸಿಕೆ ವಂಚಿತ ಮಕ್ಕಳು : ಯುನಿಸೆಫ್

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada