• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

ಪ್ರತಿಧ್ವನಿ by ಪ್ರತಿಧ್ವನಿ
January 17, 2026
in Top Story, ಕರ್ನಾಟಕ
0
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Share on WhatsAppShare on FacebookShare on Telegram

ದಕ್ಷಿಣ ಕನ್ನಡ: ಮಂಗಳೂರು(Mangalore)  ನಗರದಲ್ಲಿ ಬಾಂಗ್ಲಾದೇಶದ(Bangladesh) ಅಕ್ರಮ ವಲಸಿಗರ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ 70 ವರ್ಷದ ಹಿರಿಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ(Social Media) ಹರಿದಾಡುತ್ತಿದೆ.

ADVERTISEMENT
ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ ಭೀಮಣ್ಣ ಖಂಡ್ರೆ 102 ವಯೋಸಹಜ ಕಾಯಿಲೆಯಿಂದ ಬೀದರ್‌ನಲ್ಲಿ ನಿಧನ…

ಧರ್ಮಪಾಲ ಶೆಟ್ಟಿ (70) ಎಂಬ ವ್ಯಕ್ತಿ, ಮಂಗಳೂರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಇದ್ದಾರೆ ಎಂದು ವ್ಯಕ್ತಿಯೊಬ್ಬರು ವ್ಯಾಪಾರ ಮಾಡುವ ಅಂಗಡಿ ಬಗ್ಗೆ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಿದ್ದರು ಎನ್ನಲಾಗಿದೆ. ಯಾರೋ ನೀಡಿದ್ದ ಸುಳ್ಳು ಮಾಹಿತಿಯನ್ನು ಧರ್ಮಪಾಲ ಶೆಟ್ಟಿ ಬೇರೆಯವರಿಗೆ ಕಳುಹಿಸಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಇನ್ನು ಪ್ರಕರಣದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು, ʼಆರೋಪಿತ ಅಂಗಡಿ ಮಾಲೀಕರ ಕುಟುಂಬದ ಹಿನ್ನೆಲೆ ಪರಿಶೀಲನೆ ನಡೆಸಲಾಗಿದೆ. ಅವರ ಹೆಸರಿನಲ್ಲಿ 2014ರಲ್ಲಿ ಖರೀದಿಸಲಾದ ಆಸ್ತಿ ಇದೆ. ಅವರು ಭಾರತೀಯರಲ್ಲ ಎಂಬುದಕ್ಕೆ ಯಾವುದೇ ಪುರಾವೆಗಳು ಲಭ್ಯವಾಗಿಲ್ಲʼ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಈ ಆರೋಪ ಸಂಪೂರ್ಣವಾಗಿ ಸುಳ್ಳು ಹಾಗೂ ಆಧಾರರಹಿತ ಎಂಬುದು ತನಿಖೆಯಲ್ಲಿ ದೃಢಪಡಿಸಿದ್ದಾರೆ.

ಸಮಾಜಕ್ಕೆ ಆತಂಕ ತಂದಿರುವ ‘ಡಿಜಿಟಲ್ ಚಟ’

ಈ ಪ್ರಕರಣ ಕೇವಲ ಒಬ್ಬ ವ್ಯಕ್ತಿಗೆ ಸೀಮಿತವಲ್ಲ, ಬದಲಾಗಿ ನಮ್ಮ ಸಮಾಜದಲ್ಲಿ ವಿಶೇಷವಾಗಿ ಹಿರಿಯ ನಾಗರಿಕರಲ್ಲಿ ಕಂಡುಬರುತ್ತಿರುವ ‘ಕಂಡದ್ದನ್ನೆಲ್ಲ ನಂಬಿ ಫಾರ್ವರ್ಡ್ ಮಾಡುವ ಡಿಜಿಟಲ್ ಚಟ’ದ ಭಯಾನಕ ಮುಖವನ್ನು ತೋರಿಸುತ್ತದೆ. ಸತ್ಯಾಸತ್ಯತೆ ಪರಿಶೀಲಿಸದೇ ಧರ್ಮ, ದೇಶ, ಭದ್ರತೆ ಎಂಬ ಭಾವನಾತ್ಮಕ ವಿಷಯಗಳ ಹೆಸರಿನಲ್ಲಿ ಸಂದೇಶಗಳನ್ನು ಫಾರ್ವರ್ಡ್ ಮಾಡುವುದು, ಮುಗ್ಧತೆಯಲ್ಲ. ಅದು ಕಾನೂನು ಅಪರಾಧಕ್ಕೆ ದಾರಿ ಮಾಡಿಕೊಡುತ್ತದೆ ಎನ್ನುವುದು ಗಂಭೀರ ವಿಚಾರವಾಗಿದೆ.

Krishna Byregowda: ಬಡವ್ರ ಜಮೀನು ತಿನ್ಕೊಳ್ಳಿ ಅಂದ ರೈತ.. ಗರಂ ಆದ ಸಚಿವ ಕೃಷ್ಣ ಭೈರೇಗೌಡ  #pratidhvani

ಈ ಬಗ್ಗೆ ಜಿತೇಂದ್ರ ಕುಂದೇಶ್ವರ ಎನ್ನುವವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇಲ್ಲಿ ಪ್ರಶ್ನೆ ಕೇವಲ ಒಬ್ಬ ವ್ಯಕ್ತಿಯದ್ದಲ್ಲ, ಬದಲಾಗಿ ನಮ್ಮ ಹಿರಿಯರು ಯಾವ ರೀತಿಯ ಮಾಹಿತಿಗಳನ್ನು ಕುರುಡಾಗಿ ನಂಬುತ್ತಿದ್ದಾರೆ ಎಂಬ ಆತಂಕದ್ದು. ಇಲ್ಲಿ ಕೇವಲ ಮುಗ್ಧತೆಯಷ್ಟೇ ಅಲ್ಲ, ಅಸಲಿ-ನಕಲಿ ತಿಳಿಯದ ಅವಿವೇಕ ಮತ್ತು ಕಂಡದ್ದನ್ನೆಲ್ಲ ಹಂಚುವ ‘ಡಿಜಿಟಲ್ ಚಟ’ ಎದ್ದುಕಾಣುತ್ತಿದೆ. ನಿಮಗೆ ನಿಜವಾಗಿಯೂ ಕಾಳಜಿ ಇದ್ದಿದ್ದರೆ ನೇರವಾಗಿ ಪೊಲೀಸ್ ಕಮಿಷನರ್ ಅವರ ವಾಟ್ಸಪ್ ನಂಬರ್‌ಗೆ ಅಥವಾ ಕಂಟ್ರೋಲ್ ರೂಮಿಗೆ ಕರೆ ಮಾಡಿ ತಿಳಿಸಬಹುದು ಅವರು ಖಂಡಿತ ವಿಚಾರಣೆ ನಡೆಸಿ ಶೋಧನೆ ನಡೆಸಿ ಸತ್ಯಾಸತ್ಯತೆಯನ್ನು ಹೊರಗೆ ತೆಗೆಯುತ್ತಾರೆ.

Siddaramaiah : ಕರ್ನಾಟಕದಲ್ಲಿ ಕನ್ನಡನೇ ಮಾತಾಡ್ಬೇಕು #pratidhvani #siddaramaiah #vidhanasoudha #bengaluru

ಅದು ಬಿಟ್ಟು ಅಮಾಯಕರು ಯಾರು ಅಂಗಡಿ ಮಾಡುತ್ತಿರುತ್ತಾರೆ. ಇನ್ಯಾರೋ ತಳ್ಳು ಗಾಡಿ ಅಂಗಡಿ ನಡೆಸುತ್ತಿದ್ದರೆ, ಕೆಲವೊಮ್ಮೆ ಜೊತೆಯಲ್ಲೇ ಇದ್ದವರೇ ಹೊಟ್ಟೆ ಉರಿಯಿಂದ ಜಾಲತಾಣಗಳಲ್ಲಿ ಹರಿಬಿಡುತ್ತಾರೆ. ಯಾವನೋ ಅಮಾಯಕ ಜನ ಶೇರ್ ಮಾಡಿ ಕ್ರಿಮಿನಲ್ ಪ್ರಕರಣ ಎದುರಿಸುವಂತ ಪರಿಸ್ಥಿತಿಯು ಬರಬಹುದು. ಹಾಗಾಗಿ ಜಾಲತಾಣದಲ್ಲಿ ಫಾರ್ವರ್ಡ್ ಮಾಡುವ ಮುನ್ನ ಎಚ್ಚರ.

ಇಲ್ಲಿ ಗಮನಿಸಬೇಕಾದ ಅಂಶಗಳೆಂದರೆ ವಿವೇಚನೆಯ ಕೊರತೆ: ದೇಶ ಅಥವಾ ಧರ್ಮದ ಹೆಸರಿನಲ್ಲಿ ಬರುವ ಸಂದೇಶಗಳನ್ನು ಕಂಡ ತಕ್ಷಣ, ಅವುಗಳ ಸತ್ಯಾಸತ್ಯತೆ ಪರಿಶೀಲಿಸದೆ ಹಂಚುವುದು ರಾಷ್ಟ್ರ ಸೇವೆಯಲ್ಲ, ಬದಲಾಗಿ ಅಕ್ಷಮ್ಯ ಅಪರಾಧ. ಸುಳ್ಳು ಸುದ್ದಿಯ ಭ್ರಮೆ: ವೃತ್ತಿಪರ ಮಾಧ್ಯಮಗಳಿಗಿಂತ ಜಾಲತಾಣದ ಸುಳ್ಳುಗಳನ್ನೇ ಸತ್ಯವೆಂದು ನಂಬುವ ಹಿರಿಯರು, ಸಮಾಜ ರಕ್ಷಣೆ ಮಾಡುತ್ತಿದ್ದೇವೆಂಬ ಭ್ರಮೆಯಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದಾರೆ.

Anant Kumar Hegde ; ನನ್ನ ಮಾತು ಮೊನಚಾದರೆ ಕ್ಷಮಿಸಿಬಿಡಿ, ಇವರಿಗೆ ಇದೇ ಭಾಷೆಯಲ್ಲಿ ಹೇಳಬೇಕು #pratidhvani

​ಕಾನೂನಿನ ಪೆಟ್ಟು: ಪೊಲೀಸರು ಇಂದು ತಂತ್ರಜ್ಞಾನದ ಮೂಲಕ ಸುಳ್ಳಿನ ಮೂಲವನ್ನು ಸುಲಭವಾಗಿ ಪತ್ತೆಹಚ್ಚುತ್ತಾರೆ. ವಯಸ್ಸಿನ ಗೌರವವನ್ನೂ ಮರೆತು ಹಂಚುವ ದ್ವೇಷದ ಸಂದೇಶಗಳು ನೇರವಾಗಿ ಜೈಲು ಪಾಲಾಗುವಂತೆ ಮಾಡುತ್ತವೆ. ಜಾಗೃತಿ ಸಂದೇಶ: ಮಾಧ್ಯಮಗಳು ಸುದ್ದಿ ಮಾಡುವ ಮೊದಲು ಮೂಲಗಳನ್ನು ನೂರಾರು ಬಾರಿ ಪರಿಶೀಲಿಸುತ್ತವೆ. ಆದರೆ ಕೇವಲ ಮೊಬೈಲ್ ಇದೆ ಎಂಬ ಕಾರಣಕ್ಕೆ ಸಿಕ್ಕ ಸಿಕ್ಕ ಮೆಸೇಜ್ ಫಾರ್ವರ್ಡ್ ಮಾಡುವುದು ನಿಮ್ಮ ವ್ಯಕ್ತಿತ್ವಕ್ಕೆ ಹಾಗೂ ಸಮಾಜಕ್ಕೆ ಅಪಾಯಕಾರಿ. ನೆನಪಿಡಿ: ನಿಮ್ಮ ಒಂದು ‘Forward’ ಕ್ಲಿಕ್ ಮಾಡುವ ಮುನ್ನ ವಿವೇಚನೆ ಬಳಸಿ. ಸತ್ಯ ತಿಳಿಯದ ಪ್ರಚಾರ ದೇಶಪ್ರೇಮವಲ್ಲ, ಅದು ಸಮಾಜಕ್ಕೆ ಮಾಡುವ ದ್ರೋಹ ಎಂದು ಜಿತೇಂದ್ರ ಕುಂದೇಶ್ವರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Tags: ArrestForwardKannadakannada newsKarnatakakarnataka newsMangaloreMangaluruPolicePoliticsSocial MediaWhatsApp
Previous Post

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

Next Post

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

Related Posts

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?
ಕರ್ನಾಟಕ

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

by ಪ್ರತಿಧ್ವನಿ
March 4, 2026
0

ಕೋವಿಡ್-19‌ ಸೋಂಕು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗ್ರಾಮ ಪಂಚಾಯತಿಯಿಂದ ನಿಯೋಜಿಸಿದ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ತಗುಲಿ ನಿಧನರಾಗಿದ್ದ ಸರಡಗಿ (...

Read moreDetails
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

March 3, 2026
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

ಬೆಂಗಳೂರಿನ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ: ನಂತರ ಆದದ್ದೇನು ?

March 3, 2026
Next Post
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada