
ರಾಯ್ ಪುರ ; ಛತ್ತೀಸ್ಗಢದ ಬಿಜಾಪುರ ಜಿಲ್ಲೆಯ ಅಂಬೇಲಿ ಗ್ರಾಮದಲ್ಲಿ ನಕ್ಸಲೀಯರು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಡಿಆರ್ಜಿ ವಾಹನವನ್ನು ಐಇಡಿ (ಸುಧಾರಿತ ಸ್ಫೋಟಕ ಸಾಧನ) ಮೂಲಕ ಸ್ಫೋಟಿಸಿದ್ದು, 8 ಯೋಧರು ಸೇರಿದಂತೆ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೂಟ್ರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಲಿ ನಾಲಾ ಬಳಿ ಈ ದಾಳಿ ಸಂಭವಿಸಿದೆ. ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ವಾಹನದಲ್ಲಿ ಹಿಂತಿರುಗುತ್ತಿರುವ ಸಮಯದಲ್ಲಿ ನಕ್ಸಲೀಯರು ಈ ದಾಳಿಯನ್ನು ನಡೆಸಿದ್ದಾರೆ ಎಂದು ಬಸ್ತಾರ್ ಐಜಿ ಸುಂದರರಾಜ್ ಪಿ ತಿಳಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವೀರ ಯೋಧರ ಕುಟುಂಬಗಳಿಗೆ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದರು.

ಈ ದಾಳಿ ಖಂಡನೀಯ. ದೇಶದ ಭದ್ರತೆಗೆ ತ್ಯಾಗ ಮಾಡಿದ ಯೋಧರ ತ್ಯಾಗ ವ್ಯರ್ಥವಾಗುವುದಿಲ್ಲ,” ಎಂದು ಅವರು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ನಕ್ಸಲಿಸಂ ನಿರ್ಮೂಲನೆಗಾಗಿ ದೇಶ ಸಂಕಲ್ಪ ಮಾಡಿದೆ ಎಂದು ಹೇಳಿದ್ದಾರೆ. “ಈ ದುರಂತದ ಬಗ್ಗೆ ತೀವ್ರ ದುಃಖಿತನಾಗಿದ್ದೇನೆ. ನಕ್ಸಲರ ನಿರ್ಮೂಲನೆಗಾಗಿ ನಮ್ಮ ಸೈನಿಕರ ತ್ಯಾಗ ವ್ಯರ್ಥವಾಗುವುದಿಲ್ಲ. 2026ರೊಳಗೆ ದೇಶದಿಂದ ನಕ್ಸಲರನ್ನು ನಿರ್ಮೂಲನೆ ಮಾಡುತ್ತೇವೆ,” ಎಂದು ಶಾ ಹೇಳಿದ್ದಾರೆ.
ಛತ್ತೀಸ್ಗಢದ ಉಪಮುಖ್ಯಮಂತ್ರಿ ಅರುಣ್ ಸಾವೊ ಅವರು ಯೋಧರ ತ್ಯಾಗವನ್ನು ಸ್ಮರಿಸಿದರು. “ಈ ದಾಳಿ ಹೇಡಿತನದ ಚಟುವಟಿಕೆ. ನಕ್ಸಲರನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಕೆಲಸದಲ್ಲಿ ಸರ್ಕಾರ ಸತತ ಪ್ರಯತ್ನಿಸುತ್ತಿದೆ,” ಎಂದು ಅವರು ಹೇಳಿದರು.ಇದು 2025ರಲ್ಲಿ ಛತ್ತೀಸ್ಗಢದಲ್ಲಿ ಸಂಭವಿಸಿದ ಮೂರನೇ ದೊಡ್ಡ ನಕ್ಸಲ್ ದಾಳಿ. ಜನವರಿ 3 ರಂದು ಗರಿಯಾಬಂದ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೂವರು ನಕ್ಸಲೀಯರು ಹತರಾಗಿದ್ದರೆ, ಜನವರಿ 4 ರಂದು ದಂತೇವಾಡದಲ್ಲಿ ಐವರು ನಕ್ಸಲೀಯರು ಕೊಲ್ಲಲ್ಪಟ್ಟಿದ್ದರು.