• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಶತಕ ಬಾರಿಸಲಿದೆ ಕಚ್ಚಾ ತೈಲ; ಮಾರ್ಚ್ 10ರ ನಂತರ ದೇಶೀಯ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ

Any Mind by Any Mind
February 15, 2022
in ದೇಶ, ವಾಣಿಜ್ಯ
0
ಶತಕ ಬಾರಿಸಲಿದೆ ಕಚ್ಚಾ ತೈಲ; ಮಾರ್ಚ್ 10ರ ನಂತರ ದೇಶೀಯ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ
Share on WhatsAppShare on FacebookShare on Telegram

ಉಕ್ರೇನ್ ದೇಶದ ಮೇಲೆ ರಷ್ಯಾ ನಡೆಸಬಹುದಾದ ಸಂಭವನೀಯ ದಾಳಿ, ನಂತರದಲ್ಲಿ ನ್ಯಾಟೋ ದೇಶಗಳು ರಷ್ಯದ ವಿರುದ್ಧ ನಡೆಸಬಹುದಾದ ಪ್ರತಿದಾಳಿ ಊಹೆಯ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಬಿರುಗಾಳಿ ಎದ್ದಿದೆ. ಕಚ್ಚಾ ತೈಲ ದರ ಏಳು ವರ್ಷಗಳ ಗರಿಷ್ಠಮಟ್ಟಕ್ಕೆ ಏರಿದ್ದು, ಶೀರ್ಘದಲ್ಲೇ ಶತಕ ದಾಟುವ ಸಾಧ್ಯತೆ ಇದೆ.

ADVERTISEMENT

ಈ ಬೆಳವಣಿಗೆ ತೈಲೋತ್ಪನ್ನ ರಾಷ್ಟ್ರಗಳಿಗೆ  ಸಂತಸದ ಸುದ್ದಿಯಾಗಿರಬಹುದು. ಆದರೆ, ತೈಲ ಆಮದು ಮಾಡಿಕೊಳ್ಳುತ್ತಿರುವ ರಾಷ್ಟ್ರಗಳ ಆರ್ಥಿಕತೆ ಮೇಲೆ ತೀವ್ರ ವ್ಯತಿರಿಕ್ತ ಪರಿಣಾಮ ಬೀರಲಿದೆ. ಭಾರತ ಶೇ.86ರಷ್ಟು ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದ್ದು, ಅತಿ ಹೆಚ್ಚಿನ ಒತ್ತಡ ಎದುರಿಸುವ ಮೊದಲ ರಾಷ್ಟ್ರವಾಗಲಿದೆ. ನೇರವಾಗಿ ಹೇಳಬೇಕೆಂದರೆ ಭಾರತದ ಜನರು ಕಚ್ಚಾ ತೈಲ ಏರಿಕೆಯ ಹೊರೆಯನ್ನು ಭರಿಸಲು ಸಿದ್ಧವಾಗಬೇಕಿದೆ. 

ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿರುವುದರಿಂದ ಕಳೆದ ನೂರು ದಿನಗಳಿಂದ ಪೆಟ್ರೋಲ್ ಮತ್ತು ಡಿಸೇಲ್ ದರವನ್ನು ನರೇಂದ್ರ ಮೋದಿ ಸರ್ಕಾರ ತಟಸ್ಥವಾಗಿ ಇಟ್ಟಿದೆ. ಚುನಾವಣೆ ಗೆಲ್ಲಲು ಏನು ಬೇಕಾದರೂ ಮಾಡುವ ಮೋದಿ ಸರ್ಕಾರ, ಚುನಾವಣೆ ಮುಗಿದ ನಂತರ ನೂರು ದಿನಗಳಲ್ಲಾದ ನಷ್ಟವನ್ನು ಹತ್ತಾರು ದಿನಗಳಲ್ಲೇ ತುಂಬಿಕೊಳ್ಳಲಿದೆ. 

ಕಚ್ಚಾ ತೈಲ ಪ್ರತಿ ಬ್ಯಾರೆಲ್ ಗೆ 60 ಡಾಲರ್ ಇದ್ದಾಗಲೇ ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟಿತ್ತು. ಅಂದರೆ, ಪೆಟ್ರೋಲ್ ಅಷ್ಟೇ ಅಲ್ಲಾ ಡಿಸೇಲ್ ಕೂಡಾ  ಶತಕದ ಗಡಿ ದಾಟಿತ್ತು. ಚುನಾವಣೆ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ತಾನೇ ಹೇರಿದ್ದ ಸುಂಕವನ್ನು ಕೊಂಚ ಕಡಿತ ಮಾಡಿತ್ತು. ನಂತರ ದರ ಏರಿಕೆ ಮಾಡದೆ ತಟಸ್ಥವಾಗಿರುವಂತೆ ನೋಡಿಕೊಂಡಿದೆ.

ಮಾರ್ಚ್ 10 ರಂದು ಐದೂ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ ಬರಲಿದೆ. ಫಲಿತಾಂಶ ಮೋದಿ ಸರ್ಕಾರದ ಪರವಾಗಿ ಬರಲಿ ವಿರುದ್ಧವಾಗಿ ಬರಲಿ, ಪೆಟ್ರೋಲ್ ಡಿಸೇಲ್ ದರ ಭಾರಿ ಪ್ರಮಾಣದಲ್ಲಿ ಏರುವುದಂತೂ ಗ್ಯಾರಂಟಿ.

ಏಕೆಂದರೆ, ಅಷ್ಟೊತ್ತಿಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರವು ಶತಕದ ಗಟಿ ದಾಟುವ ಸಾಧ್ಯತೆ ಇದೆ. ಕಳೆದ ವರ್ಷವಿಡಿ  60- 65 ಡಾಲರ್ ಆಜುಬಾಜಿನಲ್ಲಿದ್ದ ಕಚ್ಚಾ ತೈಲದರವು, ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸುವ ಸಲುವಾಗಿ ಗಡಿಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಸೇನೆ ನಿಯೋಜಿಸಿದ ನಂತರ ತೈಲದರ ತ್ವರಿತವಾಗಿ ಜಿಗಿದಿದೆ. 

ಕಳೆದ ಮೂರು ತಿಂಗಳಲ್ಲಿ ಶೇ.50ರಷ್ಟು ಏರಿಕೆಯಾಗಿದೆ. ಪ್ರಸ್ತುತ ಪ್ರತಿ ಬ್ಯಾರೆಲ್ ಬ್ರೆಂಟ್ ಕ್ರೂಡ್ 96.50 ಡಾಲರ್ ಮತ್ತು ವೆಸ್ಟ್ ಟೆಕ್ಸಾಸ್ ಇಂಟರ್ಮಿಡಿಯೆಟ್ (ಡಬ್ಲ್ಯೂಟಿಐ) 95 ಡಾಲರ್ ಆಜುಬಾಜಿನಲ್ಲಿ ವಹಿವಾಟುಗುತ್ತಿವೆ. ನಿತ್ಯದ ಏರಿಳಿಕೆ ಒಂದೆರಡು ಡಾಲರ್ ಗಳಷ್ಟಿರುತ್ತದೆ. ಆದರೆ, ಇದು ಇಳಿಜಾರಿನಲ್ಲಿ ಸಾಗದೇ ಏರುಹಾದಿಯಲ್ಲೇ ಜಿಗಿಯುತ್ತಿದೆ. ಈ ತ್ವರಿತ ಜಿಗಿತದಿಂದಾಗಿ ಶೀಘ್ರವೇ ಕಚ್ಚಾ ತೈಲ 100 ಡಾಲರ್ ಗಡಿ ದಾಟುತ್ತದೆಂದು ಮಾರುಕಟ್ಟೆ ತಜ್ಞರು ಅಂದಾಜು ಮಾಡಿದ್ದಾರೆ.

ಮಾರ್ಚ್ 10ರ ನಂತರ ಏನೇನಾಗಲಿದೆ?

ದೇಶೀಯ ಮಾರುಕಟ್ಟೆಯಲ್ಲಿ ತೀವ್ರ ಪ್ರಮಾಣದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗಲಿದೆ. ಅದರ ಪರಿಣಾಮವಾಗಿ ಸರಕು ಸಾಗಣೆ ಸೇರಿದಂತೆ ಪೂರಕವಾದ ಸೇವೆಗಳ ದರವೂ ಏರಲಿದೆ. ಅಡುಗೆ ಅನಿಲ ದರವೂ ಜಿಗಿಯಲಿದೆ. ಹೋಟೆಲ್ ಗಳಲ್ಲಿ ತಿಂಡಿ ತಿನಿಸು, ಕಾಫಿ ಟೀ ಇತ್ಯಾದಿ ದರಗಳೂ ಏರಬಹುದು. ಇದರಿಂದ ಜನಸಾಮಾನ್ಯ ಮೇಲೆ ಭಾರಿ ಹೊರೆ ಬೀಳಲಿದೆ. ಹಣದುಬ್ಬರ ತ್ವರಿತವಾಗಿ ಜಿಗಿಯಲಿದ್ದು, ಅದನ್ನು ನಿಯಂತ್ರಿಸಲು ಭಾರತೀಯ ರಿಸರ್ವ್ ಬ್ಯಾಂಕ್ ಬ್ಯಾಂಕ್ ಬಡ್ಡಿದರ ಏರಿಸುವ ಸಾಧ್ಯತೆ ಇದೆ.

ಇಷ್ಟಾದರೂ ಜನರು ದರ ಏರಿಕೆ ವಿರುದ್ಧ ಬೀದಿಗಿಳಿದು ಪ್ರತಿಭಟಿಸಬಹುದು ಎಂದು ನಿರೀಕ್ಷೆ ಮಾಡುವಂತಿಲ್ಲ. ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಹತ್ತಾರು ಮಾರ್ಗಗಳನ್ನು ಮೋದಿ ಸರ್ಕಾರ ಕಂಡುಕೊಂಡಿದೆ. ಈಗ ಕರ್ನಾಟಕದಲ್ಲಿ ಹಿಜಾಬಿಗೆ ಪ್ರತಿಯಾಗಿ ಕೆಸರಿ ಶಾಲನ್ನು ತಂದು ಇಡೀ ಶೈಕ್ಷಣಿಕ ಪರಿಸರವನ್ನೇ ಹಾಳುಮಾಡುತ್ತಿರುವಂತೆ, ಜನರ ಭಾವನೆಗಳನ್ನು ಕೆರಳಿಸುವ ಮತ್ತಷ್ಟು ವಿವಾದಗಳ ಹುಟ್ಟಿಕೊಳ್ಳಲಿವೆ. ಮೂರ್ಖಮಾಧ್ಯಮಗಳೂ ಅವುಗಳ ಬೆನ್ನ ಹಿಂದೆ ಬಿದ್ದು, ವಾಸ್ತವಿಕತೆಯನ್ನೇ ಮರೆತು ವರದಿ ಮಾಡುತ್ತವೆ. ಪೆಟ್ರೋಲ್ ಮತ್ತು ಡಿಸೇಲ್ ದರಗಳು  ಏರುತ್ತಲೇ ಇರುತ್ತದೆ!

Tags: Central GovernmentCrude oildieselpetrolPM Narendra ModiRBIಕಚ್ಚಾ ತೈಲಕೇಂದ್ರ ಸರ್ಕಾರಡಿಸೇಲ್‌ದರ ಏರಿಕೆಪೆಟ್ರೋಲ್‌ಪ್ರಧಾನಿ ನರೇಂದ್ರ ಮೋದಿಭಾರತೀಯ ರಿಸರ್ವ್‌ ಬ್ಯಾಂಕ್‌
Previous Post

ಪುಲ್ವಾಮಾ ಮತ್ತು ಗಲ್ವಾನಾ ಯೋಧರ ಹತ್ಯೆ ಘಟನೆಗಳಿಗೆ ದೇಶದ ಪ್ರತಿಕ್ರಿಯೆ ಯಾಕೆ ಭಿನ್ನ?

Next Post

ಹಿಜಾಬ್ ವಿಚಾರವನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕಿತ್ತು: ದೇವೇಗೌಡ

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ಹಿಜಾಬ್ ವಿಚಾರವನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕಿತ್ತು: ದೇವೇಗೌಡ

ಹಿಜಾಬ್ ವಿಚಾರವನ್ನು ಮೊಳಕೆಯಲ್ಲೇ ಚಿವುಟಿ ಹಾಕಬೇಕಿತ್ತು: ದೇವೇಗೌಡ

Please login to join discussion

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada