• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಚಿವ ಈಶ್ವರಪ್ಪ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ : ಸಿದ್ದರಾಮಯ್ಯ ಆಗ್ರಹ

ಪ್ರತಿಧ್ವನಿ by ಪ್ರತಿಧ್ವನಿ
February 16, 2022
in ಕರ್ನಾಟಕ, ರಾಜಕೀಯ
0
ಸಚಿವ ಈಶ್ವರಪ್ಪ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ : ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ಇಂದು ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಸಚಿವ ಕೆ.ಎಸ್‌.ಈ vs ಡಿಕೆಶಿ ಎಂದೇ ಹೇಳಬಹುದು ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು ಮಾಡಿ ಈಶ್ವರಪ್ಪನವರ ರಾಜೀನಾಮೆಗೆ ಆಗ್ರಹಿಸಿದೆ.

ADVERTISEMENT

ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿರುವ ಗ್ರಾಮೀಣ ಅಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ, ಅವರನ್ನು ಗುರುವಾರ 11 ಗಂಟೆಯೊಳಗೆ ಸಚಿವ ಸ್ಥಾನದಿಂದ ವಜಾಮಾಡದೆ ಇದ್ದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ಕಲಾಪವನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತೇವೆ.

ಬಿಜೆಪಿ ಮತ್ತು ಆರ್ ಎಸ್ ಎಸ್ ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಹೃತ್ಪೂರ್ವಕವಾಗಿ ಎಂದೂ ಒಪ್ಪಿಕೊಂಡಿಲ್ಲ. ದೇವರು, ಧರ್ಮ, ದೇಶಪ್ರೇಮ, ರಾಷ್ಟಧ್ವಜ, ರಾಷ್ಟ್ರಗೀತೆ ಎಲ್ಲವೂ ಆ ಪಕ್ಷಕ್ಕೆ ರಾಜಕೀಯದ ಅಸ್ತ್ರಗಳು. ಸಂವಿಧಾನ ಮತ್ತು ರಾಷ್ಟ್ರಧ್ವಜದ ವಿರುದ್ಧ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಸಚಿವ ಈಶ್ವರಪ್ಪನವರ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ ಅಲ್ಲ. ತಮ್ಮ ಪಕ್ಷ ಮತ್ತು ಪರಿವಾರದ ಅಭಿಪ್ರಾಯವನ್ನೇ ಅವರು ಹೇಳಿದ್ದಾರೆ. ಅಂತರಂಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಂದ ಹಿಡಿದು ಆರ್.ಎಸ್.ಎಸ್ ನ ಸರಸಂಘ ಚಾಲಕ ಮೋಹನ್ ಭಾಗವತ್ ವರೆಗೆ ಎಲ್ಲರ ಅಭಿಪ್ರಾಯವೂ ಇದೇ ಆಗಿದೆ.

ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿದ್ದ ಕೃತ್ಯವನ್ನು ಈಶ್ವರಪ್ಪನವರು ಖಂಡಿಸಿ, ವಿದ್ಯಾರ್ಥಿಗಳ ವಿರುದ್ಧ ಕ್ರಮಕೈಗೊಂಡಿದ್ದರೆ ವಿವಾದ ಶಾಂತಿಯುತವಾಗಿ ಬಗೆಹರಿಯುತ್ತಿತ್ತು. ಅವರು ‘”ಇವತ್ತಲ್ಲ ನಾಳೆ ಕೆಂಪು ಕೋಟೆಯ ಮೇಲೆ ಕೇಸರಿ ಬಾವುಟ ಹಾರಿಸುತ್ತೇವೆ” ಎಂದು ಅತ್ಯಂತ ಉಡಾಫೆಯಿಂದ ಮಾತನಾಡಿ ಪ್ರಚೋದಿಸಿದ್ದಾರೆ.

ಬಿಜೆಪಿ ಮತ್ತು ಆರ್ ಎಸ್ ಎಸ್ ಈ ದೇಶದ ಸಂವಿಧಾನವನ್ನಾಗಲಿ, ರಾಷ್ಟ್ರಧ್ವಜವನ್ನಾಗಲಿ ಹೃತ್ಪೂರ್ವಕವಾಗಿ ಎಂದೂ ಒಪ್ಪಿಕೊಂಡಿಲ್ಲ. ದೇವರು, ಧರ್ಮ, ದೇಶಪ್ರೇಮ, ರಾಷ್ಟಧ್ವಜ, ರಾಷ್ಟ್ರಗೀತೆ ಎಲ್ಲವೂ @BJP4India ಕ್ಕೆ ರಾಜಕೀಯದ ಅಸ್ತ್ರಗಳು. ಸಂವಿಧಾನ ಮತ್ತು ರಾಷ್ಟ್ರಧ್ವಜದ ವಿರುದ್ಧ ಹೇಳಿಕೆ ನೀಡುತ್ತಾ ಬಂದಿದ್ದಾರೆ. 2/13#ದೇಶದ್ರೋಹಿಈಶ್ವರಪ್ಪ

— Siddaramaiah (@siddaramaiah) February 16, 2022

ದೇಶದಲ್ಲಿ ಸರ್ಕಾರವನ್ನು ಟೀಕಿಸಿದ ವ್ಯಕ್ತಿಗಳ ಮೇಲೆಲ್ಲಾ ರಾಷ್ಟ್ರ ದ್ರೋಹದ ಪ್ರಕರಣವನ್ನು ದಾಖಲಿಸುತ್ತಿರುವ ಸಂದರ್ಭದಲ್ಲಿ ರಾಷ್ಟ್ರದೋಹದ ಹೇಳಿಕೆ ಕೊಟ್ಟಿರುವ ಕೆ.ಎಸ್. ಈಶ್ವರಪ್ಪನವರ ಮೇಲೆ ಸರ್ಕಾರ ಯಾವುದೇ ಕ್ರಮವನ್ನು ಕೈಗೊಳ್ಳದಿರುವುದು ಆಶ್ಚರ್ಯಕರವಾಗಿದೆ. ದೇಶಪ್ರೇಮವೇ ತಮ್ಮ ಉಸಿರು ಎಂದು ಹೇಳುತ್ತಿರುವ ಭಾರತೀಯ ಜನತಾ ಪಕ್ಷ ಕನಿಷ್ಠ ಈಶ್ವರಪ್ಪನವರ ಹೇಳಿಕೆಯನ್ನು ಖಂಡಿಸಬಹುದಿತ್ತು. ಅದು ಸಚಿವರ ವೈಯಕ್ತಿಕ ಹೇಳಿಕೆ ಎಂದಾದರೂ ಹೇಳಬಹುದಿತ್ತು. ಪಕ್ಷದ ಮೌನದ ಮೂಲಕ ಈಶ್ವರಪ್ಪನವರ ಹೇಳಿಕೆಗೆ ಸಮ್ಮತಿ ಇದೆ ಎಂದು ಹೇಳಿದಂತಾಗುವುದಿಲ್ಲವೇ?

ಬಿಜೆಪಿ ಅದರ ಪೂರ್ವಾಶ್ರಮದ ಜನಸಂಘ ಮತ್ತು ಆರ್ ಎಸ್ ಎಸ್ ರಾಷ್ಟ್ರಧ್ವಜವನ್ನು ಎಂದೂ ಒಪ್ಪಿಕೊಂಡಿರಲಿಲ್ಲ. ಭಗವಾಧ್ವಜವನ್ನೇ ರಾಷ್ಟ್ರಧ್ವಜ ಮಾಡುವುದೇ ಅವರ ಮೂಲ ಅಜೆಂಡಾ ಆಗಿದೆ.
ನಾಗಪುರದ ಆರ್ ಎಸ್ ಎಸ್ ಕಚೇರಿ ಮೇಲೆ ಭಾರತ ಗಣರಾಜ್ಯವಾದ 52 ವರ್ಷಗಳವರೆಗೆ ರಾಷ್ಟ್ರಧ್ವಜ ಆರೋಹಣ ಮಾಡಿರಲಿಲ್ಲ. ಕೊನೆಗೆ ಒಲ್ಲದ ಮನಸ್ಸಿನಿಂದ 2002 ಆಗಸ್ಟ್ 15ರಂದು ರಾಷ್ಟ್ರಧ್ವಜಾರೋಹಣ ಮಾಡಿದರೂ ಅಂತರಂಗದ ವಿರೋಧ ಇದ್ದೇ ಇದೆ. ಅದು ಈಶ್ವರಪ್ಪನಂತಹವರ ಬಾಯಿಯಿಂದ ಆಗಾಗ ಹೊರಬರುತ್ತದೆ. ದೇಶಾದ್ಯಂತ ಆರ್ ಎಸ್ ಎಸ್ ನಡೆಸುವ ಬೈಠಕ್ ಗಳಲ್ಲಿ ಅವರು ಭಗವಾದ್ವಜವನ್ನಷ್ಟೇ ಹಾರಿಸುತ್ತಿದ್ದಾರೆಯೇ ವಿನಹ ರಾಷ್ಟ್ರಧ್ವಜವನ್ನು ಹಾರಿಸುತ್ತಿರಲಿಲ್ಲ. ಈಗಲೂ ಆರ್ ಎಸ್ ಎಸ್ ಬೈಠಕ್ ಗಳಲ್ಲಿ ನನಗೆ ತಿಳಿದ ಹಾಗೆ ರಾಷ್ಟ್ರಧ್ವಜವನ್ನು ಹಾರಿಸುತ್ತಿಲ್ಲ.

ಸಂವಿಧಾನದ ಪರಿಚ್ಛೇದ-51 (ಎ) ರಲ್ಲಿ ಮೂಲಭೂತ ಕರ್ತವ್ಯಗಳನ್ನು ವಿವರಿಸಲಾಗಿದೆ. ಅದರಲ್ಲಿ ಮೊದಲನೆ ಕರ್ತವ್ಯವೇ ಸಂವಿಧಾನಕ್ಕೆ ಬದ್ಧವಾಗಿರುವುದು ಹಾಗೂ ಅದರ ಆದರ್ಶಗಳನ್ನು ಮತ್ತು ಸಂಸ್ಥೆಗಳನ್ನು, ರಾಷ್ಟ್ರ ಧ್ವಜ ಹಾಗೂ ರಾಷ್ಟ್ರ ಗೀತೆಯನ್ನು ಗೌರವಿಸುವುದಾಗಿದೆ ಎಂದು ಹೇಳಿದೆ.
ರಾಷ್ಟ್ರಧ್ವಜ, ರಾಷ್ಟ್ರ ಗೀತೆ ಮತ್ತು ಸಂವಿಧಾನ ರಾಷ್ಟ್ರದ ಪ್ರಮುಖ ಸಂಕೇತಗಳು, ರಾಜರ ಕಾಲದಲ್ಲಿ ಬೆಳ್ಗೊಡೆ ಮತ್ತು ಸಿಂಹಾಸನಗಳು ರಾಜ ಪ್ರಭುತ್ವಗಳ ಲಾಂಛನಗಳಾದರೆ, ಹೊಸ ರಾಷ್ಟ್ರದಲ್ಲಿ ರಾಷ್ಟ್ರಧ್ವಜ, ರಾಷ್ಟ್ರಗೀತೆ ಮತ್ತು ಸಂವಿಧಾನ ಮೂರು ಲಾಂಛನಗಳು. ಇವುಗಳಿಗೆ ಅವಮಾನ ಎಸಗುವ ಯಾವುದೆ ವ್ಯಕ್ತಿಯು ಕೃತ್ಯ ರಾಷ್ಟ್ರದ್ರೋಹದ್ದು.

ಕಾಲಕಾಲಕ್ಕೆ ರಾಜಕೀಯದ ಲಾಭ ಪಡೆಯಲು ಇಲ್ಲವೇ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಜನರ ಗಮನ ಬೇರೆ ಕಡೆ ಸೆಳೆಯಲು ರಾಷ್ಟ್ರಧ್ವಜದಂತಹ ವಿವಾದವನ್ನು ಬಿಜೆಪಿ ಹುಟ್ಟು ಹಾಕುತ್ತದೆ.
ಸಂವಿಧಾನವನ್ನು ವಿರೋಧಿಸುವವರು, ರಾಷ್ಟ್ರಧ್ವಜವನ್ನು ಒಪ್ಪದವರು ಎಂದೂ ದೇಶಪ್ರೇಮಿಯಾಗಲು ಸಾಧ್ಯವಿಲ್ಲ. ಮೂಲಭೂತವಾಗಿ ಬಿಜೆಪಿ ನಾಯಕರು ಸಂವಿಧಾನವನ್ನಾಗಲೀ, ರಾಷ್ಟ್ರಧ್ವಜವನ್ನಾಗಲಿ ಒಪ್ಪುವುದಿಲ್ಲ. ಇವರೇನಿದ್ದರೂ ನಕಲಿ ದೇಶಪ್ರೇಮಿಗಳು, ಇವರದ್ದೇನಿದ್ದರೂ ನಕಲಿ ದೇಶಪ್ರೇಮ ಎಂದು ಕಿಡಿಕಾರಿದ್ದಾರೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ವಿಧಾನಸಭೆ ಅಧಿವೇಶನ | ಪರಸ್ಪರ ಬೈದಾಡಿಕೊಂಡ ಈಶ್ವರಪ್ಪ ಮತ್ತು ಡಿಕೆಶಿ | ks eshwarappa |

Next Post

ಸದನದಲ್ಲಿ ಈ ರೀತಿ ಪ್ರದರ್ಶಿಸುವುದು ಧ್ವಜ ಸಂಹಿತೆ ಉಲ್ಲಂಘನೆ : ಮುಖ್ಯಮಂತ್ರ ಬೊಮ್ಮಾಯಿ

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಸದನದಲ್ಲಿ ಈ ರೀತಿ ಪ್ರದರ್ಶಿಸುವುದು ಧ್ವಜ ಸಂಹಿತೆ ಉಲ್ಲಂಘನೆ : ಮುಖ್ಯಮಂತ್ರ ಬೊಮ್ಮಾಯಿ

ಸದನದಲ್ಲಿ ಈ ರೀತಿ ಪ್ರದರ್ಶಿಸುವುದು ಧ್ವಜ ಸಂಹಿತೆ ಉಲ್ಲಂಘನೆ : ಮುಖ್ಯಮಂತ್ರ ಬೊಮ್ಮಾಯಿ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada