• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಯವರಿಗೆ ಹುತಾತ್ಮರು ಹಿಡಿದ ರಾಷ್ಟ್ರ ಧ್ವಜದ ಬೆಲೆಯೂ ಗೊತ್ತಿಲ್ಲ : ಸಿದ್ದರಾಮಯ್ಯ ಆಕ್ರೋಶ

Any Mind by Any Mind
August 23, 2022
in ಕರ್ನಾಟಕ
0
ತಮ್ಮ ಭ್ರಷ್ಟಾಚಾರಕ್ಕೆ ಬಿಜೆಪಿ ನನ್ನ ಮಗನ ಹೆಸರನ್ನು ಎಳೆದು ತಂದಿದೆ : ಸುಪ್ರೀಂ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಯಲಿ – ಸಿದ್ದರಾಮಯ್ಯ
Share on WhatsAppShare on FacebookShare on Telegram

ಈಶ್ವರಪ್ಪ ಕೇಸರಿ ಭಾವುಟ ಹೇಳಿಕೆ ಕುರಿತು ಮತ್ತೆ ಕಿಡಿಕಾರಿರುವ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಬಿಜೆಪಿ ಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರೆ, ಅವರು ನಮ್ಮ ರಾಷ್ಟ್ರ ಧ್ವಜವನ್ನು ಹಿಡಿದು ಬ್ರಿಟಿಷರ ವಿರುದ್ಧ ಹೋರಾಡಿದ್ದರೆ ಅವರಿಗೆ ನಮ್ಮ ರಾಷ್ಟ್ರ ಧ್ವಜ (National Flag) ಮತ್ತು ರಾಷ್ಟ್ರೀಯ ಲಾಂಛನಗಳ ಬಗ್ಗೆ ನಿಜವಾದ ಗೌರವ-ಭಕ್ತಿ ಇರುತ್ತಿತ್ತು ಎಂದು ಕಿಡಿಕಾರಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯಿಸಿದ ಅವರು,  ಬಿಜೆಪಿ ಯವರು ಸ್ವಾತಂತ್ರ್ಯ ಹೋರಾಟದಲ್ಲಿ (freedom Fighters) ಭಾಗವಹಿಸಿದ್ದರೆ, ಅವರು ನಮ್ಮ ರಾಷ್ಟ್ರ ಧ್ವಜವನ್ನು ಹಿಡಿದು ಬ್ರಿಟಿಷರ ವಿರುದ್ಧ ಹೋರಾಡಿದ್ದರೆ ಅವರಿಗೆ ನಮ್ಮ ರಾಷ್ಟ್ರ ಧ್ವಜ ಮತ್ತು ರಾಷ್ಟ್ರೀಯ ಲಾಂಛನಗಳ ಬಗ್ಗೆ ನಿಜವಾದ ಗೌರವ-ಭಕ್ತಿ ಇರುತ್ತಿತ್ತು.  ಇವರು ಸ್ವಾತಂತ್ರ್ಯ ಹೋರಾಟದಲ್ಲೂ ಭಾಗವಹಿಸಲಿಲ್ಲ. ರಾಷ್ಟ್ರ ಧ್ವಜವನ್ನೂ ಬ್ರಿಟಿಷರ ವಿರುದ್ಧ ಹಿಡಿಯಲಿಲ್ಲ. ಹೀಗಾಗಿ ಇವರ ಮನಸ್ಥಿತಿಯೇ ರಾಷ್ಟ್ರ ಧ್ವಜದ ವಿರುದ್ಧ ಇದೆ.  ರಾಷ್ಟ್ರಧ್ವಜ ಮತ್ತು ಈಶ್ವರಪ್ಪ (eshwarappa) ಅವರ ಸಚಿವ ಸ್ಥಾನ ಇವೆರಡರಲ್ಲಿ ನಿಮಗೆ ಯಾವುದು ಮುಖ್ಯ ಎನ್ನುವ ಪ್ರಶ್ನೆಯನ್ನು ನಾವು ಬಿಜೆಪಿ (BJP) ಮುಂದಿಟ್ಟೆವು ಎಂದು ಹೇಳಿದ್ದಾರೆ.

ಬಿಜೆಪಿ ರಾಷ್ಟ್ರ ಧ್ವಜಕ್ಕಿಂತ ಸಚಿವ ಸ್ಥಾನವೇ ಮುಖ್ಯ ಎಂದು ಹಠ ಹಿಡಿದು ಕುಳಿದಿದೆ. ರಾಷ್ಟ್ರೀಯ ಲಾಂಛನಗಳಿಗೆ ಅವಮಾನ ಮಾಡುವುದು ರಾಷ್ಟ್ರದ್ರೋಹ ಮತ್ತು ಸ್ಪಷ್ಟ ಕಾನೂನಿನ ಉಲ್ಲಂಘನೆ. “ನಾವು ರಾಷ್ಟ್ರ ಧ್ವಜಕ್ಕಾದರೂ ಅವಮಾನ ಮಡುತ್ತೀವಿ, ಕಾನೂನನ್ನೂ ಉಲ್ಲಂಘಿಸುತ್ತೀವಿ. ಯಾರೂ ಪ್ರಶ್ನಿಸಬಾರದು’ ಎನ್ನುವ ಬಿಜೆಪಿ  ಧೋರಣೆಯನ್ನು ನಾವು ಪ್ರತಿಭಟಿಸುತ್ತಿದ್ದೀವಿ.

ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡುವುದು ಬಿಜೆಪಿಯವರಿಗೆ ಸಣ್ಣ ವಿಷಯ ಇರಬಹುದು. ಆದರೆ ನಮಗೆ ಇದು ಬಹಳ ಗಂಭೀರವಾದ ಸಂಗತಿ. ರಾಷ್ಟ್ರಧ್ವಜ ಹಿಡಿದು ಲಕ್ಷಾಂತರ ಮಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟದ ಮೌಲ್ಯ ಬಿಜೆಪಿಯವರಿಗೆ ಗೊತ್ತಿಲ್ಲವಾದ್ದರಿಂದ ಅವರಿಗೆ ಹುತಾತ್ಮರ ಬೆಲೆ ಕೂಡ ಗೊತ್ತಿಲ್ಲ.  ಹುತಾತ್ಮರು ಹಿಡಿದ ರಾಷ್ಟ್ರ ಧ್ವಜದ ಬೆಲೆಯೂ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿರೋಧ ಪಕ್ಷಕ್ಕೆ ನೈತಿಕತೆ ಇಲ್ಲ ಎನ್ನುವ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮಾತಿಗೆ ಪ್ರತಿಕ್ರಿಯಿಸಿ, ನಮಗೆ ಬೊಮ್ಮಾಯಿ ಅವರಿಗಿಂತ ಹೆಚ್ಚು ಹೋರಾಟದ ಅನುಭವವಿದೆ. ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನ ನಮಗೆ ಗೊತ್ತಿದೆ. ಅವರಿಗೇನು ಗೊತ್ತಿದೆ‌ ಇದೆಲ್ಲಾ. ಹೀಗಾಗಿ ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನವನ್ನು ಸಹಿಸಿಕೊಳ್ಳಿ ಎಂದು ಅವರು ಹೇಳಿದರೆ ನಾವು ಸಹಿಸಿಕೊಳ್ಳಲು ಸಿದ್ದರಿಲ್ಲ. ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತೇವೆ ಎಂದು ಹೇಲಿದ್ದಾರೆ.

ಬರಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚರ್ಚಿಸುವ ಉದ್ದೇಶದಿಂದ ಮುಂಬರುವ 25 ಕ್ಕೆ ಹೈಕಮಾಂಡ್ ನನ್ನನ್ನು ಕರೆದಿದೆ. ಅದಕ್ಕೆ ದೆಹಲಿಗೆ ಹೋಗುತ್ತಿದ್ದೇನೆ. ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿಯವರ ಸಾರಥ್ಯದಲ್ಲಿ ಸಭೆ ನಡೆಯಲಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

Tags: BJPCongress PartyCovid 19freedom FightersNational Flagsiddaramaiahಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ನ್ಯಾಯಾಧೀಶರನ್ನು ವಜಾ ಮಾಡಿ : ಡಿಕೆ ಶಿವಕುಮಾರ್ ಆಗ್ರಹ

Next Post

ಶ್ರೀಲಂಕಾ ಟಿ20 & ಟೆಸ್ಟ್‌  ಸರಣಿಗೆ ಭಾರತ ತಂಡ ಪ್ರಕಟಿಸಿದ BCCI : ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌ಗೆ ವಿಶ್ರಾಂತಿ!

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
ಶ್ರೀಲಂಕಾ ಟಿ20 & ಟೆಸ್ಟ್‌  ಸರಣಿಗೆ ಭಾರತ ತಂಡ ಪ್ರಕಟಿಸಿದ BCCI  : ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌ಗೆ ವಿಶ್ರಾಂತಿ!

ಶ್ರೀಲಂಕಾ ಟಿ20 & ಟೆಸ್ಟ್‌  ಸರಣಿಗೆ ಭಾರತ ತಂಡ ಪ್ರಕಟಿಸಿದ BCCI : ವಿರಾಟ್‌ ಕೊಹ್ಲಿ, ರಿಷಭ್‌ ಪಂತ್‌ಗೆ ವಿಶ್ರಾಂತಿ!

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada