• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಿದೇಶ

ಉಕ್ರೇನ್ ಮೇಲೆ ರಷ್ಯಾ ದಾಳಿ | ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ

Any Mind by Any Mind
February 24, 2022
in ವಿದೇಶ
0
ಉಕ್ರೇನ್ ಮೇಲೆ ರಷ್ಯಾ ದಾಳಿ | ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ
Share on WhatsAppShare on FacebookShare on Telegram

ನಿರೀಕ್ಷಿಸಿದಂತೆ ರಷ್ಯಾ ಉಕ್ರೇನ್ ಮೇಲೆ ವಾಯು ದಾಳಿ ನಡೆಸಿದೆ. ಉಕ್ರೇನ್ ರಾಜಧಾನಿ ಕೀವ್ ನಗರವನ್ನು ಕೇಂದ್ರೀಕರಿಸಿ ಮತ್ತು ದೇಶದ ರಕ್ಷಣಾ ವ್ಯವಸ್ಥೆಯನ್ನು ಕೇಂದ್ರೀಕರಿಸಿ ದಾಳಿ ನಡೆಸಲಾಗಿದೆ.

ADVERTISEMENT

ರಷ್ಯಾ ದಾಳಿಯ ಪರಿಣಾಮ ಜಾಗತಿಕ ಆರ್ಥಿಕ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ. ಕಚ್ಚಾ ತೈಲದರ ಪ್ರತಿ ಬ್ಯಾರೆಲ್ಲಿಗೆ ನೂರು ಡಾಲರ್ ಗಡಿದಾಟಿದೆ. ಭಾರತೀಯ ಷೇರುಪೇಟೆಯಲ್ಲಿ ರಕ್ತದೋಕುಳಿ ನಡೆದಿದ್ದು, ಬಹುತೇಕ ಎಲ್ಲಾ ಸೂಚ್ಯಂಕಗಳು ಶೇ.3-5ರಷ್ಟು ಕುಸಿತ ದಾಖಲಿಸಿವೆ. ಯುದ್ಧ ಭೀತಿಯ ಹಿನ್ನೆಲೆಯಲ್ಲಿ ಚಿನ್ನದ ದರವೂ ಜಿಗಿದಿದೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್‌ನಲ್ಲಿ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದ್ದಾಗಿ ಘೋಷಿಸಿದ್ದಾರೆ. ರಷ್ಯಾದ ಕ್ರಮದಲ್ಲಿ ಹಸ್ತಕ್ಷೇಪ ಮಾಡುವ ಯಾವುದೇ ದೇಶದ ಯಾವುದೇ ಪ್ರಯತ್ನವು ಹಿಂದೆಂದೂ ನೋಡಿರದ ಪರಿಣಾಮಗಳಿಗೆ ಕಾರಣವಾಗಬಹುದು ಎಂದೂ ಅವರು ಇತರ ದೇಶಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಪುಟಿನ್ ಘೋಷಣೆ ಮಾಡುತ್ತಿದ್ದಂತೆ ರಷ್ಯಾ ವಾಯುಪಡೆ ದಾಳಿ ಆರಂಭಿಸಿತು. ಉಕ್ರೇನ್‌ನ ಕೈವ್, ಖಾರ್ಕಿವ್ ಮತ್ತು ಇತರ ಪ್ರದೇಶಗಳಲ್ಲಿ ದೊಡ್ಡ ಸ್ಫೋಟಗಳು ಕೇಳಿಬಂದವು.

ಪುಟಿನ್ ಅವರ ಆಕ್ರಮಣಶೀಲ ದಾಳಿದಿಂದ ದೇಶವು ತನ್ನನ್ನು ತಾನು ರಕ್ಷಿಸಿಕೊಳ್ಳಲಿದೆ ಎಂದು ಉಕ್ರೇನ್‌ನ ವಿದೇಶಾಂಗ ವ್ಯವಹಾರಗಳ ಸಚಿವರು ಹೇಳಿದ್ದಾರೆ. ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳುತ್ತದೆ ಮತ್ತು ಗೆಲ್ಲುತ್ತದೆ ಎಂದೂ ತಿಳಿಸಿದ್ದಾರೆ.

ಕೆಲವೇ ಗಂಟೆಗಳಲ್ಲಿ ರಷ್ಯಾ ಉಕ್ರೇನ್ ಅನ್ನು ಆಕ್ರಮಿಸಲಿದೆ ಎಂದು ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಹೇಳಿಕೆ ನೀಡಿದ ಕೆಲವೇ ಹೊತ್ತಿನಲ್ಲಿ ಪುಟಿನ್ ಪಡೆ ಆಕ್ರಮಣ ನಡೆಸಿದೆ.

ಉಕ್ರೇನಿನ ಆಕ್ರಮಣವನ್ನು ಹಿಮ್ಮೆಟ್ಟಿಸಲು ಪ್ರತ್ಯೇಕತಾವಾದಿಗಳು ಕ್ರೆಮ್ಲಿನ್‌ಗೆ ಸಹಾಯವನ್ನು ಕೇಳಿದ್ದಾರೆ ಎಂದು ರಷ್ಯಾ ಹೇಳಿತ್ತು. ಆದಾದ ನಂತರ ದಾಳಿ ನಡೆದಿದೆ. ಇತ್ತೀಚೆಗಷ್ಟೇ ರಷ್ಯಾ ಪೂರ್ವ ನಗರ ಡೊನೆಟ್ಸ್ಕ್ ಸೇರಿದಂತೆ ಎರಡು ಪ್ರದೇಶಗಳನ್ನು ಸ್ವತಂತ್ರ ಪ್ರದೇಶಗಳೆಂದು ಘೋಷಿಸಿತ್ತು. ನಂತರ ಅಲ್ಲಿ ಶಾಂತಿ ಪಾಲನೆಯ ಹೆಸರಿನಲ್ಲಿ ಸೇನಾ ತುಕಡಿಗಳನ್ನು ನಿಯೋಜಿಸಿದ್ದರಿಂದ ಗಡಿಯಲ್ಲಿ ಉದ್ವಿಘ್ನತೆ ಹೆಚ್ಚಾಗಿತ್ತು.

ಈ ನಡುವೆ ಉಕ್ರೇನ್ ತನ್ನ ವಿಮಾನ ನಿಲ್ದಾಣಗಳನ್ನು ಮುಚ್ಚಿದೆ. ತನ್ನ ವಾಯುಪ್ರದೇಶದಲ್ಲಿ ಹಾರಾಟ ನಡೆದಂತೆ ಎಚ್ಚರಿಕೆ ನೀಡಿದೆ.

ವಿಶ್ವಸಂಸ್ಥೆ ತುರ್ತು ಸಭೆ: ರಷ್ಯಾ ಉಕ್ರೇನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯು ತುರ್ತು ಸಭೆ ಕರೆದಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ದೇಶಗಳ ರಾಜತಾಂತ್ರಿಕರು ರಷ್ಯಾ ನಡೆಯನ್ನು ಖಂಡಿಸಿದ್ದಾರೆ. ‘ಉಕ್ರೇನ್, ನೀವು ಒಬ್ಬಂಟಿಯಾಗಿಲ್ಲ’ ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳಿದ್ದಾರೆ.

ಈ ನಡುವೆ, ವಿಶ್ವಸಂಸ್ಥೆಯಲ್ಲಿ ಸದಾ ರಷ್ಯಾವನ್ನು ಬೆಂಬಲಿಸುತ್ತಿದ್ದ ಚೀನಾ ಕೂಡಾ ವಿಶ್ವಸಂಸ್ಥೆ ಸಭೆಯಲ್ಲಿ ದೇಶಗಳ ಸಾರ್ವಭೌಮತ್ವ ಮತ್ತು ಅಂತರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ಗಡಿಗಳನ್ನು ಗೌರವಿಸುವ ವಿಶ್ವ ಸಂಸ್ಥೆಯ ದೀರ್ಘಕಾಲದ ತತ್ವದ ಪರವಾಗಿ ಮಾತನಾಡಿದ್ದು, ರಷ್ಯಾ ನಡೆಯನ್ನು ಪರೋಕ್ಷವಾಗಿ ಖಂಡಿಸಿದೆ.

ವಾಪಾಸಾದ ಭಾರತೀಯ ವಿಮಾನ

ಉಕ್ರೇನ್ ನಲ್ಲಿ ಉಳಿದಿರುವ ವಿದ್ಯಾರ್ಥಿಗಳು ಮತ್ತು ನಾಗರಿಕರನ್ನು ಕರೆತರಲು ಹೊರಟಿದ್ದ ಏರ್ ಇಂಡಿಯಾ ವಿಮಾನ ನೋಟಮ್ (ವಿಮಾನ ಇಳಿಯದಂತೆ ನೀಡುವ ಸೂಚನೆ) ಸೂಚನೆ ಹಿನ್ನೆಲೆಯಲ್ಲಿ ದೆಹಲಿಗೆ ವಾಪಾಸು ಹಿಂದಿರುಗಿದೆ. ಇದಕ್ಕೂ ಮೊದಲು ವಿದ್ಯಾರ್ಥಿಗಳು ಮತ್ತು ನಾಗರಿರನ್ನು ಹೊತ್ತಿದ್ದ ಮತ್ತೊಂದು ವಿಶೇಷ ವಿಮಾನ ಸುರಕ್ಷಿತವಾಗಿ ದೆಹಲಿಗೆ ಬಂದಿಳಿದಿತ್ತು.

ರಷ್ಯಾ ಯುದ್ಧತಂತ್ರ:

ರಷ್ಯಾ ದಾಳಿಯ ಆರಂಭದಲ್ಲೇ ಉಕ್ರೇನಿನ ವಾಯುಪಡೆ ಗುರಿಯಾಗಿಸಿ ದಾಳಿ ಮಾಡಿದೆ. ಇದು ಅತ್ಯಂತ ಆಕ್ರಮಣಶೀಲ ಯುದ್ಧತಂತ್ರ. ಉಕ್ರೇನಿನ ಸೇನೆಯನ್ನು ಕೇಂದ್ರವಾಗಿರಿಸಿ ದಾಳಿ ಮುಂದುವರೆಸಲಾಗಿದೆ. ಈ ತಂತ್ರದಿಂದ ಭೂಸೇನೆ ಚಲನೆಯನ್ನು ನಿಯಂತ್ರಿಸುವುದಲ್ಲದೇ, ಗಡಿ ಭಾಗ ತಲುಪಲು ಅವಕಾಶ ನೀಡದಂತೆ ಸಂಪರ್ಕವನ್ನೇ ಕಡಿದು ಹಾಕುವ ಪ್ರಯತ್ನವಾಗಿದೆ.

Tags: ಅಂತಾರಾಷ್ಟ್ರೀಯ ತೈಲಅಲ್ಲೋಲ ಕಲ್ಲೋಲಉಕ್ರೇನ್-ರಷ್ಯಾಜಾಗತಿಕ ಆರ್ಥಿಕ ಮಾರುಕಟ್ಟೆರಷ್ಯಾವಾಯು ದಾಳಿ
Previous Post

ತಮಿಳುನಾಡಿನಲ್ಲಿ ಮೂರನೇ ದೊಡ್ಡ ಪಕ್ಷ ಎಂಬ ಬಿಜೆಪಿ ಹೇಳಿಕೆ ನಿಜಕ್ಕೂ ಸರಿಯಿದೆಯೇ?

Next Post

ಉಕ್ರೇನ್ ಮೇಲೆ ರಷ್ಯಾ ದಾಳಿ : 8 ಮಂದಿ ಸಾವು, 9 ಜನರಿಗೆ ಗಾಯ!

Related Posts

Top Story

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣಾ ಪ್ರಚಾರದಲ್ಲಿರುವ (Bihar Election) ರಾಹುಲ್‌ ಗಾಂಧಿ (Rahul Gandhi) ಇಂದು ಬೇಗುಸರೈಯ ಹಳ್ಳಿಯ ಕೊಳದಲ್ಲಿ ಮೀನು (Fishing) ಹಿಡಿದು ಸುದ್ದಿಯಾಗಿದ್ದಾರೆ. ತಮ್ಮ ಭಾಷಣವನ್ನು ಮುಗಿಸಿದ...

Read moreDetails

N Chaluvarayaswami: ಫಿಲಿಪೈನ್ಸ್ ಕೃಷಿವಿ.ವಿಗಳಿಗೆ ಸಚಿವ .ಎನ್ ಚಲುವರಾಯಸ್ವಾಮಿ ಭೇಟಿ

October 16, 2025

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

October 7, 2025
ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

ಸರ್ಕಾರ ಸಂಫೂರ್ಣ ಮೌನ , ಸೇನೆ ಸದಾ ಸಿದ್ದ !

October 5, 2025
 ಮೋದಿ ಹಿಟ್ಲರ್‌ ನಂತೆ ಆಡಳಿತ !

 ಮೋದಿ ಹಿಟ್ಲರ್‌ ನಂತೆ ಆಡಳಿತ !

October 2, 2025
Next Post
ಉಕ್ರೇನ್ ಮೇಲೆ ರಷ್ಯಾ ದಾಳಿ : 8 ಮಂದಿ ಸಾವು, 9 ಜನರಿಗೆ ಗಾಯ!

ಉಕ್ರೇನ್ ಮೇಲೆ ರಷ್ಯಾ ದಾಳಿ : 8 ಮಂದಿ ಸಾವು, 9 ಜನರಿಗೆ ಗಾಯ!

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada