• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹೈ ಕೋರ್ಟ್ ಚಾಟಿ ಬಳಿಕ ಎಚ್ಚೆತ್ತುಕೊಂಡ ಬಿಬಿಎಂಪಿ : ವೇಗ ಪಡೆದ ರಸ್ತೆ ದುರಸ್ತಿ ಕಾರ್ಯ

ಕರ್ಣ by ಕರ್ಣ
February 25, 2022
in ಕರ್ನಾಟಕ
0
ಹೈ ಕೋರ್ಟ್ ಚಾಟಿ ಬಳಿಕ ಎಚ್ಚೆತ್ತುಕೊಂಡ ಬಿಬಿಎಂಪಿ : ವೇಗ ಪಡೆದ ರಸ್ತೆ ದುರಸ್ತಿ ಕಾರ್ಯ
Share on WhatsAppShare on FacebookShare on Telegram

ರಸ್ತೆ ಗುಂಡಿಗಳಿಂದ ಸಾಲು ಸಾಲಾಗಿ ಛೀಮಾರಿ ಬಿದ್ದ ಬಳಿಕ ಪಾಲಿಕೆ ಎಚ್ಚೆತ್ತುಕೊಂಡಂತಿದೆ. ಬಿಬಿಎಂಪಿ ನಗರ ಸೇರಿದಂತೆ ತನ್ನ ವ್ಯಾಪ್ತಿಯಲ್ಲಿ ಬರುವ ಹಳ್ಳಿ ಪ್ರದೇಶಗಳ ರಸ್ತೆ ದುರಸ್ತಿ ಬಗ್ಗೆಯೂ ಗಮನ ಹರಿಸಿದೆ. ಈ ಹಿನ್ನೆಲೆ ಇಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ನೇತೃತ್ವದಲ್ಲಿ ವರ್ಚುವಲ್ ಸಭೆ ಮಾಡಲಾಗಿದ್ದು ವಾರ್ಡ್ ಮಟ್ಟದ ಅಧಿಕಾರಿಗಳಿಗೆ ದುರಸ್ತಿ ನಡೆಸುವ ಬಗ್ಗೆ ಸಲಹೆ ಸೂಚನೆ ನೀಡಲಾಗಿದೆ.

ADVERTISEMENT

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಲ್ಲಿ ಜಲಂಡಳಿಯಿಂದ ಸಂಪೂರ್ಣ ಕಾಮಗಾರಿ ಮುಗಿದ ಕಡೆ ರಸ್ತೆ ಅಗೆಯಲಾಗಿರುವ ರಸ್ತೆ ಭಾಗಗಳ ದರಸ್ತಿ ಕೆಲಸಗಳು ಆದಷ್ಟು ವ್ಯವಸ್ಥಿತ ರೀತಿಯಲ್ಲಿ, ದೀರ್ಘ ಬಾಳಿಕೆ ಬರುವ ರೀತಿಯಲ್ಲಿ ಆಗಬೇಕು ಎಂದು ಮಾನ್ಯ ಮುಖ್ಯ ಆಯುಕ್ತರಾದ ಗೌರವ್ ಗುಪ್ತರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ಜಲಮಂಡಳಿಯಿಂದ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಅಗೆದಿರುವ ರಸ್ತೆಗಳ ಪೈಕಿ ಎಲ್ಲೆಲ್ಲಿ ಕೆಲಸ ಪೂರ್ಣಗೊಂಡಿದೆಯೋ ಅಂತಹ ರಸ್ತೆಗಳನ್ನು ಸುಗಮ ಓಡಾಟಕ್ಕೆ ಹಾಗೂ ಚರಂಡಿಗಳ ಕೆಲಸಗಳನ್ನು ಶೀಘ್ರವಾಗಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜಲಮಂಡಳಿಗೆ ಸಂಬಂಧಿಸಿದಂತೆ ಯಾವುದೇ ವಿಚಾರಗಳಿದ್ದರೂ ಅದನ್ನು ಮುಖ್ಯ ಎಂಜಿನಿಯರ್ ಗಮನಕ್ಕೆ ತರಬೇಕು, ಬಗೆಹರಿಯದಿದ್ದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಅಗೆಯಲಾಗಿರುವ ರಸ್ತೆ ಭಾಗಗಳ ಪುನರ್ ಸ್ಥಾಪನೆ ಕೆಲಸಗಳು ಶೀಘ್ರವಾಗಿ, ಮಳೆಗಾಲ ಆರಂಭಕ್ಕೂ ಮುನ್ನ ವ್ಯವಸ್ಥಿತವಾಗಿ ಆಗಬೇಕು. ರಸ್ತೆ ದುರಸ್ತಿಯಿರುವ ಕಡೆ ವಾಹನಗಳ ಓಡಾಟಕ್ಕೆ ಅನುವಾಗುವಂತಿರಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನಿಗದಿತ ಸಮಯದಲ್ಲಿ ಕೆಲವನ್ನು ಪೂರ್ಣಗೊಳಿಸಬೇಕು ಸಭೆಯ ನಂತ ಮಾಧ್ಯಮಗಳಿಗೆ ಹೇಳಿದರು.

ಎರಡು ತಿಂಗಳೊಳಗಾಗಿ ಕಾಮಗಾರಿ ಮುಗಿಸಲು ಸೂಚನೆ

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಸಂಬಂಧಿಸಿದಂತೆ ರಸ್ತೆ ಪುನರ್ ಸ್ಥಾಪನೆಯ ಸಂಪೂರ್ಣ ಕಾಮಗಾರಿಯನ್ನು ಎರಡು ತಿಂಗಳೊಳಗಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ. ಎಲ್ಲೆಲ್ಲಿ ರಸ್ತೆ ಡಾಂಬರೀಕರಣದ ಕೆಲಸವಾಗುತ್ತಿದೆ ಎಂಬ ಬಗ್ಗೆ ಪ್ರತಿನಿತ್ಯ ಮಾಹಿತಿಯನ್ನು ಪಾಲಿಕೆ ಕೇಂದ್ರ ಕಛೇರಿಗೆ ಸಲ್ಲಿಸಲು ಹೇಳಲಾಗಿದೆ. ಜೊತೆಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿಭಾಯಿಸಿ ತ್ವರಿತಗತಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಶೀಘ್ರವೇ ಅವಕಾಶ ಕಲ್ಪಿಸಲು ಸೂಚಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಮೂಲಭೂತ ಸೌಕರ್ಯ ವಿಭಾಗಕ್ಕೆ ಸಂಬಂಧಿಸಿದ ರಸ್ತೆಗಳ ನಿರ್ವಹಣೆಯು ಸರಿಯಾಗಿ ಆಗಬೇಕು. ಈ ಸಂಬಂಧ ಕಾರ್ಯಪಾಲಕ ಇಂಜಿನಿಯರ್ ಗಳು ರಸ್ತೆಗಳ ಮೇಲ್ವಿಚಾರಣೆ ನಡೆಸಿ ಉತ್ತಮ ಗುಣಮಟ್ಟದ ರೀತಿಯಲ್ಲಿ ರಸ್ತೆಗಳಿರುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮೂಲಭೂತ ಸೌಕರ್ಯ ವಿಭಾಗಕ್ಕೆ ಸಂಬಂಧಿಸಿದಂತೆ 183.38 ಕಿ.ಮೀ ಉದ್ದದ 139 ರಸ್ತೆಗಳ ಪೈಕಿ 84.14 ಕಿ.ಮೀ ಉದ್ದದ 72 ರಸ್ತೆಗಳಿಗೆ ಡಾಂಬರೀಕರಣ ಮಾಡಲಾಗಿದ್ದು, 99.24 ಕಿ.ಮೀ ಉದ್ದದ 67 ರಸ್ತೆಗಳಿಗೆ ಡಾಂಬರೀಕರಣ ಮಾಡುವ ಕೆಲಸ ಪ್ರಗತಿಯಲ್ಲಿದ್ದು, ಶೀಘ್ರ ಡಾಂಬರೀಕರಣ ಆಗಲಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿ ಅಡಿ 113 ಕಿ.ಮೀ ರಾಜಕಾಲುವೆಯನ್ನು ಅಭಿವೃದ್ಧಿಪಡಿಸುತ್ತಿದ್ದು, ಅದರಲ್ಲಿ ಈಗಾಗಲೇ 96 ಕಿ.ಮೀ ಉದ್ದದ ರಾಜಕಾಲುವೆಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದೆ. ಬಾಕಿ ಉಳಿದ 17 ಕಿ.ಮೀ ಉದ್ದದ ರಾಜಕಾಲುವೆ ದುರಸ್ತಿ ಕಾಮಗಾರಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಒಟ್ಟಾರೆ ರಸ್ತೆ ದುರಸ್ತಿ ಬಗ್ಗೆ ಹೈ ಕೋರ್ಟ್ ಬೀಸಿದ ಚಾಟಿಯಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ತ್ವರಿತಗತಿಯಲ್ಲಿ ಕೆಲಸ ಮುಗಿಸಲು ಪಣತೊಟ್ಟಿದೆ.

Tags: BJPCongress PartyCovid 19ಕರೋನಾಕೋವಿಡ್-19ದುರಸ್ತಿ ಕಾರ್ಯನರೇಂದ್ರ ಮೋದಿಬಿಜೆಪಿಹೈ ಕೋರ್ಟ್
Previous Post

ವೈಚಾರಿಕ-ಧೋರಣೆ ಇಲ್ಲದ ಪ್ರಗತಿಪರತೆ ಬೌದ್ಧಿಕ ನಿರ್ವಾತ ಸೃಷ್ಟಿಸುತ್ತದೆ

Next Post

‘ಎನ್‌ಎಸ್‌ಇ ಯೋಗಿ’ ಪ್ರಕರಣ (NSE yogi case) | ಸಿಬಿಐ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಬಂಧನ

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
‘ಎನ್‌ಎಸ್‌ಇ ಯೋಗಿ’ ಪ್ರಕರಣ (NSE yogi case) | ಸಿಬಿಐ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಬಂಧನ

'ಎನ್‌ಎಸ್‌ಇ ಯೋಗಿ' ಪ್ರಕರಣ (NSE yogi case) | ಸಿಬಿಐ ಮಾಜಿ ಸಿಒಒ ಆನಂದ್ ಸುಬ್ರಮಣಿಯನ್ ಬಂಧನ

Please login to join discussion

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada