• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಬಿಎಂಪಿ ಚುನಾವಣೆ ಮುಂದೂಡಲು ತಂತ್ರ‌ ಹೂಡಿದ ಬಿಜೆಪಿ ವರಿಷ್ಠರು!

ಕರ್ಣ by ಕರ್ಣ
March 5, 2022
in ಕರ್ನಾಟಕ
0
ಬಿಬಿಎಂಪಿ ಚುನಾವಣೆ ಮುಂದೂಡಲು ತಂತ್ರ‌ ಹೂಡಿದ ಬಿಜೆಪಿ ವರಿಷ್ಠರು!
Share on WhatsAppShare on FacebookShare on Telegram

ಬಿಬಿಎಂಪಿ ಚುನಾವಣೆ (BBMP ELECTION) ನೆನೆಗುದಿಗೆ ಬಿದ್ದಿದ್ದು ಇದೀಗ ಮತ್ತೆ ಬಿಜೆಪಿಯ ಪ್ರಭಾವಿ ಸಚಿವರುಗಳೇ ಚುನಾವಣೆ ಮತ್ತಷ್ಟು ಮುಂದೂಡಲು ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ವಿಧಾನಸಭೆ ಚುನಾವಣೆ (Assembly elections) ಮುಗಿಯುವರೆಗೆ ಪಾಲಿಕೆ‌ ಚುನಾವಣೆ ನಡೆಸದೇ ಇರಲು ಬಿಜೆಪಿ ಮುಖಂಡರ ಗೌಪ್ಯ ಸಭೆಯಲ್ಲಿ ನಿರ್ಧರಿಸಲಾಗಿದೆ. ಈಗಾಗಲೇ ಕಳೆದ ಎರಡು ವರ್ಷಗಳಿಂದ ಪಾಲಿಕೆ ಸದಸ್ಯರಿಲ್ಲದೆ ಖಾಲಿ ಹೊಡೆಯುತ್ತಿದ್ದು, ಬಿಜೆಪಿಯ ಕಾರ್ಪೋರೆಟ್ ಟಿಕೆಟ್ (BJP Corporater Ticket) ಆಕಾಂಕ್ಷೆಗಳು ಚುನಾವಣೆ ನಡೆಸುವಂತೆ ದುಂಬಾಲು ಬಿದ್ದಿದ್ದಾರೆ. ಆದರೆ ಬೆಂಗಳೂರಿನ ಬಿಜೆಪಿ ಶಾಸಕರು (Bengaluru BJP MLA’s) ಹಾಗೂ ಸಚಿವರು ಚುನಾವಣೆ ನಡೆಸದೆ ಇರಲು ತೀರ್ಮಾನ ಮಾಡಿದ್ದಾರೆ. ಖುದ್ದು ಬಿಜೆಪಿ ವರಿಷ್ಠರೇ ಪಾಲಿಕೆ ಚುನಾವಣೆಯಿಂದ ಹಿಂದೇಟು ಹಾಕುತ್ತಿದ್ದು, ಮುಂದಿನ ವರ್ಷದ ಜೂನ್ ನಲ್ಲಿ ಪಾಲಿಕೆ‌ ಚುನಾವಣೆಗೆ ಅಣಿಯಾಗುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಮುಖಂಡರು (Congress Leaders) ವಿರೋಧ ವ್ಯಕ್ತ ಪಡಿಸುತ್ತಿದ್ದು, ಆದಷ್ಡು ಬೇಗ ಚುನಾವಣೆ ನಡೆಸಲು ಒತ್ತಾಯಿಸಿದ್ದಾರೆ.

ADVERTISEMENT

ಪಿಸಿ ಮೋಹನ್ (PC Mohan) ಮನೆಯಲ್ಲಿ ಬಿಜೆಪಿ ಮುಖಂಡರ ಗೌಪ್ಯ ಸಭೆ!

ಕಳೆದ ವಾರ ಬಿಜೆಪಿಯ ಕೇಂದ್ರ ಮುಖಂಡರ ಜೊತೆ ರಾಜ್ಯ ಬಿಜೆಪಿ ಮುಖಂಡರ ಚರ್ಚೆ ನಡೆದಿದೆ. ಸಂಸದ ಪಿ ಸಿ ಮೋಹನ್ ಮನೆಯಲ್ಲಿ ನಡೆದ ಔತಣಕೂಟ ನೆಪದಲ್ಲಿ ನಡೆದ ಈ ಸಭೆಯಲ್ಲಿ ಶಾಸಕರಾದ ಸತೀಶ್ ರೆಡ್ಡಿ, ಎಂ.ಕೃಷ್ಣಪ್ಪ ಸೇರಿ ಕೆಲ ಮಾಜಿ ಕಾರ್ಪೋರೆಟರ್ ಗಳು ಭಾಗಿಯಾಗಿದ್ದರು. ಬಿಬಿಎಂಪಿ ಚುನಾವಣೆ ಬಗ್ಗೆ ಈ ಗೌಪ್ಯ ಸಭೆಯಲ್ಲಿ ಚರ್ಚೆ ನಡೆದಿದೆ. ಬೆಂಗಳೂರಿನ ಪ್ರಭಾವಿ ಸಚಿವರು ಯಾವುದೇ ಕಾರಣಕ್ಕೂ ಸದ್ಯಕ್ಕೆ ಚುನಾವಣೆ ಬೇಡ ಅಂತ ಈ ವೇಳೆ ಪಟ್ಟು ಹಿಡಿದಿದ್ದಾರೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಪಾಲಿಕೆ ಚುನಾವಣೆ ಬೇಡ ಎಂದು ಸಭೆಯಲ್ಲಿ ಪ್ರಭಾವಿ ಸಚಿವರು ಪ್ರಸ್ತಾಪ ಮಾಡಿದ್ದಾರೆ.

ಶಾಸಕ, ಸಚಿವರ ಮಾತಿಗೆ ಅಸಮಾಧಾನ ಹೊರ ಹಾಕಿದ ಬಿಜೆಪಿ ವಾರ್ಡ್ ಮುಖಂಡರು!

ಸಚಿವರ ಮಾತಿಗೆ ಬೆಂಗಳೂರು ಶಾಸಕರ ಸರ್ವಾನುಮತದ ಸಮ್ಮತಿ ಸೂಚಿಸಿದರೆ ಶಾಸಕರು ಸಚಿವರ ಮಾತು ಕೇಳಿ ಬೇಸರಗೊಂಡ ಕೆಲ ಮಾಜಿ ಕಾರ್ಫೋರೇಟರ್ ಗಳು ವಿಧಾನಸಭೆ ಚುನಾವಣೆಗೂ ಮುನ್ನ ಚುನಾವಣೆ ನಡೆಸಿ ಅಂತ ಪಟ್ಟು ಹಿಡಿದು ಕೂತಿದ್ದಾರೆ. ಆದರೆ ಚುನಾವಣೆ ಬೇಡವೆಂದು ಸಭೆಯಲ್ಲಿ ತೀರ್ಮಾನಿಸಿ ಸಿಎಂ ಬೊಮ್ಮಾಯಿ, ನಳೀನ್ ಕುಮಾರ್ ಕಟೀಲ್ ಹಾಗೂ ಸಂತೋಷ್ ಜಿ ಮುಂದಿಡಲಾಗಿದೆ.

ಈ ವೇಳೆಯ ಸಚಿವರು ಮತ್ತು ಶಾಸಕರ ಸ್ವಹಿತಾಸಕ್ತಿಯ ಮಾತು ಕೇಳಿ ಬಿಜೆಪಿಯ ಮಾಜಿ ಪಾಲಿಕೆ ಸದಸ್ಯರುಗಳು ತಬ್ಬಿಬ್ಬಾಗಿದ್ದಾರೆ. ಮುಂದಿನ ವರ್ಷ ಜೂನ್ ತಿಂಗಳಲ್ಲಿ ಬಿಬಿಎಂಪಿ ಚುನವಾಣೆ ನಡೆಸುವ ಅಲೋಚನೆ ಬಿಜೆಪಿ ವರಿಷ್ಠರದ್ದು. ಈಗ ಬಿಬಿಎಂಪಿ ಚುನಾವಣೆ ನಡೆದರೆ ಟಿಕೆಟ್ ಹಂಚಿಕೆ ವಿಚಾರವಾಗಿ ಭಿನ್ನಮತ ಸ್ಪೋಟ ಸಾಧ್ಯತೆ ಇದೆ. ಪ್ರತಿ ಕ್ಷೇತ್ರದಲ್ಲಿ ಅಕಾಂಕ್ಷಿಗಳ ಪಟ್ಟಿ ದೊಡ್ಡದಿದೆ, ಯಾರಿಗೂ ಟಿಕೆಟ್ ನೀಡಿದರೂ ಊಳಿದ ಆಕಾಂಕ್ಷಿಗಳು ರೆಬಲ್ ಆಗಿ ಮುನಿಸಿಕೊಳ್ಳುವ ಸಾಧ್ಯತೆ ಇದೆ.

ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಪಾಲಿಕೆ‌ ಚುನಾವಣೆ ಮುಂದೂಡಿಕೆ!

ವಲಸೆ ಶಾಸಕರ ಬೆಂಬಲಿಗರ ಆಕಾಂಕ್ಷಿಗಳಿದ್ದಾರೆ. ಅವರಿಗೆ ಟಿಕೆಟ್ ಕೊಟ್ಟರೆ ಮೂಲ ಬಿಜೆಪಿಗರಿಗೆ ಅಸಮಾಧಾನ ಮೂಡಲಿದೆ.‌ ಇದು ಮುಂದಿನ ವಿಧಾನಸಭಾ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.‌ ಹೀಗಾಗಿ ವಿಧಾನ ಸಭೆ ಚುನಾವಣೆ ಮುಗಿದ ಮೇಲೆ ಚುನಾವಣೆ ನಡೆಸೋಣ ಎಂದು ಮಾಜಿ ಸದಸ್ಯರನ್ನು ಮವೊಲಿಸಲಾಗಿದೆ. ಆದರೆ ಪ್ರಭಾವಿ ಸಚಿವರ ನಡೆಗೆ ಪಾಲಿಕೆ ಮಾಜಿ ಸದಸ್ಯರು ಹಾಗೂ ಕಾರ್ಪೊರೇಟ್ ಟಿಕೆಟ್ ಆಕಾಂಕ್ಷಿಗಳು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Tags: Assembly electionsAssembly Elections 2022BBMP ELECTIONBengaluru BJP MLA'sBJP Corporater TicketCongress LeadersPC Mohanಬಿಬಿಎಂಪಿ ಚುನಾವಣೆವಿಧಾನಸಭೆ ಚುನಾವಣೆ
Previous Post

ಕರಾವಳಿ ಕರ್ನಾಟಕ & ಕೇರಳ ಏಕೆ ಹಿಂಸಾತ್ಮಕ ರಾಜಕೀಯದ ಕೇಂದ್ರಗಳಾಗಿವೆ? – ಭಾಗ 2

Next Post

ರೈಲ್ವೆಗಾಗಿ ಯುಪಿಎಸ್ಸಿಯಿಂದ ಪ್ರತ್ಯೇಕ ಪರೀಕ್ಷೆ: ಬದಲಾಗಲಿದೆಯೇ ಭಾರತೀಯ ರೈಲ್ವೆಯ ರೂಪುರೇಷೆ?

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ರೈಲ್ವೆಗಾಗಿ ಯುಪಿಎಸ್ಸಿಯಿಂದ ಪ್ರತ್ಯೇಕ ಪರೀಕ್ಷೆ: ಬದಲಾಗಲಿದೆಯೇ ಭಾರತೀಯ ರೈಲ್ವೆಯ ರೂಪುರೇಷೆ?

ರೈಲ್ವೆಗಾಗಿ ಯುಪಿಎಸ್ಸಿಯಿಂದ ಪ್ರತ್ಯೇಕ ಪರೀಕ್ಷೆ: ಬದಲಾಗಲಿದೆಯೇ ಭಾರತೀಯ ರೈಲ್ವೆಯ ರೂಪುರೇಷೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada