• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಈಶಾನ್ಯ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ : ಏಳು ಮಂದಿ ಸಾವು, ಗುಡಿಸಲು ಭಸ್ಮ!

Any Mind by Any Mind
March 13, 2022
in ಇದೀಗ
0
ಈಶಾನ್ಯ ದೆಹಲಿಯಲ್ಲಿ ಭಾರೀ ಅಗ್ನಿ ಅವಘಡ : ಏಳು ಮಂದಿ ಸಾವು, ಗುಡಿಸಲು ಭಸ್ಮ!
Share on WhatsAppShare on FacebookShare on Telegram

ಮಾರ್ಚ್ 12ರ ಶನಿವಾರ ಮುಂಜಾನೆ ಈಶಾನ್ಯ ದೆಹಲಿಯ ಗುಡಿಸಲೊಂದರಲ್ಲಿ ಬೃಹತ್ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಮತ್ತು ಗರ್ಭಿಣಿ ಮಹಿಳೆ ಸೇರಿದಂತೆ ಏಳು ಮಂದಿ ಸಾವನಪ್ಪಿದ್ದಾರೆ ಎಂದು ದಿ ವೈರ್‌ ವರದಿ ಮಾಡಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಸಿಗರೇಟ್  ಕಿಡಿ ಅಥವಾ ಬೀಡಿಯ ಕಿಡಿಯಿಂದಾಗಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಸೂಚಿಸುತ್ತದೆ.

ADVERTISEMENT

ಗುಡಿಸಲ ಹಿಂದೆ ಕೆಲವು ರಟ್ಟಿನ ಹಲಗೆಗಳಿದ್ದು, ಯಾರೋ ಸಿಗರೇಟ್ ಅಥವಾ ಬೀಡಿಯನ್ನು ಸೇದಿ ಎಸೆದರಿಂದ ಬೆಂಕಿ ಹೊತ್ತಿರಬಹುದು ಎಂದು ಶಂಕಿಸಲಾಗಿದೆ ಎಂದು ವಿಧಿವಿಜ್ಞಾನ ಅಧಿಕಾರಿಗಳು ತಿಳಿಸಿದ್ದಾರೆ.

ರೋಷನ್ (13) ಮತ್ತು ಅವರ ಸಹೋದರಿ ದೀಪಿಕಾ (9) ಮತ್ತು ಒಂದೇ ಕುಟುಂಬದ ಐವರು – ಬಬ್ಲೂ (32), ರಂಜಿತ್ (25), ರೇಷ್ಮಾ (18), ಪ್ರಿಯಾಂಕಾ (20) ಮತ್ತು ಶಹನ್ಶಾ (10) ಎಂಬುವವರ ಸಾವನಪ್ಪಿದ್ದರೆ ಎಂದು ತಿಳಿದುಬಂದಿದೆ.  ಗೋಕುಲ್‌ಪುರಿ ಗ್ರಾಮದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸುಮಾರು 1:03 ಕ್ಕೆ ಈ ಬಗ್ಗೆ ಮಾಹಿತಿ ಬಂತು ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಿಯಾಂಕಾ ಐದು ತಿಂಗಳ ಗರ್ಭಿಣಿ ಎಂದು ಸಂಬಂಧಿಕರು ಹೇಳಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯ ಕುರಿತು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಘಟನೆಯಲ್ಲಿ ಮೃತಪಟ್ಟ ವಯಸ್ಕರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಮತ್ತು ಮಕ್ಕಳ ಸಾವಿನಪ್ಪಿದಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಗುಡಿಸಲುಗಳು ನಾಶವಾದವರಿಗೆ ದೆಹಲಿ ಸರ್ಕಾರ 25,000 ರೂಪಾಯಿ ಆರ್ಥಿಕ ನೆರವು ನೀಡಲಿದೆ.

ಹದಿಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಳಗಿನ ಜಾವ 4 ಗಂಟೆ ಸುಮಾರಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಎಂದು ಡಿಎಫ್‌ಎಸ್ ಅಧಿಕಾರಿ ತಿಳಿಸಿದ್ದಾರೆ.

“ನಾವು ನಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ ಎಂಬ ಮಾತೇ ನಮ್ಮನ್ನು ಕುಸಿದು ಬೀಳುವಂತೆ ಮಾಡಿತು. ಮಾತ್ರವಲ್ಲದೆ ನಾವು ಉಳಿಸಿದ್ದ ಹಣ ಮತ್ತು ಆಭರಣಗಳನ್ನು ಸಹ ಕಳೆದುಕೊಂಡಿದ್ದೇವೆ, ”ಎಂದು ಮೃತರ ಕುಟುಂಬದ ಸದಸ್ಯರಲ್ಲಿ ಒಬ್ಬರು ಹೇಳಿದರು.

ರೋಷನ್ ಮತ್ತು ದೀಪಿಕಾ ಅವರ ಅಜ್ಜ ಸಂತು ಮಾತನಾಡಿ, “ನಾವು ರಾತ್ರಿ 10.30 ರ ಸುಮಾರಿಗೆ ಮಲಗಲು ಹೋದೆವು ಮತ್ತು ಶನಿವಾರ ಮಧ್ಯರಾತ್ರಿ 12.30 ರ ಸುಮಾರಿಗೆ ಈ ಘಟನೆ ನಡೆದಿದೆ. ಬೆಂಕಿ ಹೇಗೆ ಮತ್ತು ಎಲ್ಲಿಂದ ಬಂತು ಎಂದು ನಮಗೆ ತಿಳಿದಿಲ್ಲ ಎಂದು ಹೇಳಿದ್ಧಾರೆ.

Tags: BJPCongress PartyCovid 19ಈಶಾನ್ಯ ದೆಹಲಿಏಳು ಮಂದಿ ಸಾವುಕರೋನಾಕೋವಿಡ್-19ಗುಡಿಸಲು ಭಸ್ಮಬಿಜೆಪಿ
Previous Post

ಬೆಂಗಳೂರು ಬಜೆಟ್‌ಗೆ ದಿನಾಂಕ ನಿಗದಿ : ಈ ಬಾರಿಯೂ ಸಿಲಿಕಾನ್ ಸಿಟಿ ಜನರಿಗೆ ಆಸ್ತಿ ತೆರಿಗೆ ಹೊರೆ ಇಲ್ಲ!

Next Post

ಸಂವಿಧಾನ, ಧಾರ್ಮಿಕ ಸ್ವಾತಂತ್ರ್ಯದ ಹೆಸರಲ್ಲಿ ಮತಾಂಧತೆ ಬೆಳೆಯುತ್ತಿದೆ : RSS

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಸಂವಿಧಾನ, ಧಾರ್ಮಿಕ ಸ್ವಾತಂತ್ರ್ಯದ ಹೆಸರಲ್ಲಿ ಮತಾಂಧತೆ ಬೆಳೆಯುತ್ತಿದೆ : RSS

ಸಂವಿಧಾನ, ಧಾರ್ಮಿಕ ಸ್ವಾತಂತ್ರ್ಯದ ಹೆಸರಲ್ಲಿ ಮತಾಂಧತೆ ಬೆಳೆಯುತ್ತಿದೆ : RSS

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada