• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ವಾಣಿಜ್ಯ

ಯುಗಾದಿ ಹೊತ್ತಿಗೆ ಗ್ರಾಹಕರ ಪಾಲಿಗೆ ಭಾರಿ ‘ಕಹಿ’ಯಾಗಲಿರುವ ಜೀವರಕ್ಷಕ ಔಷಧಗಳು

ಪ್ರತಿಧ್ವನಿ by ಪ್ರತಿಧ್ವನಿ
March 27, 2022
in ವಾಣಿಜ್ಯ
0
ಯುಗಾದಿ ಹೊತ್ತಿಗೆ ಗ್ರಾಹಕರ ಪಾಲಿಗೆ ಭಾರಿ ‘ಕಹಿ’ಯಾಗಲಿರುವ ಜೀವರಕ್ಷಕ ಔಷಧಗಳು
Share on WhatsAppShare on FacebookShare on Telegram

ADVERTISEMENT

ಪೆಟ್ರೋಲ್, ಡಿಸೇಲ್, ಖಾತ್ಯ ತೈಲಗಳ ಬೆಲೆ ಏರಿಕೆ ನಂತರ ಈಗ ಜೀವರಕ್ಷಕ ಔಷಧಗಳ ಸರದಿ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏಪ್ರಿಲ್ 1ರಿಂದ ಸುಮಾರು 800 ಔಷಧಿಗಳ ದರ ಏರಿಕೆ ಮಾಡಲಿದೆ. ಇದು ದೇಶದ ಜನತೆಗೆ ಕೇಂದ್ರ ಸರ್ಕಾರದ ಯುಗಾದಿ ಹಬ್ಬದ ಉಡುಗೊರೆ.

ಬೆಲೆ ಏರಿಕೆ ಪ್ರಮಾಣ ಶೇ.10.7ರಷ್ಟಾಗಲಿದೆ. ಇದು ಸರಾಸರಿ ಪ್ರಮಾಣ. ಕೆಲವು ಔಷಧಗಳ ಬೆಲೆ ಶೇ.20ರಷ್ಟರವರೆಗೂ ಏರಬಹುದು, ಕೆಲವುಗಳ ಬೆಲೆಯು ಶೇ.5ರಷ್ಟೂ ಇರಬಹುದು.

ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ (ಎನ್‌ಪಿಪಿಎ) ಬೆಲೆ ಏರಿಕೆ ಮಾಡುವ ನಿರ್ಧಾರವನ್ನು ಶುಕ್ರವಾರ ಪ್ರಕಟಿಸಿದೆ. ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯ ಸಗಟು ಬೆಲೆ ಸೂಚ್ಯಂಕದಲ್ಲಿ (ಡಬ್ಲ್ಯುಪಿಐ) ಶೇ.10.7ರಷ್ಟು ಬೆಲೆ ಏರಿಕೆಯನ್ನು ಘೋಷಿಸಿರುವುದರಿಂದ ಗ್ರಾಹಕರು ಕೆಲವು ಅಗತ್ಯ ಔಷಧಿಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.

ಜ್ವರ, ಸೋಂಕುಗಳು, ಚರ್ಮ ರೋಗಗಳು, ಅಧಿಕ ರಕ್ತದೊತ್ತಡ, ರಕ್ತಹೀನತೆ ಮತ್ತು ಹೃದಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸುವ ಓಐಇಒ ನಲ್ಲಿ ಸುಮಾರು 800 ನಿಗದಿತ ಔಷಧಿಗಳ ದರಗಳು ಏಪ್ರಿಲ್ 1 ರಿಂದ ಶೇ.10.7 ರಷ್ಟು ಏರಿಕೆಯಾಗುತ್ತವೆ.

ಔಷಧಗಳ(ಬೆಲೆ ನಿಯಂತ್ರಣ) ಆದೇಶ, 2013 ರ ನಿಬಂಧನೆಗಳ ಪ್ರಕಾರ ಮುಂದಿನ ಕ್ರಮಕ್ಕಾಗಿ ಇದನ್ನು ಸಂಬಂಧಪಟ್ಟ ಎಲ್ಲರ ಗಮನಕ್ಕೆ ತರಲಾಗಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಪ್ಯಾರಾಸುಟಮಲ್, ಅಜಿಥ್ರೊಮೈಸಿನ್, ಫೆನೋಬಾರ್ಬಿಟೋನ್, ಸಿಪ್ರೊಫ್ಲೋಕ್ಸಾಸಿನ್ ಹೈಡ್ರೋಕ್ಲೋರೈಡ್, ಫೆನಿಟೋಯಿನ್ ಸೋಡಿಯಂ ಮತ್ತು ಮೆಟ್ರೋನಿಡಜೋಲ್ ನಂತಹ ಅಗತ್ಯ ಔಷಧಗಳೂ ದುಬಾರಿಯಾಗಲಿವೆ.

ಆ್ಯಂಟಿಬಯೋಟಿಕ್ಸ್, ಉರಿಯೂತ ನಿವಾರಕ ಔಷಧಿಗಳು, ಕಿವಿ-ಮೂಗು ಮತ್ತು ಗಂಟಲು ಔಷಧಿಗಳು, ನಂಜುನಿರೋಧಕಗಳು, ನೋವು ನಿವಾರಕಗಳು, ಜಠರಗರುಳಿನ ಔಷಧಿಗಳು ಮತ್ತು ಆಂಟಿಫಂಗಲ್ ಔಷಧಿಗಳಂತಹ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯಲ್ಲಿ (ಎನ್ಇಎಲ್ಎಂ) ಸೇರ್ಪಡೆಗೊಂಡಿರುವ ಔಷಧಿಗಳ ಬೆಲೆಯಲ್ಲಿ ತೀವ್ರ ಏರಿಕೆ ಯಾಗಲಿದೆ.

ಹಲವು ವರ್ಷಗಳ ನಂತರ ನಿಗದಿತ ಔಷಧಿಗಳಲ್ಲಿ ಈ 10% ಹೆಚ್ಚಳವಾಗಿದೆ ಎಂದು ಹೇಳುವ ಮೂಲಕ ಸರ್ಕಾರದ ನಿರ್ಧಾರವನ್ನು ಔಷಧೀಯ ಉದ್ಯಮವು ಸ್ವಾಗತಿಸಿದೆ.

ಹಣದುಬ್ಬರದ ವಿಷವೃತ್ತ

ಸಗಟುದರ ಬೆಲೆ ಸೂಚ್ಯಂಕ ಏರಿಕೆಯಾಗಿದೆ ಎಂಬ ಕಾರಣಕ್ಕೆ ದರ ಏರಿಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಸಗಟುದರ ಬೆಲೆ ಸೂಚ್ಯಂಕ ಏರಿಕೆಯಾಗಿದೆ ಎಂದರೆ ಹಣದುಬ್ಬರ ಹೆಚ್ಚಾಗಿದೆ ಎಂದೇ ಅರ್ಥ. ಹಣದುಬ್ಬರ ನಿಯಂತ್ರಿಸಬೇಕಾದ ಸರ್ಕಾರ ಬೆಲೆ ಏರಿಕೆ ಮಾಡುವ ಮೂಲಕ ಮತ್ತಷ್ಟು ಹಣದುಬ್ಬರ ಏರಲು ಕಾರಣವಾಗುತ್ತಿದೆ.

ಸಗಟುದರ ಬೆಲೆ ಸೂಚ್ಯಂಕ ಆಧರಿಸಿ ದರ ಏರಿಕೆ ಮಾಡಿದರೆ, ಚಿಲ್ಲರೆ ದರ ಬೆಲೆ ಸೂಚ್ಯಂಕವೂ ಏರುತ್ತದೆ. ಅಂದರೆ, ಚಿಲ್ಲರೆ ದರ ಹಣದುಬ್ಬರ ಮತ್ತಷ್ಟು ಜಿಗಿಯುತ್ತದೆ.

ಈಗಾಗಲೇ ಹಣದುಬ್ಬರವು ಭಾರತೀಯ ರಿಸರ್ವ್ ಬ್ಯಾಂಕ್ ಹಾಕಿಕೊಂಡಿರುವ ಗರಿಷ್ಠ ಮಿತಿಯಾದ ಶೇ.6ರ ಗಡಿದಾಟಿದೆ. ಈ ನಡುವೆ ಪೆಟ್ರೋಲ್, ಡೀಸೆಲ್, ಖಾದ್ಯ ತೈಲ ಸೇರಿದಂತೆ ಹಲವು ವಸ್ತುಗಳ ದರ ಏರಿಕೆಯಾಗಿರುವುದರಿಂದ ಮಾರ್ಚ್ ತಿಂಗಳ ಚಿಲ್ಲರೆ ದರ ಹಣದುಬ್ಬರ ಮತ್ತು ಸಗಟುದರ ಹಣದುಬ್ಬರ ಮತ್ತಷ್ಟು ಜಿಗಿಯಲಿದೆ. ಏಪ್ರಿಲ್ ತಿಂಗಳಲ್ಲಿ ಔಷಧಗಳ ದರ ಏರಿಕೆಯಾಗುವುದರಿಂದ ಮತ್ತು ಪೆಟ್ರೋಲ್ ಹಾಗೂ ಡಿಸೇಲ್ ದರ ಏರುತ್ತಲೇ ಇರುವುದರಿಂದ ಏಪ್ರಿಲ್ ತಿಂಗಳ ಹಣದುಬ್ಬರವು ನಿರೀಕ್ಷೆ ಮೀರಿ ಏರಿಕೆಯಾಗಲಿದೆ.

ಹಣದುಬ್ಬರ ಏರಿಕೆಯಾದಂತೆ ವಸ್ತುಗಳು ಗ್ರಾಹಕರ ಕೈಗೆಟುಕದಂತಾಗುತ್ತವೆ. ಸಹಜವಾಗಿ ಜನರ ಖರೀದಿ ಶಕ್ತಿ ಕುಂದುವುದರಿಂದ ಅದು ನೇರವಾಗಿ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಅಂತಿಮವಾಗಿ ದೇಶದ ಜಿಡಿಪಿ ಬೆಳವಣಿಗೆ ಕುಗ್ಗುತ್ತದೆ.

ಹಣದುಬ್ಬರ ನಿಯಂತ್ರಣ ಮಾಡುವ ಇರಾದೆ ಸರ್ಕಾರಕ್ಕೆ ಇದ್ದರೆ, ಔಷಧಗಳ ದರ ಏರಿಕೆಯನ್ನು ಮಾಡಲೇಬಾರದಿತ್ತು.

Tags: BJPCongress PartyCovid 19ಔಷಧ ಬೆಲೆ ಏರಿಕೆಬಿಜೆಪಿಭಾರತ ಸರ್ಕಾರಯುಗಾದಿ
Previous Post

ಯೋಗಿ ಸಂಪುಟ : ಜಾತಿ ಲೆಕ್ಕಾಚಾರದಲ್ಲಿ ಡಿಸಿಎಂ ಪಟ್ಟ ಉಳಿಸಿಕೊಂಡ ಕೇಶವಪ್ರಸಾದ್ ಮೌರ್ಯ

Next Post

ಅಂಬೇಡ್ಕರ್ ಅಸ್ಪೃಶ್ಯ ಸಮುದಾಯದಲ್ಲಿ ಹುಟ್ಟಿರದಿದ್ದರೆ ಅಸ್ಪೃಶ್ಯತೆಗೆ ವಿಮೋಚನೆ ಸಿಗುತ್ತಿರಲಿಲ್ಲ: ಸಿದ್ದರಾಮಯ್ಯ

Related Posts

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
0

-3 ದಿನಗಳ ಇಂಡಿಯಾ ಗ್ರೀನ್ ಎನರ್ಜಿ ಎಕ್ಸ್‌ಪೋಗೆ ಚಾಲನೆ ಬೆಂಗಳೂರು, ಜೂನ್ 19, 2025: ಸುಸ್ಥಿರ ಇಂಧನ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕವು ವಿಶ್ವದ ಗಮನ ಸೆಳೆದಿದೆ....

Read moreDetails
ಭಾರತ ಮೂರನೇ ಅತಿದೊಡ್ಡ ಮಾರುಕಟ್ಟೆಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ಪ್ರಿಯಾಂಕ್ ಖರ್ಗೆ

ಭಾರತ ಮೂರನೇ ಅತಿದೊಡ್ಡ ಮಾರುಕಟ್ಟೆಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ಪ್ರಿಯಾಂಕ್ ಖರ್ಗೆ

June 16, 2025
ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ- ಕರ್ನಾಟಕಕ್ಕೆ ಪ್ರಥಮ ಸ್ಥಾನ

ಅಧಿಕ ಪವನ ವಿದ್ಯುತ್‌ ಸಾಮರ್ಥ್ಯ- ಕರ್ನಾಟಕಕ್ಕೆ ಪ್ರಥಮ ಸ್ಥಾನ

June 15, 2025

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 14, 2025

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲು ಸಚಿವ ಕೆ.ಜೆ.ಜಾರ್ಜ್ ಸೂಚನೆ

June 14, 2025
Next Post
ಬಿಜೆಪಿ ಶಾಸಕರಿಂದ ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ, ಕಾಶ್ಮೀರಿ ಫೈಲ್ಸ್ ಚಿತ್ರ ಹಾಕುವಂತೆ ಒತ್ತಡ : ಸಿದ್ದರಾಮಯ್ಯ ಗಂಭೀರ ಆರೋಪ!

ಅಂಬೇಡ್ಕರ್ ಅಸ್ಪೃಶ್ಯ ಸಮುದಾಯದಲ್ಲಿ ಹುಟ್ಟಿರದಿದ್ದರೆ ಅಸ್ಪೃಶ್ಯತೆಗೆ ವಿಮೋಚನೆ ಸಿಗುತ್ತಿರಲಿಲ್ಲ: ಸಿದ್ದರಾಮಯ್ಯ

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada