• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಹಿಜಾಬ್ ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಿಸಿದ ಬಹ್ರೇನ್‌‌ನ ಭಾರತೀಯ ರೆಸ್ಟೋರೆಂಟ್ಗೆ ಬಿತ್ತು ಬೀಗ!

ಫಾತಿಮಾ by ಫಾತಿಮಾ
March 27, 2022
in ವಿದೇಶ
0
ಹಿಜಾಬ್ ಧರಿಸಿದ ಮಹಿಳೆಗೆ ಪ್ರವೇಶ ನಿರಾಕರಿಸಿದ ಬಹ್ರೇನ್‌‌ನ ಭಾರತೀಯ ರೆಸ್ಟೋರೆಂಟ್ಗೆ ಬಿತ್ತು ಬೀಗ!
Share on WhatsAppShare on FacebookShare on Telegram

ADVERTISEMENT

ಫೆಬ್ರವರಿ ತಿಂಗಳಲ್ಲಿ ಕರ್ನಾಟಕದ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಭುಗಿಲೆದ್ದ ಬೆನ್ನಲ್ಲೇ ಹಿಂದುತ್ವವಾದಿ ಸಂಘಟನೆಗಳು ಹಿಜಾಬ್ ಧರಿಸಿದ ಹೆಣ್ಣುಮಕ್ಕಳು ಕಾಲೇಜ್ ಪ್ರವೇಶಿಸಬಾರದು ಎಂದು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದ್ದರು. ಕೆಲವು ವಿದ್ಯಾರ್ಥಿಗಳು ಧ್ವಜ ಸ್ಥಂಭವೇರಿ ಕೇಸರಿ ಧ್ವಜ ನೆಟ್ಟ ಪ್ರಕರಣವೂ ನಡೆದಿತ್ತು. ಈ ಘಟನೆಗಳು ಅಂತರರಾಷ್ಟ್ರೀಯವಾಗಿ ಗಮನ ಸೆಳೆದಿದ್ದು ಯುಎಇಯ ರಾಜಕುಮಾರಿಯೂ ಈ ಬಗ್ಗೆ ಟ್ವೀಟ್ ಮಾಡಿ ಖಂಡಿಸಿದ್ದರು. ಮುಸ್ಲಿಂ ವಿದ್ಯಾರ್ಥಿನಿಯರು ಈ ಬಗ್ಗೆ ಹೈಕೋರ್ಟ್ ‌ನಲ್ಲೂ ದಾವೆ ಸಲ್ಲಿಸಿದ್ದು ಅಲ್ಲೂ ಧಾರ್ಮಿಕ ಚಿಹ್ನೆಗಳನ್ನು ಕಾಲೇಜುಗಳಲ್ಲಿ ಧರಿಸಬಾರದು ಎಂಬ ತೀರ್ಪೇ ಬಂದಿದೆ. ಈಗ ಅದೇ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್ ಕದವನ್ನೂ ತಟ್ಟಿದ್ದು ತೀರ್ಪಿಗಾಗಿ ಕಾಯುತ್ತಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲೂ ಸರ್ಕಾರ ಅನುಮತಿ ನಿರಾಕರಿಸಿದ್ದು ಹಲವು ವಿದ್ಯಾರ್ಥಿಗಳು ಪರೀಕ್ಷೆ ಬರೆಯದೇ ವಾಪಾಸಾಗುತ್ತಿರುವ ಸುದ್ದಿಗಳು ಕರ್ನಾಟಕದಾದ್ಯಂತ ವರದಿಯಾಗುತ್ತಿವೆ.

ಈ ನಡುವೆ ಹಿಜಾಬ್ ಧರಿಸಿದ ಮಹಿಳೆಗೆ ಪ್ರವೇಶವನ್ನು ನಿರಾಕರಿಸಿದ ಆರೋಪದ ಮೇಲೆ ಬಹ್ರೇನ್‌ನ ಅಧಿಕಾರಿಗಳು ಭಾರತೀಯ ರೆಸ್ಟೋರೆಂಟ್ ಅನ್ನು ಮುಚ್ಚಿದ್ದಾರೆ ಎಂದು ಆನ್‌ಲೈನ್ ಸುದ್ದಿ ವೆಬ್‌ಸೈಟ್ ಜಿಡಿಎನ್ ವರದಿ ಮಾಡಿದೆ. ಬಹ್ರೇನ್ ಪ್ರವಾಸೋದ್ಯಮ ಮತ್ತು ವಸ್ತುಪ್ರದರ್ಶನ ಪ್ರಾಧಿಕಾರವು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ. ಬಹ್ರೇನ್‌ನ ರಾಜಧಾನಿ ಮನಾಮಾದ ಅದ್ಲಿಯಾ ಪ್ರದೇಶದಲ್ಲಿರುವ ಲ್ಯಾಂಟರ್ನ್ಸ್ ರೆಸ್ಟೋರೆಂಟ್‌ನಲ್ಲಿ ಈ ಘಟನೆ ನಡೆದಿದೆ‌ ಎನ್ನಲಾಗಿದೆ.

ದಿ ಡೈಲಿ ಟ್ರಿಬ್ಯೂನ್ ಪ್ರಕಾರ, ದೇಶದ ಕಾನೂನುಗಳನ್ನು ಉಲ್ಲಂಘಿಸುವ ನೀತಿಗಳನ್ನು ಜಾರಿಗೊಳಿಸುವುದನ್ನು ರೆಸ್ಟೋರೆಂಟ್‌ಗಳು ತಪ್ಪಿಸಬೇಕು ಎಂದು BTEA (Bahrain Tourism and Exhibition Authority) ಹೇಳಿದೆ. “ಜನರ ವಿರುದ್ಧ ತಾರತಮ್ಯ ಮಾಡುವ ಎಲ್ಲಾ ಕ್ರಮಗಳನ್ನು ನಾವು ತಿರಸ್ಕರಿಸುತ್ತೇವೆ, ವಿಶೇಷವಾಗಿ ಅವರ ರಾಷ್ಟ್ರೀಯ ಗುರುತಿನ ಬಗ್ಗೆ” ಎಂದು ಅದು ಹೇಳಿದೆ.

ಪ್ರವಾಸೋದ್ಯಮ ಸಂಬಂಧಿತ ಸಂಸ್ಥೆಗಳಿಗೆ ಸಂಬಂಧಿಸಿದ 1986 ರ ಡಿಕ್ರಿ ಕಾನೂನು ಸಂಖ್ಯೆ 15 ರ ಪ್ರಕಾರ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿದೆ ಎಂದು ಪ್ರಾಧಿಕಾರವು ಹೇಳಿದೆ. ಅಲ್ಲದೆ ಅಂತಹ ಘಟನೆಗಳು ನಡೆದರೆ ರಾಷ್ಟ್ರೀಯ ದೂರು ಮತ್ತು ಸಲಹೆ ವ್ಯವಸ್ಥೆ ತವಸ್ಸುಲ್ (Tawassul) ಮೂಲಕ ಅಥವಾ ಗ್ರಾಹಕ ಸಂರಕ್ಷಣಾ ಕೇಂದ್ರಕ್ಕೆ 17007003 ಗೆ ಕರೆ ಮಾಡುವ ಮೂಲಕ ಪ್ರಾಧಿಕಾರಕ್ಕೆ ವರದಿ ಮಾಡಲು ಸಾರ್ವಜನಿಕರಿಗೆ ಕರೆ ನೀಡಲಾಗಿದೆ.

ಈ ಬಗ್ಗೆ ಗುರುವಾರ ಲ್ಯಾಂಟರ್ನ್ಸ್ ರೆಸ್ಟೋರೆಂಟ್ ಅಧಿಕೃತ ಮಾಹಿತಿ ಪ್ರಕಟಿಸಿದ್ದು ಮಹಿಳೆಯನ್ನು ತನ್ನ ಆವರಣಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಿದ ಮ್ಯಾನೇಜರ್‌ರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದು “ಮ್ಯಾನೇಜರ್ ಕ್ರಮವು ನಾವು ಯಾರು ಎಂಬುವುದನ್ನು ಪ್ರತಿನಿಧಿಸುವುದಿಲ್ಲ” ಎಂದು ಹೇಳಿದೆ.

“ಸುಂದರವಾದ ಬಹ್ರೇನ್‌ನಲ್ಲಿ 35 ವರ್ಷಗಳಿಂದ ನಾವು ಎಲ್ಲಾ ರಾಷ್ಟ್ರೀಯತೆಗಳಿಗೆ ಸೇವೆ ಸಲ್ಲಿಸುತ್ತಿದ್ದೇವೆ ಮತ್ತು ಲ್ಯಾಂಟರ್ನ್ಸ್‌ಗೆ ಎಲ್ಲರಿಗೂ ಸ್ವಾಗತವಿದೆ” ಎಂದು ರೆಸ್ಟೋರೆಂಟ್ ತನ್ನ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ತಿಳಿಸಿದೆ. ಅಲ್ಲದೆ ಮಾರ್ಚ್ 29 ರಂದು “ಸದ್ಭಾವನೆಯ ಸೂಚಕವಾಗಿ” ರೆಸ್ಟೋರೆಂಟ್‌ನಲ್ಲಿ ಕಾಂಪ್ಲಿಮೆಂಟರಿ ಫುಡ್ ಸ್ವೀಕರಿಸಲು ರೆಸ್ಟೋರೆಂಟ್ ಬಹ್ರೇನ್ ನಾಗರಿಕರನ್ನು ಆಹ್ವಾನಿಸಿದೆ.

Tags: BJPCongress PartyCovid 19ನರೇಂದ್ರ ಮೋದಿಬಹ್ರೇನ್ಬಿಜೆಪಿರೆಸ್ಟೋರೆಂಟ್ಹಿಜಾಬ್
Previous Post

IPL | ವಿಂಟೇಜ್ ಕಾರ್ ಗೆ ಹೊಸ ಲುಕ್ ನೀಡಿದ RCB ಅಭಿಮಾನಿ!

Next Post

ಸಂಸತ್ತಿನಲ್ಲಿ ಮಹಿಳೆಯರ ಭಾಗವಹಿಸುವಿಕೆ ನಿರೀಕ್ಷೆಗಿಂತ ಕಡಿಮೆ: ಚುನಾವಣಾ ಆಯೋಗ ಮುಖ್ಯಸ್ಥ

Related Posts

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?
Top Story

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

by ಪ್ರತಿಧ್ವನಿ
May 23, 2026
0

 ಬೆಂಗಳೂರು : ದೇಶಾದ್ಯಂತ ಇಂದು ಬೆಳಂಬೆಳಿಗ್ಗೆ ವಾಹನ ಸವಾರರಿಗೆ ಮತ್ತೊಮ್ಮೆ ಪೆಟ್ರೋಲ್‌, ಡೀಸೆಲ್ ಏರಿಕೆಯ ಬಿಸಿ ತಟ್ಟಿದೆ. ಕಳೆದ ಹತ್ತು ದಿನಗಳ ಅವಧಿಯಲ್ಲಿಯೇ ಇಂಧನ ಕಂಪನಿಗಳು ಮೂರನೇ...

Read moreDetails
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

May 12, 2026
Next Post
ಸಂಸತ್ತಿನಲ್ಲಿ ಮಹಿಳೆಯರ ಭಾಗವಹಿಸುವಿಕೆ ನಿರೀಕ್ಷೆಗಿಂತ ಕಡಿಮೆ: ಚುನಾವಣಾ ಆಯೋಗ ಮುಖ್ಯಸ್ಥ

ಸಂಸತ್ತಿನಲ್ಲಿ ಮಹಿಳೆಯರ ಭಾಗವಹಿಸುವಿಕೆ ನಿರೀಕ್ಷೆಗಿಂತ ಕಡಿಮೆ: ಚುನಾವಣಾ ಆಯೋಗ ಮುಖ್ಯಸ್ಥ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada