• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬೆಂಗಳೂರಿನ ಮೂಲಭೂತ ಸೌಕರ್ಯಗಳ ಕೊರತೆಗೆ ಉದ್ಯಮಿ ಅಸಮಾಧಾನ: ಸರ್ಕಾರದ ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
April 3, 2022
in ಕರ್ನಾಟಕ
0
ಬೆಂಗಳೂರಿನ ಮೂಲಭೂತ ಸೌಕರ್ಯಗಳ ಕೊರತೆಗೆ ಉದ್ಯಮಿ ಅಸಮಾಧಾನ: ಸರ್ಕಾರದ ವಿರುದ್ಧ ಪ್ರಿಯಾಂಕ್‌ ಖರ್ಗೆ ಕಿಡಿ
Share on WhatsAppShare on FacebookShare on Telegram

ADVERTISEMENT

ಬೆಂಗಳೂರಿನಲ್ಲಿ ಉದ್ಯಮಗಳು/ ಸ್ಟಾರ್ಟ್-ಅಪ್‌ಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಯುವ ಉದ್ಯಮಿ ರವೀಶ್‌ ನರೇಶ್‌ ಟ್ವಿಟರ್‌ ಮೂಲಕ ತಕರಾರು ಎತ್ತಿದ್ದಾರೆ. ಒಂದು ಕಡೆ ಕೋಮು ಧ್ರುವೀಕರಣದ ರಾಜಕೀಯ ಇನ್ನೊಂದೆಡೆ ಮೂಲಭೂತ ಸೌಕರ್ಯಗಳ ಕೊರತೆ ಬೆಂಗಳೂರಿಗೆ ಹೂಡಿಕೆ ಮಾಡಲು ಉದ್ಯಮಗಳು ಹಿಂದೆ ಮುಂದೆ ನೋಡುವಂತೆ ಮಾಡಿದೆ ಎನ್ನಲಾಗಿದೆ.

ಇದೇ ಹಿನ್ನೆಲೆಯಲ್ಲಿ ಉದ್ಯಮಿ ನರೇಶ್‌ ಬೊಟ್ಟು ಮಾಡಿ ತೋರಿಸಿರುವ ಸಮಸ್ಯೆಗಳ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ತೆಲಂಗಾಣ ಕೈಗಾರಿಕಾ ಸಚಿವ ಬೆಂಗಳೂರು ತೊರೆದು ಹೈದರಾಬಾದ್‌ ಗೆ ಬರುವಂತೆ ಉದ್ದಿಮೆಗಳಿಗೆ ಸಲಹೆ ನೀಡಿದ್ದಾರೆ. ಇದನ್ನು ಉಲ್ಲೇಖಿಸಿ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

“HSR/ಕೋರಮಂಗಲದಲ್ಲಿ (ಭಾರತದ ಸಿಲಿಕಾನ್ ವ್ಯಾಲಿ) ಸ್ಟಾರ್ಟ್‌ಅಪ್‌ಗಳು ಈಗಾಗಲೇ ಶತಕೋಟಿ ಡಾಲರ್‌ ನಷ್ಟು ತೆರಿಗೆಗಳನ್ನು ಉತ್ಪಾದಿಸುತ್ತಿವೆ. ಆದರೂ ನಮ್ಮಲ್ಲಿ ಕೆಟ್ಟ ರಸ್ತೆಗಳು, ಬಹುತೇಕ ದಿನನಿತ್ಯದ ವಿದ್ಯುತ್ ಕಡಿತ, ಕಳಪೆ ಗುಣಮಟ್ಟದ ನೀರು ಸರಬರಾಜು, ಬಳಸಲಾಗದ ಪಾದಚಾರಿ ಮಾರ್ಗಗಳು ಇವೆ. ಭಾರತದ ಸಿಲಿಕಾನ್ ವ್ಯಾಲಿಗಿಂತ ಅನೇಕ ಗ್ರಾಮೀಣ ಪ್ರದೇಶಗಳು ಈಗ ಉತ್ತಮ ಮೂಲ ಸೌಕರ್ಯವನ್ನು ಹೊಂದಿವೆ” ಎಂದು ಉದ್ಯಮಿ ರವೀಶ್‌ ನರೇಶ್‌ ಟ್ವೀಟ್‌ ಮಾಡಿದ್ದಾರೆ.

ಉದ್ಯಮಿ ಟ್ವೀಟ್‌ ಗೆ ಪ್ರತಿಕ್ರಿಯಿಸಿರುವ ತೆಲಂಗಾಣ ಕೈಗಾರಿಕಾ ಸಚಿವ ಕೆಟಿಆರ್‌ ರಾವ್‌, “ನಿಮ್ಮ ಬ್ಯಾಗ್‌ ಗಳನ್ನು ಪ್ಯಾಕ್ ಮಾಡಿ ಮತ್ತು ಹೈದರಾಬಾದ್‌ಗೆ ಹೊರಡಿ! ನಾವು ಉತ್ತಮ ಭೌತಿಕ ಮೂಲಸೌಕರ್ಯ ಮತ್ತು ಸಮಾನವಾಗಿ ಉತ್ತಮ ಸಾಮಾಜಿಕ ಮೂಲಸೌಕರ್ಯವನ್ನು ಹೊಂದಿದ್ದೇವೆ. ನಮ್ಮ ವಿಮಾನ ನಿಲ್ದಾಣವು ಅತ್ಯುತ್ತಮವಾದದ್ದು ಮತ್ತು ನಗರದೊಳಗೆ ಮತ್ತು ಹೊರಗೆ ಹೋಗುವುದು ಹಿತವಾಗಿದೆ. ಮುಖ್ಯವಾಗಿ, ನಮ್ಮ ಸರ್ಕಾರವು ನಾವೀನ್ಯತೆ, ಮೂಲಸೌಕರ್ಯ ಮತ್ತು ಅಂತರ್ಗತ ಬೆಳವಣಿಗೆ ಎಂಬ ಮೂರು ಮಂತ್ರಗಳ ಮೇಲೆ ಗಮನ ಹರಿಸಿದೆ” ಎಂದು ಪರೋಕ್ಷವಾಗಿ ಬೆಂಗಳೂರಿನ ಅಸಮರ್ಪಕತೆಯನ್ನು ವ್ಯಂಗ್ಯ ಮಾಡಿದ್‌ದಾರೆ.

ತೆಲಂಗಾಣ ರಾಜ್ಯ ಸಚಿವರ ಟ್ವೀಟ್‌ ಅನ್ನು ಗಮನಿಸಿದ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೇಲಿನ ಎರಡೂ ಟ್ವೀಟನ್ನು ಉಲ್ಲೇಖಿಸಿದ ಖರ್ಗೆ, “ನಿಮ್ಮ ಪಕ್ಷದಿಂದ ಕೆಲವು ಆರ್ಥಿಕ ಜಿಹಾದ್‌ಗಳು ನಮಗೆ ಹೂಡಿಕೆ ಅಥವಾ ಉದ್ಯೋಗಗಳನ್ನು ಪಡೆಯುವುದಿಲ್ಲ ಎಂದು ಖಚಿತಪಡಿಸುತ್ತದೆ” ಎಂದು ರಾಜ್ಯದಲ್ಲಿ ಇತ್ತೀಚೆಗೆ ಬಿಜೆಪಿ ನಾಯಕರು ಮುಸ್ಲಿಂ ವರ್ತಕರ ವಿರುದ್ಧ ʼಆರ್ಥಿಕ ಜಿಹಾದ್‌ʼ ಎಂದು ಹೇಳಿಕೆ ನೀಡಿದ್ದನ್ನು ಈ ಮೂಲಕ ಖರ್ಗೆ ಟೀಕಿಸಿದ್ದಾರೆ.

Congratulations @CMofKarnataka we now have our neighbor telling startups to move to Hyderabad for not only a better infrastructure, but also a better “social” infrastructure.
A few more economic jihads from your party will ensure that we neither get investments or jobs. pic.twitter.com/WJOP86x9L9

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) April 2, 2022

“ಅಭಿನಂದನೆಗಳು, ಮುಖ್ಯಮಂತ್ರಿಯವರೇ, ಉತ್ತಮ ಮೂಲಸೌಕರ್ಯಕ್ಕಾಗಿ ಮಾತ್ರವಲ್ಲದೆ ಉತ್ತಮ “ಸಾಮಾಜಿಕ” ಮೂಲಸೌಕರ್ಯಕ್ಕಾಗಿ ಹೈದರಾಬಾದ್‌ಗೆ ತೆರಳಲು ನಮ್ಮ ನೆರೆ ರಾಜ್ಯ ಸ್ಟಾರ್ಟ್‌ಅಪ್‌ಗಳಿಗೆ ಹೇಳುತ್ತಿದೆ. ನಿಮ್ಮ ಪಕ್ಷದಿಂದ ಇನ್ನೂ ಕೆಲವು ಆರ್ಥಿಕ ಜಿಹಾದ್‌ಗಳು ನಮಗೆ ಹೂಡಿಕೆಗಳು ಅಥವಾ ಉದ್ಯೋಗಗಳನ್ನು ಪಡೆಯುವುದಿಲ್ಲ ಎಂದು ಖಚಿತಪಡಿಸುತ್ತದೆ.” ಎಂದು ಖರ್ಗೆ ಟ್ವೀಟ್‌ ಮಾಡಿದ್ದಾರೆ.

Tags: BJPCongress PartyCovid 19ಉದ್ಯಮಿಗಳುಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಬೆಂಗಳೂರುಮೂಲಭೂತ ಸೌಕರ್ಯಸಿದ್ದರಾಮಯ್ಯ
Previous Post

ಪೆಟ್ರೋಲ್, ಡೀಸೆಲ್‌ ಬೆಲೆ ಮತ್ತೆ ಏರಿಕೆ : ಇಂದಿನ ದರ ಹೀಗಿದೆ

Next Post

ತೆರಿಗೆ ಹೆಸರಲ್ಲಿ ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ : ಡಿಕೆ ಶಿವಕುಮಾರ್

Related Posts

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
0

ಬಿಹಾರ ಚುನಾವಣೆ ಪ್ರಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ...

Read moreDetails

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025

CM Siddaramaiah: ಗ್ರೇಟರ್ ಮೈಸೂರು ಆಗಬೇಕು, ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು..!!

November 3, 2025
Next Post
ಬಿಜೆಪಿಗರು ನಮ್ಮ ಸಂವಿಧಾನವನ್ನೇ ಅಪಾಯಕ್ಕೆ ಸಿಲುಕಿಸಿದ್ದಾರೆ : ಡಿ.ಕೆ. ಶಿವಕುಮಾರ್

ತೆರಿಗೆ ಹೆಸರಲ್ಲಿ ಕೇಂದ್ರ ಸರ್ಕಾರ ಲೂಟಿ ಮಾಡುತ್ತಿದೆ : ಡಿಕೆ ಶಿವಕುಮಾರ್

Please login to join discussion

Recent News

Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?
Top Story

ಬಿಹಾರ ವಿಧಾನಸಭೆ ಚುನಾವಣೆ: ತೇಜಸ್ವಿ ಯಾದವ್ ಗೆಲುವಿಗೆ ದಾರಿ ಮಾಡಿಕೊಡುತ್ತಾ ಎನ್‌ಡಿಎ..?

by ಪ್ರತಿಧ್ವನಿ
November 3, 2025
ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ
Top Story

ರೇಣುಕಾಸ್ವಾಮಿ ಹತ್ಯೆ ಕೇಸ್: ಆರೋಪಿಗಳ ವಿರುದ್ಧ ದೋಷಾರೋಪಣೆ ನಿಗಧಿ

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada