‘ಜೆಜೆ ನಗರದಲ್ಲಿ ನಡೆದ ಚಂದ್ರು ಎಂಬ ಯುವಕನ ಕೊಲೆಯ ವಿಚಾರದಲ್ಲಿ ಪೊಲೀಸ್ ಕಮಿಷನರ್ ಹೇಳಿದ ಹೇಳಿಕೆ ಸುಳ್ಳು. ಗೃಹ ಸಚಿವರು ಹೇಳಿರುವುದೇ ಸತ್ಯ’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್ ಹೇಳಿದರು.
ಬೆಂಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊಲೆ ನಡೆದ ಜಾಗದಲ್ಲಿ ಸ್ಥಳೀಯರಿದ್ದರು. ಮೃತ ಚಂದ್ರು ಸ್ನೇ ಹಿತ ಸೈಮನ್ ಅಲ್ಲೇ ಇದ್ದ ಆತ ಚುಚ್ಚಿರುವುದನ್ನು ನೋಡಿದ್ದಾನೆ. ಉರ್ದು ಬರಲ್ಲ ಎಂದು ಹೇಳಿದಾಗ ಚುಚ್ಚಿದ್ದಾರೆ. ಮೃತನ ತಾಯಿ, ಚಿಕ್ಕಮ್ಮ, ಸೈಮನ್ ಎಲ್ಲರೂ ಅದನ್ನೇ ಹೇಳಿದ್ದಾರೆ ಆದರೆ ಪೊಲೀಸ್ ಕಮಿಷನರ್ ಸುಳ್ಳು ಹೇಳಿದ್ದಾರೆ. ಈ ಬಗ್ಗೆ ತನಿಖೆ ನಡೆಯಲಿ’ ಎಂದು ಆಗ್ರಹಿಸಿದರು.
‘ಚಂದ್ರು ಅವರನ್ನು ಹತ್ಯೆ ಮಾಡಿರುವುದು ಗೂಂಡ ಮುಸ್ಲಿಮರು. ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಸೈಮನ್ ಹೇಳಿದ್ದಾರೆ. ಬೈಕ್ಗೆ ಅಪಘಾ ತ ಆಗಿದ್ದು ನಿಜ. ಆಗ ಉರ್ದುವಿನಲ್ಲಿ ಮಾತನಾಡಿ ಎಂದು ಹೇಳಿದ್ದಾರೆ. ಉರ್ದು ಬರುವುದಿಲ್ಲ ಎಂದಾಗ ಕೊಲೆ ಮಾಡಿದ್ದಾರೆ. ರಕ್ತಸ್ರಾವದಿಂದ ಚಂದ್ರು ಸಾವನ್ನಪ್ಪಿದ್ದಾರೆ’ ಎಂದು ರವಿ ಆರೋಪಿಸಿದ್ದಾರೆ.

