• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪಶ್ಚಿಮ ಬಂಗಾಳ : ಗ್ಯಾಂಗ್‌ ರೇಪ್‌ಗೆ ಒಳಗಾದ ಅಪ್ರಾಪ್ತೆ ಸಾವು ; ವಿವಾದ ಸೃಷ್ಟಿಸಿದ ಸಿಎಂ ಬ್ಯಾನರ್ಜಿ ಹೇಳಿಕೆ

ಪ್ರತಿಧ್ವನಿ by ಪ್ರತಿಧ್ವನಿ
April 12, 2022
in ದೇಶ
0
ಪಶ್ಚಿಮ ಬಂಗಾಳದಲ್ಲಿ BJP ಯಿಂದ TMC ಯತ್ತ ಮತ್ತೆ ವಲಸೆ ನಾಯಕರ ಚಿತ್ತ
Share on WhatsAppShare on FacebookShare on Telegram

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಹಂಸಖಾಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ಅಪ್ರಾಪ್ತ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ADVERTISEMENT

ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್ ಸ್ಥಳೀಯ ಮುಖಂಡನ ಮಗ ಎಂದು ಬಾಲಕಿಯ ಕುಟುಂಬ ಹೇಳಿಕೊಂಡಿದ್ದು, ಹೆಚ್ಚಿನ ತನಿಖೆಗಾಗಿ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ನಾಲ್ಕು ದಿನಗಳ ನಂತರ ಅಪ್ರಾಪ್ತ ಬಾಲಕಿಯ ಪೋಷಕರು ಶನಿವಾರ ಹಂಸಖಾಲಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ಹುಡುಗಿ ಸೋಮವಾರ ಮಧ್ಯಾಹ್ನ ಆರೋಪಿಯ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಲು ಅವರ ಮನೆಗೆ ಹೋಗಿದ್ದಳು, ಆದರೆ ಮನೆಗೆ ಮರಳುವಾಗ ಆಕೆ ತೀವ್ರ ಅಸ್ವಸ್ಥವಾಗಿದ್ದಳು, ಮನೆಗೆ ತಲುಪಿದ ಕೆಲವೇ ಘಳಿಗೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

“ನಮ್ಮ ಮಗಳು ಸ್ಥಳೀಯ ಟಿಎಂಸಿ ನಾಯಕನ ಮಗನ ನಿವಾಸದಲ್ಲಿ ಪಾರ್ಟಿಯಿಂದ ಹಿಂತಿರುಗಿದ ನಂತರ ತೀವ್ರವಾಗಿ ರಕ್ತಸ್ರಾವವಾಗುತ್ತಿದ್ದಳು ಮತ್ತು ತೀವ್ರವಾದ ಹೊಟ್ಟೆ ನೋವನ್ನು ಹೊಂದಿದ್ದಳು ಮತ್ತು ನಾವು ಅವಳನ್ನು ಆಸ್ಪತ್ರೆಗೆ ಕರೆದೊಯ್ಯುವ ಮುನ್ನವೇ ಅವಳು ಸಾವನ್ನಪ್ಪಿದಳು.” ಎಂದು ಮೃತಳ ತಾಯಿ ಆರೋಪಿಸಿದ್ದಾರೆ.

” ಪಾರ್ಟಿಯಲ್ಲಿ ಹಾಜರಿದ್ದ ಜನರೊಂದಿಗೆ ಮಾತನಾಡಿದ ಬಳಿಕ, ಆರೋಪಿ ಮತ್ತು ಅವನ ಸ್ನೇಹಿತರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ನಮಗೆ ಖಚಿತವಾಗಿದೆ” ಎಂದು ಹುಡುಗಿಯ ತಾಯಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಕೆಯ ಮರಣ ಪ್ರಮಾಣ ಪತ್ರ ನೀಡುವ ಮುನ್ನವೇ ಜನರ ಗುಂಪೊಂದು ಅಪ್ರಾಪ್ತ ಬಾಲಕಿಯ ಶವವನ್ನು ಶವಸಂಸ್ಕಾರಕ್ಕೆ ಬಲವಂತವಾಗಿ ಕೊಂಡೊಯ್ದಿದೆ ಎಂದು ಅವರು ಆರೋಪಿಸಿದ್ದಾರೆ.

ಸದ್ಯ, 9 ನೇ ತರಗತಿಯ ಬಾಲಕಿಯ ಸಾವು ಬಂಗಾಳ ರಾಜಕಾರಣದಲ್ಲಿ ಹೊಸ ತಿರುವು ಪಡೆದಿದೆ. ಬಿಜೆಪಿಯು ಈ ಸಾವನ್ನು ಬಳಸಿ ಆಡಳಿತ ಪಕ್ಷದ ಮೇಲೆ ತೀವ್ರ ಟೀಕೆಗಳನ್ನು ಮಾಡುತ್ತಿದೆ. ಸರ್ಕಾರವು ಬಾಲಕಿಯ ಸಾವಿಗೆ ಸಂಬಂಧಪಟ್ಟ ಆರೋಪಿಗಳ ರಕ್ಷಣೆಯಲ್ಲಿ ತೊಡಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ.

ಈ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ಪ್ರತಿಕ್ರಿಯಿಸಿದ್ದು, ಬಾಲಕಿ ಸಾವಿಗೆ ಕಾರಣ ಏನು ಎಂದು ಪೊಲೀಸರಿಗೆ ಇನ್ನೂ ಅರ್ಥವಾಗುತ್ತಿಲ್ಲ. ನಾನು ಅವರನ್ನು ಕೇಳಿದೆ. ನೀವು ಇದನ್ನು ಅತ್ಯಾಚಾರ ಎಂದು ಕರೆಯುತ್ತೀರಾ ಅಥವಾ ಅವಳು ಗರ್ಭಿಣಿಯೇ? ಇದು ಪ್ರೇಮ ಪ್ರಕರಣವೇ? ನೀವು ಈ ಬಗ್ಗೆ ವಿಚಾರಿಸಿದ್ದೀರಾ? ಇದು ದುರದೃಷ್ಟಕರ ಘಟನೆಯಾಗಿದೆ. ಬಾಲಕಿ ಮತ್ತು ಆರೋಪಿಯ ನಡುವಿನ ಸಂಬಂಧ ಆಕೆಯ ಕುಟುಂಬ ಸದಸ್ಯರಿಗೆ ಮತ್ತು ಸ್ಥಳೀಯರಿಗೆ ತಿಳಿದಿತ್ತು ಎಂದು ಅವರು ಹೇಳಿದ್ದಾರೆ.

ಹುಡುಗಿಯ ಕುಟುಂಬದವರು ಮೃತದೇಹದ ಅಂತಿಮ ಸಂಸ್ಕಾರವನ್ನೂ ನಡೆಸಿದ್ದೀರಿ, ನಾನು ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಮಾತನಾಡುತ್ತಿದ್ದೇನೆ, ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆಯೇ ಅಥವಾ ಅವಳು ಗರ್ಭಿಣಿಯಾಗಿದ್ದಾಳೆಯೇ ಅಥವಾ ಸಾವಿಗೆ ಬೇರೆ ಯಾವುದೇ ಕಾರಣವಿದೆಯೇ ಎಂಬುದಕ್ಕೆ ಪುರಾವೆಯನ್ನು ಪೊಲೀಸರು ಎಲ್ಲಿಂದ ಪಡೆಯುತ್ತಾರೆ? ಯಾರೋ ಕಪಾಳಮೋಕ್ಷ ಮಾಡಿದ ನಂತರ ಅವಳು ಅಸ್ವಸ್ಥಳಾದಳೋ ತಿಳಿಯುವುದು ಹೇಗೆ ಎಂದು ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಈ ಹೇಳಿಕೆ ಸದ್ಯ ವಿವಾದವನ್ನು ಸೃಷ್ಟಿಸಿದೆ. ಪ್ರತಿಪಕ್ಷಗಳು ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ, ಸಿಪಿಐ(ಎಂ) ಮತ್ತು ಕಾಂಗ್ರೆಸ್ ಬ್ಯಾನರ್ಜಿ ವಿರುದ್ಧ ಛೀಮಾರಿ ಹಾಕಿದ್ದಾರೆ.

Tags: BJPCongress PartyCovid 19ಅಪ್ರಾಪ್ತೆ ಸಾವುಗ್ಯಾಂಗ್‌ ರೇಪ್‌ನರೇಂದ್ರ ಮೋದಿಪಶ್ಚಿಮ ಬಂಗಾಳಬಿಜೆಪಿಸಿಎಂ ಬ್ಯಾನರ್ಜಿ
Previous Post

ಬೆಂಗಳೂರಿನಲ್ಲಿ ಹೆಚ್ಚಿದ ಪರಿಸರ ಮಾಲಿನ್ಯ : ಮಹಿಳೆಯರಲ್ಲಿ ಹೆಚ್ಚಿದ ಬಂಜೆತನದ ಸಮಸ್ಯೆ!

Next Post

ಕೋಮುಗಲಭೆಗಳ ವಿರುದ್ದ ಮಠಾಧೀಶರು ಧ್ವನಿ ಎತ್ತಬೇಕು : ಡಿ.ಕೆ.ಶಿವಕುಮಾರ್

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಲಸಿಕೆ ವಿಷಯದಲ್ಲಿ ಮಲತಾಯಿ ಧೋರಣೆ; ಗುಜರಾತ್‌ಗೆ ಬೆಣ್ಣೆ, ಕರ್ನಾಟಕಕ್ಕೆ ಸುಣ್ಣ: ಡಿಕೆಶಿ ಕಿಡಿ

ಕೋಮುಗಲಭೆಗಳ ವಿರುದ್ದ ಮಠಾಧೀಶರು ಧ್ವನಿ ಎತ್ತಬೇಕು : ಡಿ.ಕೆ.ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada