• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಾನು ಗೃಹ ಸಚಿವನಾಗಿದ್ದರೆ ಉಡಾಯಿಸುತ್ತಿದ್ದೆ: ಯತ್ನಾಳ್‌ ವಿವಾದಾತ್ಮಕ ಹೇಳಿಕೆ

Any Mind by Any Mind
April 17, 2022
in ಕರ್ನಾಟಕ, ರಾಜಕೀಯ
0
ನಾನು ಗೃಹ ಸಚಿವನಾಗಿದ್ದರೆ ಉಡಾಯಿಸುತ್ತಿದ್ದೆ: ಯತ್ನಾಳ್‌ ವಿವಾದಾತ್ಮಕ ಹೇಳಿಕೆ
Share on WhatsAppShare on FacebookShare on Telegram

ನಾನು ಗೃಹ ಸಚಿವನಾಗಿದ್ದರೆ ಅವರನ್ನು ಉಡಾಯಿಸುತ್ತಿದ್ದೆ. ಎಲ್ಲರನ್ನೂ ಸ್ವರ್ಗಕ್ಕೆ ಕಳಿಸುತ್ತಿದ್ದೆ. ಅಗರ ಜ್ಞಾನೇಂದ್ರ ಆ ಸ್ಥಾನಕ್ಕೆ ಲಾಯಕ್ಕಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.

ADVERTISEMENT

ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಭೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸೌಮ್ಯ ಸ್ವಭಾವದವರು ಆಗಿದ್ದರೆ ಕಂದಾಯ, ಲೋಕೋಕಪಯೋಗಿ ಮುಂತಾದ ಬೇರೆ ಖಾತೆ ವಹಿಸಿಕೊಳ್ಳಬೇಕು. ಗೃಹ ಖಾತೆಯನಲ್ಲ. ನನಗೆ ಈ ಖಾತೆ ಕೊಟ್ಟಿದ್ದರೆ ಕಥೆಯೇ ಬೇರೆ ಆಗಿರುತ್ತಿತ್ತು ಎಂದರು.

ರಾಜ್ಯದ ಗೃಹ ಸಚಿವರು ಶಾಂತಿ ಸಮಾಧಾನದಿಂದ ಇದ್ದರೆ ಆಗುವುದಿಲ್ಲ. ಇಂತಹ ಘಟನೆಗಳನ್ನು ಹತ್ತಿಕ್ಕಬೇಕಾದರೆ, ಅವರೂ ಚತ್ರಿ ಆಗಬೇಕು. ಕೆಲ ಮುಸ್ಲಿಮರಿಗೆ ಹಿಜಬ್, ದೇಶ ವಿರೋಧಿ ಚಟುವಟಿಕೆಗಳು ಬೇಕಾಗಿದೆಯೇ ಹೊರತು ಸಾಮರಸ್ಯ ಬೇಕಿಲ್ಲ. ಇವರನ್ನು ಹೀಗೆ ಬಿಟ್ಟರೇ ದೇಶಕ್ಕೆ ಮಾರಕವಾಗುತ್ತಾರೆ. ಕೆಜಿ ಹಳ್ಳಿ, ಡಿಜೆಹಳ್ಳಿ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದರೆ ಮತ್ತೆ ಇಂತಹ ಘಟನೆ ಮರುಕಳಿಸುತ್ತಿರಲಿಲ್ಲ ಎಂದರು.

ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅಧಿಕಾರದಲ್ಲಿ ಇದ್ದಿದ್ದರೆ ರಾಜ್ಯದಲ್ಲೂ ಪಾಕಿಸ್ತಾನ ಇರುತ್ತಿತ್ತು. ಇಂದು ಮತಾಂಧರಿಗೆ ಭಯ ಹುಟ್ಟಿಸುವ ಕೆಲಸವನ್ನು ಸರ್ಕಾರ ಹಾಗೂ ಗೃಹ ಸಚಿವರು ಮಾಡಬೇಕು. ಅದು ಬಿಟ್ಟು ಸಮಾಧಾನ ಹೇಳುವುದರಲ್ಲಿ ಪ್ರಯೋಜನವಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧವೇ ಕಿಡಿಕಾರಿದರು.

ಉತ್ತರ ಪ್ರದೇಶದಲ್ಲಿ ರಾಮನವಮಿ ರ್ಯಾಲಿ ವೇಳೆ ಒಂದು ಗಲಭೆಯೂ ನಡೆದಿಲ್ಲ. ಇಲ್ಲಿನ ಘಟನೆ ನೋಡಿದರೆ, ಇದು ಬಿಜೆಪಿ ಹೆಸರು ಕೆಡಿಸಲು ಮಾಡಿರುವ ದೊಡ್ಡ ಷಡ್ಯಂತ್ರವೆಂಬುದು ಅರ್ಥವಾಗುತ್ತದೆ. ಇದಕ್ಕಾಗಿ ಸಂಬಂಧಪಟ್ಟವರಿಗೆ ವಿದೇಶಗಳಿಂದ ಹಣ ಹರಿದು ಬರುತ್ತಿದೆ. ಆದರೂ ನಮ್ಮಲ್ಲಿರುವ ಡೋಂಗಿ ಜಾತ್ಯಾತೀತರಿಗೆ ದೇಶದ ಬದಲಾಗಿ ಮುಸ್ಲಿಮರ ವೋಟು ಬೇಕಾಗಿದೆ ಎಂದು ಕುಟುಕಿದರು.

ರಾಜ್ಯದಲ್ಲಿ ಪದೇ ಪದೇ ಇಂಥ ಘಟನೆ ಆಗ್ತಿದೆ. ಇಂತಹ ಹೊತ್ತಿನಲ್ಲಿ ಸರ್ಕಾರ ಶಾಂತಿ ಮಂತ್ರ ಹೇಳ್ತಾ ಕೂತ್ರೆ ಆಗಲ್ಲ. ಕ್ರಮ ತಗೋತೀವಿ – ತಗೋತಿವಿ, ತೀವ್ರವಾಗಿ ಖಂಡಿಸ್ತೀವಿ ಅಂದ್ರೆ ಏನೂ ಆಗಲ್ಲ. ಸರ್ಕಾರದಿಂದ ಇಂತಹವರ ಮೇಲೆ ಕಠಿಣ ಕ್ರಮ ಆಗುತ್ತಿಲ್ಲ. ಏಕೆಂದರೆ ನಮ್ಮ ಸರ್ಕಾರ ಪೊಲೀಸರಿಗೂ ಫ್ರೀ ಹ್ಯಾಂಡ್ ಕೊಡ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ವಿವಾದಿತ ಪೋಸ್ಟ್ ಹಾಕಿದವನ ವಿರುದ್ಧ ಕ್ರಮ ಆಗಬೇಕು. ಎಷ್ಟೋ ಜನ ನಕಲೀ ಖಾತೆ ಮೂಲಕ ಶ್ರೀರಾಮನ ಬಗ್ಗೆ, ಪ್ರಧಾನಿ ಬಗ್ಗೆ ಹಗುರವಾದ ಹೇಳಿಕೆಗಳನ್ನು ಪೋಸ್ಟ್ ಮಾಡುತ್ತಾರೆ. ಹಾಗೆಯೇ ಹಿಂದೂಗಳ ಹೆಸರಿನಲ್ಲೂ ಖಾತೆ ತೆರೆದು ಪೋಸ್ಟ್ ಹಾಕುತ್ತಿದ್ದಾರೆ. ಅಲ್ಲಿ ಪ್ರಸಾದ್ ಅನ್ನೋ ಹೆಸರಿನಲ್ಲಿ ಖಾತೆ ಇದ್ದರೆ, ಪೋಸ್ಟ್ ಹಾಕೋನು ಮೆಹಬೂಬ್ ಆಗಿರ್ತಾನೆ. ಈ ಎಲ್ಲದರ ಬಗ್ಗೆಯೂ ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

Tags: Basangouda Patil YatnalBJPhubalipratidvaniಬಿಜೆಪಿ
Previous Post

ಅಕ್ರಮ ಹಣ ವರ್ಗಾವಣೆ ಪ್ರಕರಣ : ದಾವೂದ್ ಸಹೋದರ ಇಕ್ಬಾಲ್ ಕಸ್ಕರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

Next Post

PSI ನೇಮಕಾತಿಯಲ್ಲಿ ಅಕ್ರಮ : ಯುವಜನರ ಕನಸು ನುಚ್ಚು ನೂರು ಮಾಡಿದ ಬಿಜೆಪಿ ಸರ್ಕಾರ!

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
Next Post
PSI ನೇಮಕಾತಿಯಲ್ಲಿ ಅಕ್ರಮ : ಯುವಜನರ ಕನಸು ನುಚ್ಚು ನೂರು ಮಾಡಿದ ಬಿಜೆಪಿ ಸರ್ಕಾರ!

PSI ನೇಮಕಾತಿಯಲ್ಲಿ ಅಕ್ರಮ : ಯುವಜನರ ಕನಸು ನುಚ್ಚು ನೂರು ಮಾಡಿದ ಬಿಜೆಪಿ ಸರ್ಕಾರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada