• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಸರಕಾರದಿಂದ ಧ್ವನಿವರ್ಧಕ ಮಾರ್ಗಸೂಚಿ ಪ್ರಕಟ!

ಪ್ರತಿಧ್ವನಿ by ಪ್ರತಿಧ್ವನಿ
May 11, 2022
in ಕರ್ನಾಟಕ
0
ರಾಜ್ಯ ಸರಕಾರದಿಂದ ಧ್ವನಿವರ್ಧಕ ಮಾರ್ಗಸೂಚಿ ಪ್ರಕಟ!
Share on WhatsAppShare on FacebookShare on Telegram

ರಾಜ್ಯದಲ್ಲಿ ಉದ್ಭವಿಸಿರುವ ಆಜಾನ್ ಮತ್ತು ಸುಪ್ರಭಾತ ವಿವಾದದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಧ್ವನಿವರ್ಧಕ ಮಾರ್ಗಸೂಚಿ ಪ್ರಕಟಿಸಿದೆ.

ADVERTISEMENT

ಮಂಗಳವಾರ ಯಾವ ಪ್ರದೇಶಗಳಲ್ಲಿ ಎಷ್ಟು ಡಿಸೆಬಲ್ ನಲ್ಲಿ ಧ್ವನಿವರ್ಧಕ ಬಳಸಬೇಕು ಎಂಬ ಬಗ್ಗೆ ರಾಜ್ಯ ಸರಕಾರ ಸುತ್ತೂಲೆ ಹೊರಡಿಸಿದೆ.

15 ದಿನದೊಳಗೆ ಧ್ವನಿ ವರ್ಧಕಗಳಿಗೆ ಅನುಮತಿ ಪಡೆಯಬೇಕು ಹಾಗೂ ಮಂದಿರ, ಮಸೀದಿ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಈ ಮಾರ್ಗಸೂಚಿ ಅನ್ವಯವಾಗಲಿದೆ.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಡಿಸೆಬಲ್ ಮಿತಿ ಇರಬೇಕು ಎಂಬ ನಿಯಮ ಆಧರಿಸಿ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಹಾಗೂ ರಾತ್ರಿ 10 ಯಿಂದ ಬೆಳಗಿನ ಜಾವ 6 ಗಂಟೆವರೆಗೆ ನಿರ್ದಿಷ್ಟ ಡೆಸಿಬಲ್ ನಿಗದಿಪಡಿಸಲಾಗಿದೆ.

ಡಿಎಸ್ಪಿ ದರ್ಜೆಯಿಂದ ಮೇಲ್ಪಟ್ಟ ರಾಜ್ಯ ಪೊಲೀಸ್ ಮಹಾನಿರ್ದೇಶಕರ ದರ್ಜೆವರೆಗೂ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳುವ ಅಧಿಕಾರ ಹೊಂದಿರುತ್ತಾರೆ. ಧ್ವನಿ ವರ್ಧಕ ಬಳಕೆಯಲ್ಲಿ ನಿಯಮ ಉಲ್ಲಂಘನೆ ಆದರೆ ಕ್ರಮ ಕೈಗೊಳ್ಳುವ ಅಧಿಕಾರ ನೀಡಲಾಗಿದೆ. ಸಾರ್ವಜನಿಕ ಸಮಾರಂಭ ಕಾರ್ಯಕ್ರಮ ನಡೆಸುವರೆಗೂ ಅನುಮತಿ ಕಡ್ಡಾಯಪಡಿಸಲಾಗಿದೆ.

ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಎಲ್ಲಾ ರೀತಿಯ ಧ್ವನಿವರ್ಧಕ, ತಮಟೆ, ಬ್ಯಾಂಡ್, ಡಿಜೆ ಎಲ್ಲದಕ್ಕೂ ನಿರ್ಬಂಧಿಸಲಾಗಿದೆ. ಆದರೆ ಅಗತ್ಯ ಸಮಯದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಮೇರೆಗೆ ಧ್ವನಿವರ್ಧಕ ಬಳಸಬಹುದಾಗಿದೆ.

ವಸತಿ ಪ್ರದೇಶಗಳಲ್ಲಿ ವಾಹನಗಳು ಹಾರ್ನ್ ಮೂಲಕ ಕಿರಿಕಿರಿ ಮಾಡುವಂತಿಲ್ಲ, ಸಾರ್ವಜನಿಕರಿಂದ ದೂರು ಬಂದರೆ ಕ್ರಮ ಕೈಗೊಳ್ಳಲಾಗುವುದು. ಮನೆಯಲ್ಲಿ ನಡೆಸುವ ಕಾರ್ಯಕ್ರಮ ಹಾಗೂ ಇತರೆ ಖಾಸಗಿ ಕಾರ್ಯಕ್ರಮ ಶಬ್ಧ 5 ಡಿಸೆಬಲ್ ಮೀರದಂತೆ ಶಬ್ಧ ಬಳಸಬಹುದಾಗಿದೆ.

(ವಲಯವಾರು ಹಗಲು-ರಾತ್ರಿ)

ಕೈಗಾರಿಕಾ ವಲಯ – 75 ಡಿಸೆಬಲ್ – 70 ಡಿಸೆಬಲ್

ವಾಣಿಜ್ಯ ವಲಯ – 65 ಡಿಸೆಬಲ್ – 55 ಡಿಸೆಬಲ್

ವಸತಿ ವಲಯ- 55 ಡಿಸೆಬಲ್ – 45 ಡಿಸೆಬಲ್

ಸೈಲೆಂಟ್ ವಲಯ – 50 ಡಿಸೆಬಲ್ – 40 ಡಿಸೆಬಲ್

Tags: KarnatakaLoud SpeakerPratidhvani
Previous Post

ರಶೀದ್ ಖಾನ್ ದಾಳಿಗೆ ಲಕ್ನೋ ಧೂಳೀಪಟ: ಗುಜರಾತ್ 62 ರನ್ ಜಯ

Next Post

ಶಾಸಕರ ಸಂಬಳ ಹೆಚ್ಚಳದ ಸುತ್ತ

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಶಾಸಕರ ಸಂಬಳ ಹೆಚ್ಚಳದ ಸುತ್ತ

ಶಾಸಕರ ಸಂಬಳ ಹೆಚ್ಚಳದ ಸುತ್ತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada