ಹಿಂದಿಗಿಂತ ಇಂಗ್ಲಿಷ್ ಹೆಚ್ಚು ಮೌಲ್ಯಯುತವಾಗಿದೆ, ಹಿಂದಿ ಮಾತನಾಡುವವರು ಕೊಯಮತ್ತೂರಿನಲ್ಲಿ ಪಾನಿಪುರಿ ಮಾರುತ್ತಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಭಾಷೆಯಾದ ಇಂಗ್ಲಿಷ್ ಕಲಿಸುತ್ತಿರುವಾಗ ಹಿಂದಿಯನ್ನು ಏಕೆ ಕಲಿಯಬೇಕು ಎಂದು ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಪೊನ್ಮುಡಿ ಪ್ರಶ್ನಿಸಿದ್ಧಾರೆ.
ಕೊಯಮತ್ತೂರಿನ ಭಾರತಿಯಾರ್ ವಿಶ್ವವಿದ್ಯಾನಿಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಪೊನ್ಮುಡಿ, “ಹಿಂದಿ ಓದಿದರೆ ಉದ್ಯೋಗ ಸಿಗುತ್ತದೆ ಎಂದು ಹೇಳುತ್ತಿದ್ದರು, ಹೌದಾ? ಕೊಯಮತ್ತೂರಿನಲ್ಲಿ ಈಗ ಪಾನಿ ಪುರಿ ಮಾರುವವರು ಯಾರು? ಎಂದು ಪ್ರಶ್ನಿಸಿದ್ದಾರೆ. ಹಿಂದಿಗಿಂತ ಇಂಗ್ಲಿಷ್ ಹೆಚ್ಚು ಮೌಲ್ಯಯುತವಾಗಿದೆ, “ಈಗ ಇಂಗ್ಲಿಷ್ ಅಂತರಾಷ್ಟ್ರೀಯ ಭಾಷೆ” ಎಂದು ಪೊನ್ಮುಡಿ ಹೇಳಿದರು.

ಮುಂದುವರೆದು, ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಯೋಜನಕಾರಿ ಅಂಶಗಳನ್ನು ಜಾರಿಗೆ ತರುತ್ತೇವೆ ಆದರೆ ರಾಜ್ಯ ಸರ್ಕಾರವು ಕೇವಲ ದ್ವಿಭಾಷಾ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಿದ. ತಮಿಳು ವಿದ್ಯಾರ್ಥಿಗಳು ಯಾವುದೇ ಭಾಷೆಯನ್ನು ಕಲಿಯಲು ಸಿದ್ಧರಿದ್ದಾರೆ ಮತ್ತು ಹಿಂದಿ ಐಚ್ಛಿಕವಾಗಿರಬೇಕು , ಕಡ್ಡಾಯವಾಗಿರಬಾರದು ಎಂದು ಅವರು ಹೇಳಿದರು.