• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮೇ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಕಲ್ಲಂಗಡಿ ವ್ಯಾಪಾರಿ ನಬಿಸಾಬ್

Any Mind by Any Mind
May 17, 2022
in ಕರ್ನಾಟಕ
0
ಮೇ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಕಲ್ಲಂಗಡಿ ವ್ಯಾಪಾರಿ ನಬಿಸಾಬ್
Share on WhatsAppShare on FacebookShare on Telegram

ಧಾರವಾಡದಲ್ಲಿ ಶ್ರೀರಾಮಸೇನೆಯ ಗೂಂಡಾ ಪಡೆಯಿಂದ ದಾಳಿಗೊಳಗಾಗಿ ನಷ್ಟ ಅನುಭವಿಸಿದ್ದ ತಳ್ಳುಗಾಡಿಯ ಕಲ್ಲಂಗಡಿ ವ್ಯಾಪಾರಿ ನಬಿಸಾಬ್ ಕಿಲ್ಲೇದಾರ್ ಎಂಟನೇ ವಾರ್ಷಿಕ ಮೇ ಸಾಹಿತ್ಯ ಮೇಳವನ್ನು ಉದ್ಘಾಟಿಸಲು ಸಜ್ಜಾಗಿದ್ದಾರೆ. ಮೇ 27 ಮತ್ತು 28 ರಂದು ಧಾರವಾಡ ನಗರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾರ್ಮಿಕ ವರ್ಗದವರಿಗೆ ವೇದಿಕೆ ಕಲ್ಪಿಸುವ ಗುರಿ ಹೊಂದಲಾಗಿದೆ. ಸಮ್ಮೇಳನದ ಸಂಘಟಕರಲ್ಲಿ ಒಬ್ಬರಾದ ಬಸವರಾಜ ಸೂಳಿಭಾವಿ ಅವರು ಕಾರ್ಯಕ್ರಮದಲ್ಲಿ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಧಾರವಾಡದ ಹನುಮಾನ ಮಂದಿರದ ಹೊರಗೆ ಕಲ್ಲಂಗಡಿ ಹಣ್ಣು ಮಾರುತ್ತಿದ್ದ ನಬಿಸಾಬ್ ಕಿಲ್ಲೇದಾರ್ ಅವರ ಗಾಡಿಯ ಮೇಲೆ ಶ್ರೀರಾಮ ಸೇನೆಯ ಕಾರ್ಯಕರ್ತರು, ದಾಳಿ ನಡೆಸಿ ಗಾಡಿಯನ್ನು ಧ್ವಂಸಗೊಳಿಸಿದ್ದರು. ಕಲ್ಲಂಗಡಿಯನ್ನು ರಸ್ತೆಗೆಸೆದು ಒಡೆದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿ, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ನಬೀಸಾಬ್‌ ಅವರಿಗೆ ನೈತಿಕ ಸ್ಥೈರ್ಯ ತುಂಬಲು ಹಾಗೂ ಬೆಂಬಲಿಸಿ ಹಲವು ಸಾಮಾಜಿಕ ಸಂಘಟನೆಗಳು ಅವರನ್ನು ಸಂಪರ್ಕಿಸಿ ಸಹಾಯ ಹಸ್ತ ಚಾಚಿತ್ತು. ಅದರ ಮುಂದುವರಿದ ಭಾಗವಾಗಿ ಮೇ ಸಾಹಿತ್ಯ ಸಮ್ಮೇಳನಕ್ಕೆ ಅವರನ್ನು ಆಹ್ವಾನಿಸಲಾಗಿದೆ ಎನ್ನಲಾಗಿದೆ.

ನಬಿಸಾಬ್ ಅವರಲ್ಲದೆ ಬೀಡಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ರೈತರು ಸೇರಿದಂತೆ ಐವರನ್ನು ಮೇ ಸಾಹಿತ್ಯ ಮೇಳವನ್ನು ಉದ್ಘಾಟಿಸಲು ಆಹ್ವಾನಿಸಲಾಗಿದೆ. ದಾವಣಗೆರೆಯ ತಾಜ್ ಪ್ಯಾಲೇಸ್ ನಲ್ಲಿ ಕಾರ್ಯಕ್ರಮ ನಡೆಯಲಿದೆ. ಮೇ ಸಾಹಿತ್ಯ ಮೇಳವು ವಾರ್ಷಿಕ ಕಾರ್ಯಕ್ರಮವಾಗಿದೆ. ಸಮಕಾಲೀನ ವಿಷಯಗಳನ್ನು ಆಧರಿಸಿ ಮುಖ್ಯ ಭಾಷಣ ಮಾಡಲು ಪ್ರಮುಖರನ್ನು ಆಹ್ವಾನಿಸಲಾಗಿದೆ ಎಂದು ಬಸವರಾಜ ಸೂಳಿಭಾವಿ ಹೇಳಿದ್ದಾರೆ. ಈ ವರ್ಷ ಮದ್ರಾಸ್‌ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಕೆ.ಚಂದ್ರು ಮುಖ್ಯ ಭಾಷಣ ಮಾಡಲಿದ್ದಾರೆ. ಚಂದ್ರು ಅವರ ಜೀವನದ ಕಥೆಯನ್ನೇ ಆಧರಿಸಿ ಬಂದ ʼಜೈ ಭೀಮ್‌ʼ ಚಿತ್ರ ದೊಡ್ಡ ಯಶಸ್ಸನ್ನು ಕಂಡಿತ್ತು.

ಹಿರಿಯ ಕೃಷಿ ಪತ್ರಕರ್ತ ಪಿ.ಸಾಯಿನಾಥ್ ಅವರು ‘ಗ್ರಾಮೀಣ ಭಾರತ ಬಿಕ್ಕಟ್ಟು’ ಕುರಿತು ಉಪನ್ಯಾಸ ನೀಡುತ್ತಿದ್ದಾರೆ. ಸುಧೀಂದ್ರ ಕುಲಕರ್ಣಿ ಅವರು ‘ವೈವಿಧ್ಯತೆ ಮತ್ತು ದಬ್ಬಾಳಿಕೆಯ ಹಿಂಸೆ’ ಕುರಿತು ಮಾತನಾಡುತ್ತಿದ್ದಾರೆ. ಕನ್ನಡದ ಜನಪ್ರಿಯ ದಿನಪತ್ರಿಕೆಯ ಖ್ಯಾತ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ದಿ ನ್ಯೂಸ್‌ ಮಿನಿಟ್‌ ವರದಿ ಮಾಡಿದೆ.

ಸ್ವಾತಂತ್ರ್ಯ ಗಳಿಸಿದ ಕಳೆದ ಏಳು ದಶಕಗಳಲ್ಲಿ ದೇಶ ಏನು ಗಳಿಸಿದೆ ಮತ್ತು ಕಳೆದುಕೊಂಡಿದೆ ಎಂಬುದನ್ನು ಕಂಡುಹಿಡಿಯಲು ಈ ಕಾರ್ಯಕ್ರಮವು ಪ್ರಯತ್ನಿಸುತ್ತದೆ. ದೇಶದ ಸಾಂವಿಧಾನಿಕ ಬಿಕ್ಕಟ್ಟು ಮತ್ತು ಒಕ್ಕೂಟದ ಆಶಯಗಳ ಬಗ್ಗೆಯೂ ಚರ್ಚಿಸಲಾಗುವುದು ಎಂದು ಬಸವರಾಜ ಸೂಳಿಭಾವಿ ಹೇಳಿದ್ದಾರೆ.

ಡಾ.ಟಿ.ಎನ್.ಪ್ರಕಾಶ್ ಕಮ್ಮರಡಿ ಅವರು ಕರ್ನಾಟಕ ಕೃಷಿ ಬಿಕ್ಕಟ್ಟಿನ ಬಗ್ಗೆ ಬೆಳಕು ಚೆಲ್ಲಲಿದ್ದಾರೆ ಮತ್ತು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರು ಎದುರಿಸುತ್ತಿರುವ ಬಿಕ್ಕಟ್ಟು ಮತ್ತು ಉದ್ವಿಗ್ನತೆಗಳ ಕುರಿತು ನಸ್ರೀನ್ ಮಿಟಾಯಿ ಮಾತನಾಡಲಿದ್ದಾರೆ. ರಾಜ್ಯಾದ್ಯಂತ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಮುಂದಾಗಿದ್ದೇವೆ.ಸ್ಥಳೀಯ ಜನರೊಂದಿಗೆ ಸಂಪರ್ಕ ಸಾಧಿಸಲು ಸಮಾನ ಮನಸ್ಕ ಲೇಖಕರ ತಂಡ ರಚಿಸಲಾಗುವುದು ಎಂದು ಸೂಳಿಭಾವಿ ವಿವರಿಸಿದ್ದಾರೆ.

ದೆಹಲಿಯ ಅಖಿಲ ಭಾರತ ಪ್ರಗತಿಪರ ಮಹಿಳಾ ಸಂಘದ ಕಾರ್ಯದರ್ಶಿ ಕವಿತಾ ಕೃಷ್ಣನ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಲಡಾಯಿ ಪ್ರಕಾಶನ, ಕವಿ ಪ್ರಕಾಶನ ಕವಲಕಿ, ಚಿತ್ತಾರ ಕಲಾ ಬಳಗ ಸೇರಿದಂತೆ ಹಲವು ಚಿಂತಕರು, ಕಾರ್ಯಕರ್ತರು ಕೈಜೋಡಿಸಿ ಕಾರ್ಯಕ್ರಮ ಆಯೋಜಿಸಿದ್ದಾರೆ.

ಮಾಹಿತಿ: IANS

Tags: BJPCongress PartyCovid 19ಕಲ್ಲಂಗಡಿ ವ್ಯಾಪಾರಿನಬಿಸಾಬ್ನರೇಂದ್ರ ಮೋದಿಬಿಜೆಪಿಮೇ ಸಾಹಿತ್ಯ ಸಮ್ಮೇಳನ
Previous Post

ಬಿಡಿಎ ಅಧ್ಯಕ್ಷರ ಕಾರ್ಯದರ್ಶಿಗೆ 3 ಲಕ್ಷ ಸಂಬಳ ಬೇಕಾ? ಎಎಪಿ ಪ್ರಶ್ನೆ

Next Post

CBIಗೆ ಏನು ಸಿಕ್ಕಿಲ್ಲ : ಕಾಂಗ್ರೆಸ್ ನಾಯಕ ಪಿ.ಚಿದಂಬರಂ

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
Next Post
CBIಗೆ ಏನು ಸಿಕ್ಕಿಲ್ಲ : ಕಾಂಗ್ರೆಸ್ ನಾಯಕ ಪಿ.ಚಿದಂಬರಂ

CBIಗೆ ಏನು ಸಿಕ್ಕಿಲ್ಲ : ಕಾಂಗ್ರೆಸ್ ನಾಯಕ ಪಿ.ಚಿದಂಬರಂ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada