• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಿರಿಯ ಲೇಖಕ ಡಿಎಸ್ ನಾಗಭೂಷಣ ನಿಧನ : ಗಣ್ಯರಿಂದ ಸಂತಾಪ!

Any Mind by Any Mind
May 19, 2022
in ಕರ್ನಾಟಕ
0
ಹಿರಿಯ ಲೇಖಕ ಡಿಎಸ್ ನಾಗಭೂಷಣ ನಿಧನ : ಗಣ್ಯರಿಂದ ಸಂತಾಪ!
Share on WhatsAppShare on FacebookShare on Telegram

ಹಿರಿಯ ಲೇಖಕ, ಸಮಾಜವಾದಿ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ ಅವರು ಇಂದು ನಿಧನರಾಗಿದ್ದಾರೆ.  ನಿಧನಕ್ಕೆ ಅನೇಕ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ADVERTISEMENT

ನಮ್ಮ ನಡುವಿನ ಹಿರಿಯ ಲೇಖಕ, ಚಿಂತಕ, ಹೋರಾಟಗಾರ ಡಿ.ಎಸ್.ನಾಗಭೂಷಣ್ ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದು, ಅನ್ಯಾಯ,‌ ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ಧದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಆತ್ಮೀಯರಾಗಿದ್ದ ಡಿ.ಎಸ್.ನಾಗಭೂಷಣ್ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ. ಅವರ ಪತ್ನಿ‌ ಮತ್ತು ಗೆಳೆಯರೆಲ್ಲರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಡಿ.ಎಸ್.ನಾಗಭೂಷಣ್ ಅವರ ‘ಗಾಂಧಿ ಕಥನ’ ವನ್ನು‌ ಪ್ರೀತಿಯಿಂದ ಕಳಿಸಿಕೊಟ್ಟಿದ್ದರು. ಅದನ್ನು ಓದುತ್ತಿದ್ದೇನೆ ಎಂದಾಗ ಖುಷಿಪಟ್ಟಿದ್ದರು. ಲೋಹಿಯಾ ಚಿಂತನೆಯ‌‌ ಪುಸ್ತಕಗಳೂ ಸೇರಿದಂತೆ ಅವರ ಎಲ್ಲ ಕೃತಿಗಳ ಮೂಲಕ ನಾಗಭೂಷಣ್ ನಮ್ಮ ನೆನಪಲ್ಲಿ‌‌‌‌ ಸದಾ ಹಸಿರಾಗಿರುತ್ತಾರೆ ಎಂದು ಟ್ವೀಟ್‌ ಮಾಡಿದ್ದಾರೆ.

‘ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬರಹಗಾರ ಹಾಗೂ ಸಾಮಾಜಿಕ ಚಿಂತಕ ಡಿ.ಎಸ್. ನಾಗಭೂಷಣ ಅವರು ಕಾಲವಾದ ವಿಷಯ ತಿಳಿದು ಬೇಸರವಾಯಿತು. ಗಾಂಧಿ ಚಿಂತನೆಗಳ ಬಗ್ಗೆ ಮತ್ತಷ್ಟು ಅರಿವು ಮೂಡಿಸಿದ ಅವರ ಅಗಲಿಕೆಯು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಸಂತಾಪಗಳು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

‘ಖ್ಯಾತ ವಿಮರ್ಶಕ, ‘ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ ಸಾಹಿತಿ ಡಿ.ಎಸ್. ನಾಗಭೂಷಣ ಅವರ ನಿಧನ ಸುದ್ಧಿ ದುಃಖ ತರಿಸಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇ ನೆ’ ಎಂದು ಕಾಂಗ್ರೆಸ್ ನಾಯಕ ಎಸ್.ಆರ್.ಪಾಟೀಲ ಟ್ವೀ ಟ್ ಮಾಡಿದ್ದಾರೆ.

ಕನ್ನಡದ ಹಿರಿಯ ಲೇಖಕ ಹಾಗೂ ಸಮಾಜವಾದಿ ಚಿಂತಕರಾದ ಡಿ.ಎಸ್.ನಾಗಭೂಷಣ ಅವರಿಗೆ ನಮ್ಮ ಅಂತಿಮ ನಮನಗಳು. ಬರಹಗಳ ಮೂಲಕ ಅವರು ನಮ್ಮ ಮನದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ,ಬೆಂಗಳೂರು ಅಧ್ಯಕ್ಷರು ಟ್ವೀಟ್‌ ಮಾಡಿದ್ದಾರೆ.

ಕನ್ನಡದ ಹಿರಿಯ ಲೇಖಕ ಹಾಗೂ ಸಮಾಜವಾದಿ ಚಿಂತಕರಾದ ಡಿ.ಎಸ್.ನಾಗಭೂಷಣ ಅವರಿಗೆ ನಮ್ಮ ಅಂತಿಮ ನಮನಗಳು🙏🙏. ಬರಹಗಳ ಮೂಲಕ ಅವರು ನಮ್ಮ ಮನದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ🙏.#ಡಿ_ಎಸ್_ನಾಗಭೂಷಣ pic.twitter.com/ffrFtw5C97

— ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ,ಬೆಂಗಳೂರು. (@KDA_Bengaluru) May 19, 2022

ಖ್ಯಾತ ಸಮಾಜವಾದಿ ಚಿಂತಕ ಲೇಖಕ ಹಾಗು ತಮ್ಮ ಜನಪ್ರಿಯ ‘ಗಾಂಧಿ ಕಥನ’ ಕೃತಿಗೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಡಿ. ಎಸ್. ನಾಗಭೂಷಣ ರವರ ಅಕಾಲಿಕ ನಿಧನದಿಂದ  ನಮ್ಮ ನಾಡು ಪ್ರಗತಿಪರ ಜನಪರ ಕಳಕಳಿಯ ಸಾಹಿತಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಮಾಜಿ ಸಂಸದ ಸಿ ನಾರಾಯಣಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಖ್ಯಾತ ಸಮಾಜವಾದಿ ಚಿಂತಕ ಲೇಖಕ ಹಾಗು ತಮ್ಮ ಜನಪ್ರಿಯ 'ಗಾಂಧಿ ಕಥನ' ಕೃತಿಗೆ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಶ್ರೀ ಡಿ. ಎಸ್. ನಾಗಭೂಷಣ ರವರ ಅಕಾಲಿಕ ನಿಧನದಿಂದ ನಮ್ಮ ನಾಡು ಪ್ರಗತಿಪರ ಜನಪರ ಕಳಕಳಿಯ ಸಾಹಿತಿಯೊಬ್ಬರನ್ನು ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ.

— C Narayanaswamy, Ex MP (@cnswamy) May 19, 2022

ಡಿ.ಎಸ್. ನಾಗಭೂಷಣ ಅವರ ಕಿರು ಪರಿಚಯ

ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದ ನಾಗಭೂಷಣ ಅವರಿಗೆ 70 ವರ್ಷ ವಯಸ್ಸಾಗಿತ್ತು.ಮೃತರ ಅಂತ್ಯಕ್ರಿಯ ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ.

‘ಗಾಂಧಿ ಕಥನ ಕೃತಿ’ ಈಚೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಪುರಸ್ಕೃತವಾಗಿತ್ತು. ಕೆ.ರಾಮದಾಸ್‌, ಕಡಿದಾಳು ಶಾಮಣ್ಣ ಸೇರಿದಂತೆ ಹಲವರ ಅಭಿನಂದನಾ ಗ್ರಂಥ ಹೊರತಂದಿದ್ದಾರೆ. ರಸಿಕ ರುದ್ರ ತಪಸ್ವಿ ಲೋಹಿಯಾ, ಸಮಾಜವಾದದ ಸಾಲುದೀಪಗಳು ಸೇರಿದಂತೆ ಹಲವು ಕೃತಿಗಳನ್ನು ಸಂಪಾದಿಸಿದ್ದಾರೆ.

ಅವರ ಸಂಪಾದಕತ್ವದಲ್ಲಿ ಸಮಾಜವಾದಿ ಮಾಸಿಕ ‘ಹೊಸ ಮನುಷ್ಯ’ ಪ್ರಕಟಗೊಳ್ಳುತ್ತಿತ್ತು. ಲೋಹಿಯಾ ಜನ್ಮಶತಾಬ್ಧಿ ಪ್ರತಿಷ್ಠಾನದ ಅಧ್ಯಕ್ಷರಾಗಿ ಸಮಾಜವಾದಿ ಚಿಂತನೆಯ ಹಲವು ಕಾರ್ಯಾಗಾರಗಳನ್ನು ಆಯೋಜಿಸಿದ್ದರು. ಅವರಿಗೆ ಪತ್ನಿ, ಕವಯತ್ರಿ ಸವಿತಾ ನಾಗಭೂಷಣ ಇದ್ದಾರೆ. ಮೃತರ ಅಂತ್ಯ ಸಂಸ್ಕಾರ ಗುರುವಾರ ಸಂಜೆ 4ಕ್ಕೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನೆರವೇರಲಿದೆ.

ರಾಜಕೀಯ ಗ್ರಹಿಕೆ ಮಾತ್ರವಲ್ಲ ಸಾಹಿತ್ಯ ಕೃತಿಗಳ ಸೂಕ್ಷ್ಮ ಓದುಗರಾಗಿದ್ದ ಇವರು ಎಂಥ ಅನಾರೋಗ್ಯದಲ್ಲಿಯೂ ‘ಹೊಸ ಮನುಷ್ಯ’ ಪತ್ರಿಕೆಯನ್ನು ನಿರಂತರವಾಗಿ ಹೊರತಂದಿದ್ದು ಅವರ ಬದ್ಧತೆಗೆ ಸಾಕ್ಷಿ. ಸಮಕಾಲೀನ ಚಿಂತನೆಗಳಿಗೆ ಸಂಬಂಧಿಸಿದ ಯಾವುದೇ ಗಂಭೀರ ವಿಷಯವನ್ನೂ ಕನ್ನಡದ ಜನರಿಗೆ ಓದಿಸಲೇಬೇಕು ಎಂದು ಹಟ ತೊಟ್ಟು ಅನುವಾದ ಮಾಡಿಸುತ್ತಿದ್ದರು.

Tags: BJPCongress PartyCovid 19ಬಿಜೆಪಿ
Previous Post

ಟಿಪ್ಪು ಸುಲ್ತಾನ್ ಮೈಸೂರು ಹುಲಿ ಅಲ್ಲ, ಎಂದಿಗೂ ಮೈಸೂರು ಹುಲಿ ನಾಲ್ವಡಿ ಕೃಷ್ಣರಾಜ ಒಡೆಯರ್ : ಸಂಸದ ಪ್ರತಾಪ್ ಸಿಂಹ

Next Post

ಆರೋಗ್ಯ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಏಷ್ಯಾದ ನಂ.1 ಶ್ರೀಮಂತ ಗೌತಮ್‌ ಅದಾನಿ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post
ಆರೋಗ್ಯ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಏಷ್ಯಾದ ನಂ.1 ಶ್ರೀಮಂತ ಗೌತಮ್‌ ಅದಾನಿ

ಆರೋಗ್ಯ ಕ್ಷೇತ್ರಕ್ಕೂ ಲಗ್ಗೆ ಇಟ್ಟ ಏಷ್ಯಾದ ನಂ.1 ಶ್ರೀಮಂತ ಗೌತಮ್‌ ಅದಾನಿ

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada