ಚಿತ್ರೀಕರಣದ ವೇಳೆ ಆಕಸ್ಮಿಕವಾಗಿ ಕಾರು ನದಿಗೆ ಬಿದ್ದಿದ್ದರಿಂದ ಸ್ಟಾರ್ ನಟ-ನಟಿಯರಾದ ವಿಜಯ್ ದೇವರಕೊಂಡ ಮತ್ತು ಸಮಂತಾ ಪಾರಾದ ಘಟನೆ ಕಾಶ್ಮೀರದಲ್ಲಿ ಸಂಭವಿಸಿದೆ ಎನ್ನಲಾಗಿದೆ.
`ಖುಷಿ’ ಚಿತ್ರದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿದ್ದು, ಚಿತ್ರೀಕರಣಕ್ಕಾಗಿ ವಿಜಯ್ ಹಾಗೂ ಸಮಂತಾ, ನದಿಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗದ ಮೇಲೆ ವಾಹನವನ್ನು ಓಡಿಸಬೇಕಾಗಿತ್ತು. ಆಗ ದುರದೃಷ್ಟವಶಾತ್, ವಾಹನವು ನದಿಗೆ ಬಿದ್ದು, ವಾಹನದಲ್ಲಿದ್ದ ಸಮಂತಾ ಮತ್ತು ವಿಜಯ್ ಬೆನ್ನಿಗೆ ಗಾಯವಾಗಿದೆ. ಇದೀಗ ಇಬ್ಬರಿಗೂ ಚಿಕಿತ್ಸೆ ನೀಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿಯಾಗಿವೆ.
ಶ್ರೀನಗರದ ದಾಲ್ ಲೇಕ್ ಬಳಿ ಶೂಟಿಂಗ್ ಮಾಡುತ್ತಿರುವಾಗ ವಾಹನ ನೀರಿಗೆ ಬಿದ್ದಿದೆ. ಈ ವೇಳೆ ಬೆನ್ನಿಗೆ ಗಾಯವಾಗಿ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರಿಬ್ಬರು ಸ್ಥಳೀಯ ಹೋಟೆಲ್ಗೆ ಹೋಗಿದ್ದು, ಸದ್ಯ ವೈದ್ಯರು ಈ ಕಲಾವಿದರಿಗೆ ಚಿಕಿತ್ಸೆ ನೀಡಿದ್ದಾರೆ. ಭಾರೀ ಭದ್ರತೆಯಲ್ಲಿ ಶೂಟಿಂಗ್ ಮಾಡಲಾಗಿತ್ತು. ಆದರೂ ಅಪಘಾತ ಸಂಭವಿಸಿ, ದುರದೃಷ್ಟವಶಾತ್ ವಿಜಯ್ ಮತ್ತು ಸಮಂತಾ ಸಣ್ಣ ಮಟ್ಟದಲ್ಲಿ ಪೆಟ್ಟಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

`ಖುಷಿ’ ಇದೇ ಡಿಸೆಂಬರ್ 23ಕ್ಕೆ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ತೆಲುಗು, ತಮಿಳು, ಮಲಯಾಳಂ, ಕನ್ನಡದಲ್ಲಿ ಈ ಚಿತ್ರ ರಿಲೀಸ್ ಆಗಲಿದೆ. ಕಾಶ್ಮೀರದ ಶೂಟಿಂಗ್ ದೃಶ್ಯಗಳನ್ನು ಸಮಂತಾ ಅವರು ಕೆಲ ದಿನಗಳ ಹಿಂದೆ ಹಂಚಿಕೊಂಡಿದ್ದರು. ಇನ್ನು ವಿಶೇಷವಾಗಿ ಸಮಂತಾಗೆ ಕಾಶ್ಮೀರದಲ್ಲಿ `ಖುಷಿ’ ಸಿನಿಮಾ ತಂಡ ಸರ್ಪ್ರೈಸ್ ಹುಟ್ಟುಹಬ್ಬದ ಸೆಲೆಬ್ರೇಷನ್ ಕೂಡ ಮಾಡಿತ್ತು. ಒಟ್ನಲ್ಲಿ ವಿಜಯ್ ಮತ್ತು ಸಮಂತಾ ಸೇಫ್ ಆಗಿರೋದನ್ನ ಕೇಳಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ.
ಆದರೆ ಚಿತ್ರ ತಂಡ ಈ ವರದಿಯನ್ನು ಅಲ್ಲಗಳೆದಿದ್ದು, ವಿಜಯ್ ದೇವರಕೊಂಡ ಮತ್ತು ಸಮಂತಾ ಇಬ್ಬರಿಗೂ ಯಾವುದೇ ಗಾಯಗಳಾಗಿಲ್ಲ. ೩೦ ದಿನದ ಶೂಟಿಂಗ್ ಪೂರ್ಣಗೊಂಡಿದೆ ಎಂದು ಸ್ಪಷ್ಟಪಡಿಸಿದೆ. ಆದರೆ ಶೂಟಿಂಗ್ ವೇಳೆ ಅಪಘಾತ ಆಗಿದೆಯೇ ಇಲ್ಲವೇ ಎಂಬುದನ್ನು ಪ್ರಸ್ತಾಪ ಮಾಡಿಲ್ಲ