ಪಠ್ಯಪುಸ್ತಕದಲ್ಲಿ ಹೆಡ್ಗೆವಾರ್ ಭಾಷಣ ಸೇರಿದಕ್ಕೆ ವಿರೋಧ ವ್ಯಕ್ತವಾಗಿರುವ ವಿಚಾರದ ಬಗ್ಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆಸಿದ್ದು,
ಬಾಗಲಕೋಟೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಡ್ಗೆವಾರ್ ದೇಶದ ಸಂಸ್ಕೃತಿ ಅವರನ್ನಲ್ಲದೇ ಪಠ್ಯದಲ್ಲಿ ಮೊಹಮ್ಮದ್ ಅಲಿ ಜಿನ್ನಾ ಹೆಸರು ಸೇರಿಸಬೇಕಿತ್ತಾ? ಶಿವನ ಲಿಂಗ ಒಡೆದ ಔರಂಗಜೇಬನ ಹೆಸರು ಸೇರಿಸಬೇಕಿತ್ತಾ? ಪಠ್ಯದಲ್ಲಿ ಅಲೆಗ್ಸಾಂಡರ್ ದಿ ಗ್ರೇಟ್ ಅಂತಾ ಮಕ್ಕಳು ಓದುತ್ತಿದ್ದರು. ಈಗ ದೇಶದ ನಿಜವಾದ ಇತಿಹಾಸದ ಬಗ್ಗೆ ಸೇರಿಸಲಾಗಿದೆ ಎಂದರು.
ಬಿ.ವೈ.ವಿಜಯೇಂದ್ರಗೆ ವಿಧಾನಪರಿಷತ್ ಟಿಕೆಟ್ ಕೈತಪ್ಪಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರದ ತೀರ್ಮಾನಕ್ಕೆ ವಿಜಯೇಂಧ್ರ ಬದ್ಧ ಅಂತ ಹೇಳಿದ್ದಾರೆ. 30-40 ವರ್ಷಗಳ ಕಾಲ ದುಡಿದ ಕಾರ್ಯಕರ್ತರಿಗೆ ಸಿಕ್ಕಿಲ್ಲ. ಲಿಂಗರಾಜ ಕೂಡ ಟಿಕೆಟ್ ಸಿಗದಿದ್ದಕ್ಕೆ ಸುಮ್ಮನಿದ್ದಾರೆ ಎಂದು ಹೇಳಿದ್ದಾರೆ.