ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ನಾಳೆ ಪೆಟ್ರೋಲ್ ಬಂಕ್ ಮಾಲೀಕರು ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪೆಟ್ರೋಲ್ ಪೂರೈಕೆಯಲ್ಲಿನ ವೈಫಲ್ಯದಿಂದ ತೊಂದರೆಗೆ ಸಿಲುಕಿರುವ ಪೆಟ್ರೋಲ್ ಬಂಕ್ ಮಾಲೀಕರು ನಾಳೆ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲು ನಿರ್ಧರಿಸಿರುವುದರಿಂದ ಸಾರ್ವಜನಿಕ ಸೇವೆಯಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
2017ರಿಂದ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲೆ ಒಂದು ರೂ. ಕಮಿಷನ್ ನೀಡಬೇಕೆಂದು ಒಕ್ಕೂಟದ ಪ್ರಮುಖ ಬೇಡಿಕೆಯಾಗಿತ್ತು. ಆದರೆ, ಅಂದಿನಿಂದ ಇಂದಿನವರೆಗೂ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ ಎಂದು ಅಖಿಲ ಕರ್ನಾಟಕ ಪೆಟ್ರೋಲಿಯಂ ಮಾರಾಟಗಾರರ ಒಕ್ಕೂಟ ಹೇಳಿದೆ.

ಕಮಿಷನ್ ಹೆಚ್ಚಳ ಮಾಡಬೇಕೆಂದು ಕೇಂದ್ರದ ಪೆಟ್ರೋಲಿಯಂ ಸಚಿವರು ಹಾಗೂ ರಾಜ್ಯದ ಮುಖ್ಯಮಂತ್ರಿಯವರಿಗೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.