• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರ್ ಪ್ರಾರಂಭ: ಮುಖ್ಯಮಂತ್ರಿ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
June 1, 2022
in ಕರ್ನಾಟಕ
0
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರ್ ಪ್ರಾರಂಭ: ಮುಖ್ಯಮಂತ್ರಿ ಬೊಮ್ಮಾಯಿ
Share on WhatsAppShare on FacebookShare on Telegram

ಯುವಕರಿಗೆ ಉದ್ಯೋಗ ಒದಗಿಸುವಂತಹ ಅಂತರರಾಷ್ಟ್ರೀಯ ಮಟ್ಟದ ಫರ್ನೀಚರ್ ಕ್ಲಸ್ಟರ್ ನ್ನು ಮಂಗಳೂರು ಸಮೀಪದಲ್ಲಿ ಇದೇ ವರ್ಷ ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ADVERTISEMENT

ಕರಾವಳಿ ಪ್ರದೇಶದಲ್ಲಿ ಗ್ರೀನ್ ಪವರ್ ಅಭಿವೃದ್ಧಿ, ಹಸಿರು ಇಂಧನ ಆಧಾರಿತ ಕೈಗಾರಿಕಾ ಹಬ್ ನಿರ್ಮಿಸಲು ತೀರ್ಮಾನ ಮಾಡಲಾಗಿದೆ. ಶಿಲ್ಪಿಗಳು, ಮರದ ಕೆಲಸ ಮಾಡುವವರಿಗೆ ಕ್ಲಸ್ಟರ್ ನ್ನು ಸ್ಥಾಪಿಸಲು ಶೀಘ್ರದಲ್ಲಿಯೇ ಅನುಮೋದನೆ ನೀಡಲಾಗುವುದು. ಈ ರೀತಿ ಸಮಗ್ರ, ಸಶಕ್ತ, ಸಮೃದ್ಧಿ ಕರ್ನಾಟಕ ಕಟ್ಟುವ ಬದ್ಧತೆ ಸರ್ಕಾರ ತೋರುತ್ತಿದೆ ಎಂದಿದ್ದಾರೆ.

ಕಾರ್ಕಳದಲ್ಲಿ ಟೆಕ್ಸ್ ಟೈಲ್ ಪಾರ್ಕ್ :

ಕಾರ್ಕಳದಲ್ಲಿ ಪ್ರಾಚೀನ ಜೈನಬಸದಿಗಳು ಸೇರಿದಂತೆ ಇತರೆ ಪ್ರವಾಸಿ ತಾಣಗಳ ಟೂರಿಸಂ ಸರ್ಕ್ಯೂಟ್ ಅನ್ನು ಅಭಿವೃದ್ದಿಗೊಳಿಸಲಾಗುವುದು. ಕರಾವಳಿ ಭಾಗದಲ್ಲಿ ಬೀಚ್ ಟೂರಿಸಂ ಹಾಗೂ ಯಾತ್ರಾ ಪ್ರವಾಸೋದ್ಯಮ ಈ ವರ್ಷ ಅಭಿವೃದ್ಧಿ ಮಾಡಲಾಗುವುದು. ಉದ್ಯೋಗ ಹೆಚ್ಚಳ, ಕೈಗಾರಿಕೆಗೆ ಹೆಚ್ಚಳಕ್ಕೆ ಒತ್ತು ನೀಡಲಾಗಿದ್ದು, ಕಾರ್ಕಳದಲ್ಲಿ ಟೆಕ್ಸ್ ಟೈಲ್ ಪಾರ್ಕ್ ನ್ನು ನಿರ್ಮಿಸಲಾಗುವುದು ಎಂದು ಮಾತನಾಡುವ ವೇಳ ಹೇಳಿದ್ದಾರೆ.

ಕರಾವಳಿ ಭಾಗದ ಆರ್ಥಿಕ ಚಟುವಟಿಕೆಗಳ ಅಭಿವೃದ್ಧಿ :

ಕರಾವಳಿ ಜಿಲ್ಲೆಗಳನ್ನು ಆಧುನಿಕ ಅಭಿವೃದ್ಧಿಯ ಜಿಲ್ಲೆಗಳನ್ನಾಗಿ ಮಾಡಬೇಕೆಂದು ಕರಾವಳಿ ಭಾಗದ ಸಚಿವರಿಗೆ ಸೂಚಿಸಿದ್ದೇನೆ. ಇದಕ್ಕಾಗಿ ಪೂರಕ ಕಾರ್ಯಕ್ರಮಗಳನ್ನು ಆಯವ್ಯಯದಲ್ಲಿ ರೂಪಿಸಲಾಗಿದೆ.ಕಾರವಾರ ಮತ್ತು ಮಂಗಳೂರಿನ ಬಂದರುಗಳ ವಿಸ್ತರಣಾ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. 2 ಬಂದರುಗಳಲ್ಲಿ ಹೆಚ್ಚಿನ ಪ್ರಮಾಣದ ಹಡಗುಗಳು ತಂಗಲು ಹಾಗೂ ಅಲ್ಲಿನಚಟುವಟಿಕೆಗಳಿಗೆ ಜಮೀನು ನೀಡಲಾಗಿದೆ. 8 ಮೀನುಗಾರರ ಬಂದರಿಗೆ ಯೋಜನೆ ರೂಪಿಸಿದ್ದು , ಅನುದಾನ ನೀಡಲಾಗಿದ್ದು, ಶೀಘ್ರದಲ್ಲಿ ಚಾಲನೆ ನೀಡಲಾಗುವುದು. ಆಳಸಮುದ್ರದ ಮೀನುಗಾರಿಕೆ ದೋಣಿಗಳನ್ನು ನೀಡುವ ಯೋಜನೆ ಜಾರಿಗೆ ತರಲಾಗಿದೆ. ಕರಾವಳಿ ಭಾಗದ ಆರ್ಥಿಕ ಚಟುವಟಿಕೆಗಳ ಅಭಿವೃದ್ಧಿಗೆ ಇವು ಪೂರಕವಾಗಿವೆ ಎಂದು ತಿಳಿಸಿದ್ದಾರೆ.

2400 ಕೋಟಿ ರೂ.ಗಳ 24 ಯೋಜನೆಗಳಿಗೆ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಕೆ :

ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ 8 ವರ್ಷ ಪೂರೈಸಿದ್ದಾರೆ. ಅವರು ದೂರದೃಷ್ಟಿಯುಳ್ಳ ದಕ್ಷ ನಾಯಕ. ಆಯುಷ್ಮಾನ ಭಾರತ ಯೋಜನೆಯ ಮೂಲಕ ಬಡವರಿಗಾಗಿ ಆರೋಗ್ಯ ಕವಚ ನೀಡಿದ್ದಾರೆ. ರೈತರಿಗಾಗಿ ಕಿಸಾನ್ ಸಮ್ಮಾನ್ ನಿಧಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ, ಮೂಲಭೂತ ಸೌಕರ್ಯ ಯೋಜನೆಗಳಡಿ, ಸಾಗರಮಾಲಾ ಯೋಜನೆಯಡಿ ಕರಾವಳಿ ಭಾಗದ ಎಲ್ಲ ಬಂದರುಗಳ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ. ಕರಾವಳಿ ಭಾಗದಲ್ಲಿ 2400 ಕೋಟಿ ರೂ.ಗಳ 24 ಯೋಜನೆಗಳಿಗೆ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಈಗಾಗಲೇ ಸಲ್ಲಿಸಲಾಗಿದ್ದು, ಇವೆಲ್ಲವೂ ಕರಾವಳಿ ಪ್ರದೇಶದ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಹೇಳಿದ್ದಾರೆ.

ಡೀಮ್ಡ್ ಫಾರೆಸ್ಟ್ ನ ಸಮಸ್ಯೆಗೆ ಕಾನೂನು ಚೌಕಟ್ಟಿನೊಳಗೆ ಪರಿಹಾರ :

ಡೀಮ್ಡ್ ಫಾರೆಸ್ಟ್ ನ ಸಮಸ್ಯೆಯನ್ನು ಬಗೆಹರಿಸಿ 6,33,000 ಎಕರೆ ಪ್ರದೇಶವನ್ನು ಡೀಮ್ಡ್ ಫಾರೆಸ್ಟ್ ಪ್ರದೇಶದಿಂದ ಹೊರಗುಳಿಸಿ, ಉಳುಮೆ ಮಾಡುತ್ತಿರುವವರಿಗೆ , ವಾಸಿಸುತ್ತಿರುವವರಿಗೆ ಹಕ್ಕುಪತ್ರ ನೀಡುವ ಕೆಲಸ ಮಾಡಲಾಗಿದೆ.

ಕೊಡಗು, ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಉಳುಮೆ ಮಾಡುವವರಿಗೆ ಜಮೀನಿನ ಹಕ್ಕನ್ನು ನೀಡಲು ವಿಶೇಷವಾದ ಕಾನೂನನ್ನು ರಚಿಸಿ, ಜಮೀನಿನ ಹಕ್ಕುಪತ್ರವನ್ನು ನೀಡಲಾಗುವುದು.ಜನರಿಗೆ ನ್ಯಾಯ ಒದಗಿಸುವ ಜನಸ್ಪಂದನೆಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಬಹಳ ವರ್ಷಗಳಿಂದ ಇರುವ ಈ ಸಮಸ್ಯೆಗೆ ಕಾನೂನು ಚೌಕಟ್ಟಿನಲ್ಲಿ ಪರಿಹಾರ ಒದಗಿಸುವ ಬದ್ಧತೆ ಸರ್ಕಾರಕ್ಕಿದೆ ಎಂದರು.

ಸರ್ಕಾರದ ಜನಪರ ಯೋಜನೆಗಳು :

ಎಣ್ಣೆಹೊಳೆ ಏತ ನೀರಾವರಿ ಯೋಜನೆ ರೂಪಿಸಿದ ಸರ್ಕಾರದ ಅವಧಿಯಲ್ಲಿಯೇ ಯೋಜನೆಯನ್ನು ಪೂರ್ಣಗೊಳಿಸಿರುವುದು ನಮ್ಮ ಸರ್ಕಾರದ ಹೆಗ್ಗಳಿಕೆ. ನೀರಾವರಿ ಸಚಿವರು ರಾಜ್ಯದ ಪ್ರಮುಖ ನೀರಾವರಿಯೋಜನೆಗಳ ಅನುಷ್ಠಾನದಲ್ಲಿ ಬದ್ಧತೆಯನ್ನು ತೋರಿದ್ದಾರೆ. ಕಂದಾಯ ಸಚಿವರು , ಜನರ ಮನೆ ಬಾಗಿಲಿಗೆ ಕಂದಾಯ ದಾಖಲೆಯನ್ನು ತರುವ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಮೀನುಗಾರಿಕೆ ಅಭಿವೃದ್ಧಿ, ದೀನದಲಿತರ ಅಭಿವೃದ್ಧಿಗೆ ಈ ಭಾಗದ ಸಚಿವರು ಶ್ರಮವಹಿಸಿದ್ದಾರೆ. ಎಸ್ ಸಿ/ಎಸ್ ಟಿ ಕಾರ್ಯಕ್ರಮಗಳಿಗೆ 28 ಸಾವಿರ ಕೋಟಿ ಅನುದಾನ ನೀಡುವ ಮೂಲಕ ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದೆ. ಎಸ್ ಸಿ ಎಸ್ ಟಿ ಜನಾಂಗದ ಬಿಪಿಎಲ್ ಕುಟುಂಬಕ್ಕೆ 75 ಯೂನಿಟ್ ಗಳ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಆ್ಯಸಿಡ್ ದಾಳಿಗೆ ಒಳಗಾಗಿರುವ ಹೆಣ್ಣುಮಕ್ಕಳಿಗೆ ನೀಡಲಾಗುತ್ತಿದ್ದ ಮಾಸಿಕ ಧನಸಹಾಯವನ್ನು 3000 ರೂ.ನಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಸಂಧ್ಯಾ ಸುರಕ್ಷೆ, ವಿಧವೆಯರು, ಅಂಗವಿಕಲರಿಗೆ ಮಾಸಾಶನ ಹೆಚ್ಚಳ, ರೈತ ವಿದ್ಯಾನಿಧಿಯ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ, 60 ವರ್ಷ ವಯೋಮಾನದವರಿಗೆ ಆರೋಗ್ಯ ತಪಾಸಣೆ, ಕಿಮೋ ಥೆರಪಿಗಾಗಿ 10 ಹೊಸ ಕೇಂದ್ರಗಳು, 60 ಸಾವಿರ ಸೈಕಲ್ ಡಯಾಲಿಸಿಸ್ ವ್ಯವಸ್ಥೆ ಮಾಡುವ ಮೂಲಕ ದುಡಿಯುವ ವರ್ಗಕ್ಕೆ ಸಹಾಯ ಮಾಡಲಾಗುತ್ತಿದೆ ಎಂದು ಉಡುಪಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ರಾಜಕೀಯ ಸೇರುತ್ತಾರಾ ಸೌರವ್‌ ಗಂಗೂಲಿ? ಕುತೂಹಲ ಮೂಡಿಸಿದ ಟ್ವೀಟ್!

Next Post

ನನ್ನ ವಿರುದ್ಧ ದೆಹಲಿಯಲ್ಲಿ ದೂರು ನೀಡಲಾಗಿದೆ, ಆದರೆ…..? : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

Related Posts

Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
0

https://youtube.com/live/7ZoYaDBylA0

Read moreDetails
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

July 10, 2025
ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

July 10, 2025
Next Post
ಮಸೀದಿ ಕಟ್ಟಲು 36,000 ದೇವಾಲಯಗಳನ್ನು ಧ್ವಂಸಗೊಳಿಸಲಾಗಿದೆ : ಕೆ. ಎಸ್. ಈಶ್ವರಪ್ಪ

ನನ್ನ ವಿರುದ್ಧ ದೆಹಲಿಯಲ್ಲಿ ದೂರು ನೀಡಲಾಗಿದೆ, ಆದರೆ.....? : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

Please login to join discussion

Recent News

Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 
Top Story

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

by Chetan
July 10, 2025
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

by Chetan
July 10, 2025
Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada