ಕೆಲವು ದಿನಗಳಿಂದಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ಬೇಸರ ವ್ಯಕ್ತಪಡಿಡಿಸಿದ್ದಾರೆ.
ಹೌದು, ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಅವರು, ಈ ಹಿಂದಿನ ಪಠ್ಯಪುಸ್ತಕಗಳೇ ಸತ್ಯದಿಂದ ಕೂಡಿತ್ತು. ಈಗ ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಮಾಡಿದ್ದು ಸರಿಯಲ್ಲ. ಪರಿಷ್ಕರಣೆಯಿಂದ ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ಈ ವಿವಾದಕ್ಕೆ ಆದಷ್ಟು ಬೇಗ ಅಂತ್ಯವಾಡಬೇಕು ಎಂಬುದಾಗಿ ಬಿಜೆಪಿ ಪಕ್ಷದ ವಿರುದ್ಧ ಗುಡುಗಿದ್ದಾರೆ.
