ಮುಂಬರುವಂತ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಲಾಗುತ್ತದೆ. ನನ್ನ ಆರೋಗ್ಯ ಚೆನ್ನಾಗಿದ್ದು, ವಯಸ್ಸು ಇಳಿಯೋವರೆಗೆ ಪಕ್ಷಕ್ಕೆ ದುಡಿಯುತ್ತೇನೆ. ನಾನು ಇನ್ನೂ 10 ವರ್ಷಗಳ ಕಾಲ ಸಕ್ರೀಯ ರಾಜಕಾರಣದಲ್ಲೇ ಇರುತ್ತೇನೆ ಪಕ್ಷಕ್ಕೆ ದುಡಿಯುತ್ತೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇದೇ ವೇಳೆಯ ರಾಜ್ಯಸಭೆ ಚುನಾವಣೆಯ ಬಗ್ಗೆ ಸಿದ್ಧರಾಮಯ್ಯ ಆತ್ಮಸಾಕ್ಷಿ ವಿಚಾರವಾಗಿ ಮಾತನಾಡಿ, ಇಲ್ಲಿ ಆತ್ಮಸಾಕ್ಷಿಯ ಪ್ರಶ್ನೆಯೇ ಇಲ್ಲ. ಸಿದ್ಧರಾಮಯ್ಯನವರದ್ದು ರಾಜಕೀಯ ದೊಂಬರಾಟ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಖಂಡಿತವಾಗಿ ಗೆಲುವು ಸಾಧಿಸಲಿದ್ದಾರೆ ಎಂದರು.






