• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಅದಾನಿಗೆ ಯೋಜನೆ ನೀಡುವಂತೆ ಶ್ರೀಲಂಕಾಕ್ಕೆ ಒತ್ತಡ ಹೇರಿದ್ದರೇ ಮೋದಿ?

Any Mind by Any Mind
June 12, 2022
in ದೇಶ, ವಿದೇಶ
0
ಅದಾನಿಗೆ ಯೋಜನೆ ನೀಡುವಂತೆ ಶ್ರೀಲಂಕಾಕ್ಕೆ ಒತ್ತಡ ಹೇರಿದ್ದರೇ ಮೋದಿ?
Share on WhatsAppShare on FacebookShare on Telegram

ADVERTISEMENT

500 ಮೆಗಾವ್ಯಾಟ್ ಪವನ‌ (Wind Power) ವಿದ್ಯುತ್ ಯೋಜನೆಯನ್ನು ನೇರವಾಗಿ ಅದಾನಿ ಗ್ರೂಪ್‌ಗೆ ನೀಡುವಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷ ಗೊಟಾಬಯ ರಾಜಪಕ್ಸೆ ಹೇಳಿದ್ದರು ಎಂದು ಶ್ರೀಲಂಕಾದ ವಿದ್ಯುತ್ ಪ್ರಾಧಿಕಾರದ ಮುಖ್ಯಸ್ಥ ಸಂಸದೀಯ ಸಮಿತಿಯ ಮುಂದೆ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ರಾಜಪಕ್ಸೆ, ಯಾವುದೇ ನಿರ್ದಿಷ್ಟ ಸಂಸ್ಥೆಗೆ ಯೋಜನೆಯನ್ನು ನೀಡುವಂತೆ ತಾನು ಕೇಳಿರುವುದನ್ನು ನಿರಾಕರಿಸಿದ್ದಾರೆ.

ಅದಾಗ್ಯೂ, ತನ್ನ ಗಂಭೀರ ಆರೋಪದ ಎರಡು ದಿನಗಳ ಬಳಿಕ, ತನ್ನ ಹೇಳಿಕೆಯನ್ನು ಹಿಂಪಡೆದ ಶ್ರೀಲಂಕಾ ವಿದ್ಯುತ್ ಪ್ರಾಧಿಕಾರದ ಮುಖ್ಯಸ್ಥ ತಾನು ಭಾವನಾತ್ಮಕ ಒತ್ತಡದಲ್ಲಿದ್ದೆ, ನಾನು ಆ ಬಗ್ಗೆ ಸುಳ್ಳು ಹೇಳಿದ್ದೇನೆ ಎಂದು ಹೇಳಿ, ತಮ್ಮ ಹಿಂದಿನ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಸಿಲೋನ್ ಎಲೆಕ್ಟ್ರಿಸಿಟಿ ಬೋರ್ಡ್ (ಸಿಇಬಿ) ಅಧ್ಯಕ್ಷ ಎಂಎಂಸಿ ಫರ್ಡಿನಾಂಡೋ ಅವರು ಅದಾನಿ ಗ್ರೂಪ್‌ಗೆ 500 ಮೆಗಾವ್ಯಾಟ್ ಪವನ ವಿದ್ಯುತ್ ಸ್ಥಾವರವನ್ನು ಭಾರತದ ಪ್ರಧಾನಿ ಒತ್ತಾಯಿಸುತ್ತಿದ್ದಾರೆ ಎಂದು ಶ್ರೀಲಂಕಾ ಅಧ್ಯಕ್ಷರು ಹೇಳಿದ್ದಾರೆ ಎಂದು ಈ ವಾರದ ಆರಂಭದಲ್ಲಿ ಸಂಸದೀಯ ಸಮಿತಿಯ ಮುಂದೆ ಹೇಳಿಕೆ ನೀಡಿದ್ದರು.

ಶ್ರೀಲಂಕಾದ ಸುದ್ದಿವಾಹಿನಿ ನ್ಯೂಸ್ ಫಸ್ಟ್ ಅಪ್‌ಲೋಡ್ ಮಾಡಿದ ಅವರ ಸಾಕ್ಷ್ಯದ ವೀಡಿಯೊ ಕ್ಲಿಪ್ ಪ್ರಕಾರ, ಫರ್ಡಿನಾಂಡೋ ಅವರು 24 ನವೆಂಬರ್ 2021 ರಂದು, ಸಭೆಯ ನಂತರ ಅಧ್ಯಕ್ಷರು (ಗೋತಬಯ ರಾಜಪಕ್ಸ) ನನ್ನನ್ನು ಕರೆದರು ಮತ್ತು ಯೋಜನೆಯನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸುವಂತೆ ಭಾರತದ ಪ್ರಧಾನಿ ಮೋದಿ ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಹೇಳಿದರು ಎಂದು ಸಮಿತಿಯ ಮುಂದೆ ತಿಳಿಸಿದ್ದರು. ಶ್ರೀಲಂಕಾದ ಉತ್ತರ ಕರಾವಳಿಯಲ್ಲಿ 500 ಮೆಗಾವ್ಯಾಟ್ ಪವನ ವಿದ್ಯುತ್ ಸ್ಥಾವರವನ್ನು ನಿರ್ಮಿಸಲು ಅದಾನಿ ಸಮೂಹವನ್ನು ಹೇಗೆ ಆಯ್ಕೆ ಮಾಡಲಾಯಿತು ಎಂಬುದರ ಕುರಿತು ಸಮಿತಿಯ ಎತ್ತಲಾಗಿದ್ದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದ್ದರು.

ಶ್ರೀಲಂಕಾದ ಸುದ್ದಿ ಸಂಸ್ಥೆ ನ್ಯೂಸ್ ಫಸ್ಟ್ ವರದಿ ಮಾಡಿದ ಪ್ರಕಾರ, ಫರ್ಡಿನಾಂಡೋ ಅವರು, ಇದು ವಿದ್ಯುತ್ ಪ್ರಾಧಿಕಾರ ಅಥವಾ ತನಗೆ ಸಂಬಂಧಿಸಿದ ವಿಷಯವಲ್ಲ, ಹೂಡಿಕೆ ಮಂಡಳಿಗೆ ಇದನ್ನು ತಿಳಿಸಬೇಕು ಎಂದು ಅಧ್ಯಕ್ಷ ಗೋತಬಯ ಅವರಿಗೆ ತಿಳಿಸಿದ್ದಾರೆ. ಬಳಿಕ, ಸ್ವತಃ ಫರ್ಡಿನಾಂಡೋ ಅವರೇ ಈ ವಿಷಯವನ್ನು ಪರಿಶೀಲಿಸುವಂತೆ ಲಿಖಿತವಾಗಿ ಖಜಾನೆ ಕಾರ್ಯದರ್ಶಿ ಗಮನಕ್ಕೆ ತಂದಿದ್ದಾರೆ. ಇದು ʼಸರ್ಕಾರದಿಂದ ಸರ್ಕಾರದೊಡನೆʼ ನಡೆಯುವ ಒಪ್ಪಂದವಾಗಿದೆ ಎಂದು ಅವರು ತಿಳಿಸಿರುವುದಾಗಿ ವರದಿಯಾಗಿದೆ.

ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅದಾನಿ ಹಾಗೂ ಅಂಬಾನಿಯ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ವದಂತಿಯ ಹಿನ್ನೆಲೆಯಲ್ಲಿ ಶ್ರೀಲಂಕಾ ಸಂಸ್ಥೆಯ ಅಧಿಕಾರಿ ನೀಡಿದ್ದ ಹೇಳಿಕೆಯು ಗಂಭೀರ ಗಮನವನ್ನು ಪಡೆದುಕೊಂಡಿತ್ತು. ಆದರೆ, ಅದರ ಬೆನ್ನಲ್ಲೇ ತಾನು ಸುಳ್ಳು ಹೇಳಿದ್ದೇನೆಂದು ಅವರು ಹೇಳಿರುವುದು ಸಾಕಷ್ಟು ಗುಮಾನಿಗೆ ಕಾರಣವಾಗಿದೆ.

Tags: BJPCongress Partyಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಟಿವಿ ಚರ್ಚೆಗಳನ್ನು ಬಹಿಷ್ಕರಿಸಿ : ಇಸ್ಲಾಮಿಕ್‌ ವಿಧ್ವಾಂಸರುಗಳಿಗೆ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಮನವಿ

Next Post

4ನೇ ವಾರ್ಷಿಕ ಓಟದ ಕಾರ್ಯಕ್ರಮದಲ್ಲಿ ಹೊಂದಿಸಿ ಬರೆಯಿರಿ ಚಿತ್ರ ತಂಡ

Related Posts

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?
ವಿದೇಶ

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

by ಪ್ರತಿಧ್ವನಿ
April 15, 2026
0

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷಕ್ಕೆ ಅಂತ್ಯ ತರಲು ಅಮೇರಿಕಾ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಪ್ರಯತ್ನಗಳು ಮತ್ತೆ ಚುರುಕುಗೊಳ್ಳುತ್ತಿರುವ ಸೂಚನೆಗಳು ಗೋಚರಿಸುತ್ತಿವೆ. ಇತ್ತೀಚೆಗೆ ನಡೆದ ಮಾತುಕತೆಗಳು ಸ್ಪಷ್ಟ...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
4ನೇ ವಾರ್ಷಿಕ ಓಟದ ಕಾರ್ಯಕ್ರಮದಲ್ಲಿ ಹೊಂದಿಸಿ ಬರೆಯಿರಿ ಚಿತ್ರ ತಂಡ

4ನೇ ವಾರ್ಷಿಕ ಓಟದ ಕಾರ್ಯಕ್ರಮದಲ್ಲಿ ಹೊಂದಿಸಿ ಬರೆಯಿರಿ ಚಿತ್ರ ತಂಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada