ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ವಿಚಾರಣೆ ನಡೆಸುತ್ತಿದ್ದು, ಇದಕ್ಕೆ ಕಾಂಗ್ರೆಸ್ ನವರು ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಮೈಸೂರು ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ತನಿಖೆ ರಾಜಕೀಯ ಪ್ರೇರಿತ ಅಲ್ಲ. ಧರಣಿ ನೋಡಿದರೆ ಅಕ್ರಮ ಮಾಡಿರುವುದು ಅನುಮಾನ ಮೂಡಿಸುತ್ತದೆ. ಕಾಂಗ್ರೆಸ್ ನವರು ಪ್ರತಿಭಟನೆ ಮಾಡುವ ಅವಶ್ಯಕತೆ ಇರಲಿಲ್ಲ.ಸೋನಿಯಾ ಗಾಂಧಿಯನ್ನು ಮೆಚ್ಚಿಸಲು ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
![](https://pratidhvani.com/wp-content/uploads/2022/06/s-t-somashekar1-15911232701643016510-1024x835.jpg)
ಇಡಿ ತನಿಖೆಗೆ ಯಾರೂ ಆತಂಕ ಪಡಬೇಕಾಗಿಲ್ಲ.ಪ್ರಮಾಣಿಕರಾಗಿದ್ದರೆ ಯಾಕೆ ಭಯ? ಯಾರು ಅಕ್ರಮ ಮಾಡಿರುತ್ತಾರೋ ಅವರಿಗೆ ಭಯ ಕಾಡುತ್ತೆ ಎಂದು ಹೇಳಿದ್ದಾರೆ.