ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಮುಂಜಾನೆ ಮೈಸೂರು ಅರಮನೆಗೆ ಆಗಮಿಸಿದ್ದು ಅವರಿಗೆ ರಾಜವಂಶಸ್ಥರೇ ಉಪಾಹಾರದ ವ್ಯವಸ್ಥೆ ಮಾಡಿದ್ದರು. ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರ ಆಹ್ವಾನದ ಉಪಹಾರಕೂಟದಲ್ಲಿ ಭಾಗಿಯಾದ ಮೋದಿ ಅವರಿಗೆ ದಕ್ಷಿಣ ಭಾರತ ಶೈಲಿಯ ತರೇಹವಾರಿ ತಿಂಡಿಗಳನ್ನು ಸಿದ್ಧಪಡಿಸಲಾಗಿದ್ದು, ಬೆಳ್ಳಿ ತಟ್ಟೆಯಲ್ಲಿ ಬಡಿಸಲಾಯಿತು. ಪ್ರಧಾನಿಗಾಗಿ ಶುದ್ಧ ಸಸ್ಯಹಾರದ ಖಾದ್ಯಗಳನ್ನು ರಾಜಮಾತೆ ಪ್ರಮೋದಾ ದೇವಿ ಅವರ ನೇತೃತ್ವದಲ್ಲಿ ತಯಾರಿಸಲಾಗಿತ್ತು.

ಅರಮನೆ ಬಂದ ಪ್ರಧಾನಿ ಮೋದಿಯನ್ನ ಆಡಿ ಹೊಗಳಿದ ರಾಜ ಯದುವೀರ್

ಈ ಕುರಿತು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೈಸೂರಿಗೆ ಆಗಮಿಸಿದ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಇಂದು ಮುಂಜಾನೆ ಮೈಸೂರು ಅರಮನೆಗೆ ಆಗಮಿಸಿದರು. ಸನ್ಮಾನ್ಯ ಪ್ರಧಾನ ಮಂತ್ರಿಗಳವರ ಜೊತೆಗೆ ರಾಜ್ಯದ ರಾಜ್ಯಪಾಲರಾದ ಸನ್ಮಾನ್ಯ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಹಾಗು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿಯವರು ಮೈಸೂರು ಅರಮನೆಗೆ ಆಗಮಿಸಿ ನಮ್ಮ ಕುಟುಂಬದ ಆತಿಥ್ಯವನ್ನು ಸ್ವೀಕರಿಸಿದರು ಎಂದು ಹೇಳಿದ್ದಾರೆ.
