• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸಂಸತ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ, ಪ್ರಧಾನಿ ಮೋದಿ ಗೈರು : ಸಂಸದರು ಹೇಳಿದ್ದೇನು?

ಪ್ರತಿಧ್ವನಿ by ಪ್ರತಿಧ್ವನಿ
July 17, 2022
in ದೇಶ
0
ಸಂಸತ್ ಅಧಿವೇಶನಕ್ಕೂ ಮುನ್ನ ಸರ್ವಪಕ್ಷಗಳ ಸಭೆ, ಪ್ರಧಾನಿ ಮೋದಿ ಗೈರು : ಸಂಸದರು ಹೇಳಿದ್ದೇನು?
Share on WhatsAppShare on FacebookShare on Telegram

ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಸಂಸತ್ ಭವನದಲ್ಲಿ ಸರ್ಕಾರ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗೈರುಹಾಜರಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ. 36 ಪಕ್ಷಗಳ ನಾಯಕರು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು, ಸಲಹೆಗಳನ್ನು ನೀಡಿದರು ಮತ್ತು ಕೆಲವು ವಿಷಯಗಳ ಬಗ್ಗೆ ಚರ್ಚೆಗಳನ್ನು ನಡೆಸಿದರು.

ADVERTISEMENT

ಕಾಂಗ್ರೆಸ್ ಸಂಸದ ಎಆರ್ ಚೌಧರಿ ಮಾತನಾಡಿ, “ಪ್ರಧಾನಿ ಸರ್ವಪಕ್ಷ ಸಭೆಗೆ ಬರಬೇಕಿತ್ತು, ಆದರೆ ಅವರು ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದ್ದಾರೆಂದು ನಮಗೆ ತಿಳಿಸಲಾಗಿದೆ” ಎಂದು ಹೇಳಿದರು.

ಮುಂದುವರೆದು, “ರಾಜಸ್ಥಾನದಲ್ಲಿ ಚುನಾವಣೆಗೆ ಮುಂಚಿತವಾಗಿ ಜಾಟ್ ಸಮುದಾಯದ ಮತಗಳನ್ನು ತನ್ನೆಡೆಗೆ ಸೆಳೆಯಲು ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಜಗದೀಪ್ ಧಂಖರ್ ಅವರನ್ನು ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದೆ. ಅವರ ಉಮೇದುವಾರಿಕೆಗೆ ನಮಗೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ.

ಶ್ರೀಲಂಕಾ ಬಿಕ್ಕಟ್ಟನ್ನು ಪರಿಹರಿಸಲು ಭಾರತ ಮಧ್ಯಪ್ರವೇಶಿಸಬೇಕು ಎಂದು ಎಐಎಡಿಎಂಕೆಯ ಮುನಿಸಾಮಿ ತಂಬಿದುರೈ ಮತ್ತು ಟಿಆರ್ ಬಾಲು ಹೇಳಿದ್ದಾರೆ.

ಶ್ರೀಲಂಕಾ ಬಿಕ್ಕಟ್ಟಿನ ಕುರಿತು ಕೇಂದ್ರವು ಮಂಗಳವಾರ ಸಂಜೆ 5.30 ಕ್ಕೆ ಮತ್ತೊಂದು ಸರ್ವಪಕ್ಷ ಸಭೆ ನಡೆಸಲಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, “ಶ್ರೀಲಂಕಾ ವಿಷಯದ ಕುರಿತು ಮಂಗಳವಾರ ಸಭೆಯನ್ನು ನಿಗದಿಪಡಿಸಲಾಗಿದೆ, ಇದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನಿನ್ನೆಯೂ ಪ್ರತಿಪಕ್ಷಗಳ ಜತೆ ಸಭೆ ನಡೆಸಿದ್ದೇವೆ. ನಾವು ಯಾವುದೇ ಚರ್ಚೆಗೆ ಮುಕ್ತರಾಗಿದ್ದೇವೆ, ಆದರೆ ಅವರು ಗದ್ದಲವನ್ನು ಸೃಷ್ಟಿಸಿ ಮೇಲ್ಮನೆಯ ಕಾರ್ಯವಿಧಾನವನ್ನು ಸ್ಥಗಿತಗೊಳಿಸಿದರೆ ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಅಸಂಸದೀಯ ಪದಗಳ ವಿಚಾರವಾಗಿ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, “ಲೋಕಸಭಾ ಸಚಿವಾಲಯವು ಕಾಲಕಾಲಕ್ಕೆ ಅಸಂಸದೀಯ ಪದಗಳ ಪಟ್ಟಿಯನ್ನು ಪ್ರಕಟಿಸುತ್ತಿದೆ. ಅಂತಹ ಪದಗಳನ್ನು 1954 ರಿಂದ ಪ್ರಕಟಿಸಲಾಗಿದೆ.

ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ಅವರು ರೈತರ ಆಂದೋಲನದಿಂದ ಪಂಜಾಬ್ ಭಾರಿ ಪ್ರಕ್ಷುಬ್ಧತೆಗೆ ಒಳಗಾಗಿರುವ ವಿಷಯವನ್ನು ಪ್ರಸ್ತಾಪಿಸಿದರು.

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಸರ್ವಪಕ್ಷ ಸಭೆಯಲ್ಲಿ 13 ವಿಷಯಗಳ ಪ್ರಸ್ತಾಪ ಮಾಡಿದ್ದೇವೆ. ಸಂಸತ್ತಿನ ಅಧಿವೇಶನದಲ್ಲಿ ಸರ್ಕಾರ 32 ಮಸೂದೆಗಳನ್ನು ಮಂಡಿಸಲಿದ್ದು, ಅದರಲ್ಲಿ 14 ಮಾತ್ರ ಸಿದ್ಧವಾಗಿವೆ. ಆ 14 ಬಿಲ್‌ಗಳ ಯಾಔಉದು ಎಂಬುದರ ಬಗ್ಗೆ ನಮಗೆ ಹೇಳಿಲ್ಲ. ಅಧಿವೇಶನದಲ್ಲಿ ನಮಗೆ ಕೇವಲ 14 ಅಧಿವೇಶನದ ದಿನಗಳಿವೆ. ಅದರಲ್ಲಿ ನಾವು 20 ವಿಷಯಗಳನ್ನು ಚರ್ಚಿಸಬೇಕು ಮತ್ತು 32 ಮಸೂದೆಗಳನ್ನು ಅಂಗೀಕರಿಸಬೇಕು ಎಂದು ಹೇಳಿದ್ದಾರೆ.

ಮುಂದುವರೆದು, “ನಾವು ಒಟ್ಟಾಗಿ ಪ್ರಸ್ತುತಪಡಿಸಬೇಕಾದ ವಿಷಯಗಳ ಬಗ್ಗೆ ಚರ್ಚಿಸಲು ನಮ್ಮ ವಿರೋಧ ಪಕ್ಷದ ನಾಯಕರ ಸಭೆಯು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ” ಎಂದು ಅವರು ಹೇಳಿದರು. ಅವರು ಅಗ್ನಿಪಥ್ ಯೋಜನೆ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಎಎಪಿ ಸಂಸದ ಸಂಜಯ್ ಸಿಂಗ್ ಅವರು, ನಾನು ಸಂಸತ್ ಅಧಿವೇಶನದಲ್ಲಿ ಚರ್ಚಿಸಲು ಮೂರು ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ, ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಿಶ್ವ ನಗರ ಶೃಂಗಸಭೆಯಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ಮತ್ತು ಕಲ್ಲಿದ್ದಲು ದರ ಬಗ್ಗೆ ಎಂದು ಹೇಳಿದ್ದಾರೆ.

ಮುಂದುವರೆದು, ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯ ಮತ್ತು ಕೇಂದ್ರ ತನಿಖಾ ದಳವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ.. ಪ್ರತಿಪಕ್ಷಗಳನ್ನು ಗುರಿಯಾಗಿಸಲು ಮಾತ್ರ ಬಳಸಲಾಗುತ್ತಿದೆ,” ಎಂದು ಹೇಳಿದರು.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ರಾಜ್ಯದಲ್ಲಿ ಶಿಶು ಮರಣ ಪ್ರಮಾಣವನ್ನು ಒಂದಂಕಿಗೆ ಇಳಿಸುವ  ಗುರಿ : ಸಿಎಂ ಬೊಮ್ಮಾಯಿ

Next Post

ಉಪ ರಾಷ್ಟ್ರಪತಿ ಚುನಾವಣೆಗೆ UPA ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವಾ ಕಣಕ್ಕೆ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
Next Post
ಉಪ ರಾಷ್ಟ್ರಪತಿ ಚುನಾವಣೆಗೆ UPA ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವಾ ಕಣಕ್ಕೆ

ಉಪ ರಾಷ್ಟ್ರಪತಿ ಚುನಾವಣೆಗೆ UPA ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವಾ ಕಣಕ್ಕೆ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada