• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಭ್ರಷ್ಟಾಚಾರ ಮಾಡಿದ್ದೇವೆ ಎಂದು ರಮೇಶ್‌ ಕುಮಾರ್‌ ಅವರೇ ಒಪ್ಪಿಕೊಂಡಿದ್ದಾರೆ : ತನಿಖೆಗೆ ಆಗ್ರಹಿಸಿದ ಸಚಿವ ಡಾ.ಕೆ.ಸುಧಾಕರ್‌

ಪ್ರತಿಧ್ವನಿ by ಪ್ರತಿಧ್ವನಿ
July 22, 2022
in ಕರ್ನಾಟಕ
0
ಕೋವಿಡ್‌ ರೋಗಲಕ್ಷಣವಿರುವವರಿಗೆ ಮಾತ್ರ ತಪಾಸಣೆ: ಸಚಿವ ಡಾ.ಕೆ.ಸುಧಾಕರ್‌
Share on WhatsAppShare on FacebookShare on Telegram

ಕಾಂಗ್ರೆಸ್‌ ನಾಯಕರು ಮೂರು-ನಾಲ್ಕು ತಲೆಮಾರುಗಳಿಗಾಗುವಷ್ಟು ಸಂಪಾದನೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ಅವರೇ ಜಗಜ್ಜಾಹೀರು ಮಾಡಿದ್ದಾರೆ. ಈ ಮೂಲಕ ರಮೇಶ್‌ ಕುಮಾರ್‌ ಅವರೇ ಕಾಂಗ್ರೆಸ್‌ನ ವ್ಯರ್ಥ ಹೋರಾಟಕ್ಕೆ ತಿಲಾಂಜಲಿ ನೀಡಿದ್ದಾರೆ. ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ADVERTISEMENT

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್‌ ನಾಯಕರು ಹಗರಣ, ಭ್ರಷ್ಟಾಚಾರ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಈ ಮೂಲಕ ಮಾಡಿದ ತಪ್ಪಿನಲ್ಲಿ ತಮ್ಮ ಪಾಲು ಇದೆ ಎಂಬುದನ್ನು ಹೇಳಿದ್ದಾರೆ. ಅನೇಕ ನಾಯಕರು ಗಾಂಧಿ ಕುಟುಂಬದ ಹೆಸರಲ್ಲಿ, ವಂಶಾಡಳಿತದಿಂದ ಸಾಕಷ್ಟು ಹಣ ಮಾಡಿದ್ದಾರೆ ಎಂದಿದ್ದಾರೆ. ರಮೇಶ್‌ ಕುಮಾರ್‌ ಅವರು ಬಹಳ ಹಿಂದಿನ ಹಿರಿಯ ನಾಯಕರು. ಸ್ಪೀಕರ್‌ ಆಗಿ ಅವರು ಹೇಗೆ ನಾಟಕವಾಡಿದರು, ಆದೇಶವನ್ನು ಮಾಧ್ಯಮಗಳ ಮುಂದೆ ಹೇಗೆ ಉಲ್ಲೇಖ ಮಾಡಿದ್ದಾರೆ ಎಂಬುದನ್ನು ಈಗಾಗಲೇ ತಿಳಿಸಿದ್ದೇನೆ. ದೇಶದಲ್ಲಿ ಯಾವ ಸ್ಪೀಕರ್‌ ಕೂಡ ಮಾಡದ ಘನಂದಾರಿ ಕೆಲಸವನ್ನು ಅವರು ಮಾಡಿದ್ದಾರೆ. ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದರು.

ತನಿಖೆಗೆ ಆಗ್ರಹ

ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿಯವರನ್ನು ತನಿಖೆ ಮಾಡಬಾರದು ಎಂದು ಕಾಂಗ್ರೆಸ್‌ನವರು ಪ್ರತಿಭಟನೆ ಮಾಡುತ್ತಿದ್ದಾರೆ. ಈಗ ರಮೇಶ್‌ ಕುಮಾರ್‌ ಅವರ ಹೇಳಿಕೆಯಿಂದ ಹಗರಣ ನಡೆದಿರುವುದು ಸ್ಪಷ್ಟವಾಗಿದೆ. ಆದ್ದರಿಂದ ತನಿಖಾ ಏಜೆನ್ಸಿಗಳು ಕೂಡಲೇ ಇವರ ಹೇಳಿಕೆ ಆಧರಿಸಿ ಪ್ರಕರಣ ದಾಖಲಿಸಬೇಕು. ರಮೇಶ್‌ಕುಮಾರ್‌ ಅವರ ಮೇಲೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಇದರಲ್ಲಿ ಯಾರೆಲ್ಲ ಶಾಮೀಲಾಗಿದ್ದರೆ ಎಂಬುದು ಹೊರ ಬರಬೇಕು ಹಾಗೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸಚಿವರು ಆಗ್ರಹಿಸಿದರು.

ಹಿಂದೆ ಪೊಲೀಸ್‌ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ  ಬಿ ರಿಪೋರ್ಟ್‌ ಸಲ್ಲಿಸಿ ಕೆ.ಜೆ.ಜಾರ್ಜ್‌ ಅವರನ್ನು ಆರೋಪ ಮುಕ್ತಗೊಳಿಸಲಾಗಿತ್ತು. ಈಶ್ವರಪ್ಪ ಅವರ ತನಿಖೆ ಮಾಡಿದ ಸಂಸ್ಥೆಯೇ ಜಾರ್ಜ್‌ ಅವರ ತನಿಖೆಯನ್ನೂ ಮಾಡಿತ್ತು. ಇದನ್ನೂ ಕೂಡ ಕಾಂಗ್ರೆಸ್‌ ಪ್ರಶ್ನೆ ಮಾಡಲಿ. ಸರ್ಕಾರ ಏನೇ ಮಾಡಿದರೂ ಕಾಂಗ್ರೆಸ್‌ ವಿರೋಧಿಸುತ್ತದೆ ಎಂದರು.

ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಒಕ್ಕಲಿಗರ ವಿಶ್ವಾಸ ಕಳೆದುಕೊಂಡಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನೇ ಒಕ್ಕಲಿಗರು ಬೆಂಬಲಿಸಲಿದ್ದಾರೆ. ಆದರೆ ಬಿಜೆಪಿ ಜಾತಿ ಆಧಾರಿತ ಪಕ್ಷವಲ್ಲ. ಸಮಾಜದ ಎಲ್ಲಾ ಜನವರ್ಗಗಳ ಕಲ್ಯಾಣವನ್ನು ಬಿಜೆಪಿ ಬಯಸುತ್ತದೆ. ಪರಿಶಿಷ್ಟ ಜಾತಿ ಹಾಗೂ ಪಂಗಡ, ಒಕ್ಕಲಿಗ, ಲಿಂಗಾಯಿತ, ಹಿಂದುಳಿದ ವರ್ಗ ಸೇರಿದಂತೆ ಎಲ್ಲರಿಗೂ ಬಿಜೆಪಿ ಅಭಿವೃದ್ಧಿಯ ಭರವಸೆ ನೀಡುತ್ತದೆ ಎಂದರು. 

ಕೋವಿಡ್‌ ಸಾಂಕ್ರಾಮಿಕ ಬಂದ ಸಮಯದಲ್ಲಿ ಕೇಂದ್ರ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ನೀಡಲು ಆರಂಭಿಸಿದೆ. ಇದು ಜನಪರವಾಗಿರಬೇಕು ಹಾಗೂ ಬಡವರಿಗೆ ತಲುಪಬೇಕು. ಹೆಚ್ಚು ಅಕ್ಕಿ ಬಂದಾಗ ಅದನ್ನು ಕೆಲವರು ಮಾರಾಟ ಮಾಡಿರುವುದು ಕಂಡುಬಂದಿದೆ. ಬಡವರಿಗೆ ಕೊಡುವ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸುಪ್ರೀಂ ನೋಟಿಸ್

Next Post

ಮಾಜಿ ಸಿಎಂ ಸಿದ್ದರಾಮಯ್ಯಗೆ ಡಾ. ಬಿ. ಆರ್. ಅಂಬೇಡ್ಕರ್ ಪ್ರಶಸ್ತಿ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧ : ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯಗೆ ಡಾ. ಬಿ. ಆರ್. ಅಂಬೇಡ್ಕರ್ ಪ್ರಶಸ್ತಿ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada