• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮಾಧ್ಯಮಗಳು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಿ ಕೋರ್ಟ್‌ ಸ್ಥಾನವನ್ನು ಆವರಿಸಿಕೊಂಡಿದೆ : ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ

ಪ್ರತಿಧ್ವನಿ by ಪ್ರತಿಧ್ವನಿ
July 23, 2022
in ದೇಶ
0
ಸಂವಿಧಾನಕ್ಕೆ ಮಾತ್ರ ನ್ಯಾಯಾಂಗ ಉತ್ತರ : ರಾಜಕೀಯ ಪಕ್ಷಗಳ ವಿರುದ್ಧ ಸಿಜೆಐ ರಮಣ ವಾಗ್ದಾಳಿ
Share on WhatsAppShare on FacebookShare on Telegram

ಮಾಧ್ಯಮಗಳು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಿ ಕೋರ್ಟ್‌ ಸ್ಥಾನವನ್ನು ಆವರಿಸಿಕೊಂಡಿದೆ. ಕಾಂಗರೂ ಕೋರ್ಟ್​​ನಂತೆ ಇವು ತಮಗಿಷ್ಟ ಬಂದಂತೆ ಪ್ರಚಾರ ಮಾಡುತ್ತಾ, ತಮ್ಮ ಅಜೆಂಡಾವನ್ನು ಜನರ ಮೇಲೆ ಹೇರುತ್ತಾ ಕಟ್ಟೆ ಪಂಚಾಯಿತಿ ನಡೆಸಿ ಭಾರತದ ಪ್ರಜಾಪ್ರಭುತ್ವ ಅಪಾಯವನ್ನುಂಟು ಮಾಡುತ್ತಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಹೇಳಿದ್ದಾರೆ.

ADVERTISEMENT

ರಾಂಚಿಯಲ್ಲಿ ನಡೆದ ಶೈಕ್ಷಣಿಕ ಸಮಾರಂಭದಲ್ಲಿ ಉಪನ್ಯಾಸ ಮಾಡಿದ ರಮಣ ಮಾತನಾಡಿ, ಮಾಧ್ಯಮಗಳು ಕಾಂಗರೂ ನ್ಯಾಯಾಲಯಗಳನ್ನು ನಡೆಸುವುದನ್ನು ನಾವು ನೋಡುತ್ತೇವೆ. ಕೆಲವೊಮ್ಮೆ ಅನುಭವಿ ನ್ಯಾಯಾಧೀಶರು ಸಹ ಸಮಸ್ಯೆಗಳ ಬಗ್ಗೆ ತೀರ್ಮಾನ ನೀಡಲು ಕಷ್ಟವಾಗುತ್ತದೆ. ಆದರೆ, ಮಾಧ್ಯಮಗಳಿಗೆ ಆ ಹಕ್ಕು ಇಲ್ಲದಿದ್ದರೂ ಹಲವು ಪ್ರಕರಣಗಳಲ್ಲಿ ಕೋರ್ಟ್​ಗಿಂತಲೂ ಮೊದಲೇ ತೀರ್ಪು ನೀಡುವುದನ್ನು ನಾವು ನೋಡಬಹುದು ಎಂದು ಅವರು ಹೇಳಿದ್ದಾರೆ.

ಮುಂದುವರೆದು, ಮಾಧ್ಯಮಗಳು ತನ್ನ ಜವಾಬ್ದಾರಿಯನ್ನು ಉಲ್ಲಂಘಿಸಿ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ದೂಡುತ್ತಿದೆ. ” ತಮಗಿಷ್ಟ ಬಂದಂತೆ ಪ್ರಚಾರ ಮಾಡುತ್ತಾ, ತಮ್ಮ ಅಜೆಂಡಾವನ್ನು ಜನರ ಮೇಲೆ ಹೇರಿ ಜನರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿವೆ, ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತವೆ ಮತ್ತು ವ್ಯವಸ್ಥೆಗೆ ಹಾನಿ ಮಾಡುತ್ತಿವೆ” ಎಂದು ಅವರು ಹೇಳಿದರು.

“ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಸಂಘಟಿತ ಪ್ರಚಾರ ನಡೆಯುತ್ತಿದೆ. ಅದಕ್ಕೆ ನ್ಯಾಯಮೂರ್ತಿಗಳು ತಕ್ಷಣವೇ ಪ್ರತಿಕ್ರಿಯಿಸುವುದಿಲ್ಲ. ದಯವಿಟ್ಟು ಅದನ್ನು ದೌರ್ಬಲ್ಯ – ಅಸಹಾಯಕತೆ ಎಂದು ತಪ್ಪಾಗಿ ಗ್ರಹಿಸಬೇಡಿ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದಾರೆ.

ಮುದ್ರಣ ಮಾಧ್ಯಮವು ಇನ್ನೂ ಸ್ವಲ್ಪ ಮಟ್ಟಿಗೆ ಹೊಣೆಗಾರಿಕೆಯನ್ನು ಹೊಂದಿದೆ ಎಂಬುದನ್ನು ಗಮನಿಸಿದ ಮುಖ್ಯ ನ್ಯಾಯಾಧೀಶರು, ವಿದ್ಯುನ್ಮಾನ ಮತ್ತು ಸಾಮಾಜಿಕ ಮಾಧ್ಯಮಗಳು ಜವಾಬ್ದಾರಿಯುತವಾಗಿ ವರ್ತಿಸುವಂತೆ ನಾನು ಒತ್ತಾಯಿಸುತ್ತೇನೆ. ಎಲೆಕ್ಟ್ರಾನಿಕ್ ಮಾಧ್ಯಮವು ಜನರಿಗೆ ಶಿಕ್ಷಣ ನೀಡಲು ಮತ್ತು ರಾಷ್ಟ್ರಕ್ಕೆ ಶಕ್ತಿ ತುಂಬಲು ತಮ್ಮ ಧ್ವನಿಯನ್ನು ಬಳಸಿಕೊಳ್ಳಬೇಕು. ಅದು ಬಿಟ್ಟು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಕೆಲಸ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಭಾರತೀಯ ಜನತಾ ಪಕ್ಷದ ವಕ್ತಾರ ನೂಪುರ್ ಶರ್ಮಾ ಅವರನ್ನು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರೊಂದಿಗೆ ಪಾರ್ದಿವಾಲಾ ಅವರು ಪೀಠ ತೀವ್ರವಾಗಿ ಖಂಡಿಸಿತ್ತು. ಆಕೆಯ ಹೇಳಿಕೆಯು ದೇಶದ ಹಲವಾರು ಭಾಗಗಳಲ್ಲಿ ಹಿಂಸಾಚಾರ ಮತ್ತು ಅಶಾಂತಿಗೆ ಕಾರಣವಾಗಿದೆ ಇದಕ್ಕೆ ಕ್ಷಮೆಯಾಚಿಸಬೇಕು ಎಂದು ಮೌಖಿಕವಾಗಿ ಆದೇಶಿಸಿತ್ತು.

ಸುಪ್ರೀಂ ಕೋರ್ಟ್‌ನ ಮೌಖಿಕ ಅವಲೋಕನಗಳು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಖಂಡಿಸಿ ಅನೇಕರು ಪೋಸ್ಟ್‌ ಹಾಕಿದ್ದರು. ನಂತರ ಮೀಡಿಯಾಗಳು ಅದನ್ನು ವರದಿ ಮಾಡಿದ್ದವು. ಶರ್ಮಾ ವಿರುದ್ಧ ಮಾಡಿರುವ ಅವಲೋಕನಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಮನವಿಯನ್ನೂ ಸಲ್ಲಿಸಲಾಗಿತ್ತು.

Tags: BJPCongress PartyCovid 19ಕೋರ್ಟ್‌ಕೋವಿಡ್-19ನರೇಂದ್ರ ಮೋದಿಪ್ರಜಾಪ್ರಭುತ್ವಬಿಜೆಪಿ
Previous Post

78 ವರ್ಷದಲ್ಲಿ ದೇಶದ ಜನಸಂಖ್ಯೆ 41 ಕೋಟಿ ಕುಸಿತ: ವರದಿ

Next Post

ವಿಜಯೇಂದ್ರ ಸ್ಪರ್ಧೆ ಹೈಕಮಾಂಡ್‌ ನಿರ್ಧಾರ: ಯಡಿಯೂರಪ್ಪ ಯುಟರ್ನ್‌!

Related Posts

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
0

ದುಬೈ ಏರ್​​ ಶೋ ಕಾರ್ಯಕ್ರಮದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. https://youtu.be/_-ETZQKXvgY?si=HJdmeaIp6arDY5i5 ತೇಜಸ್ ಯುದ್ಧ ವಿಮಾನ ಏರೋಬ್ಯಾಟಿಕ್ಸ್ ಪ್ರದರ್ಶಿಸಿ ನಂತರ ಇದ್ದಕ್ಕಿದ್ದಂತೆ...

Read moreDetails

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

November 20, 2025

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025
Next Post
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿಎಸ್ ಯಡಿಯೂರಪ್ಪ ಪತ್ರ

ವಿಜಯೇಂದ್ರ ಸ್ಪರ್ಧೆ ಹೈಕಮಾಂಡ್‌ ನಿರ್ಧಾರ: ಯಡಿಯೂರಪ್ಪ ಯುಟರ್ನ್‌!

Please login to join discussion

Recent News

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..!

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

ʼಕಾಂಗ್ರೆಸ್ ಸರ್ಕಾರ ಹೋಳು..ಜನರಿಗೆ ಗೋಳು..ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada