ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮಾದರಿಯ ಆಡಳಿತ ಜಾರಿ ಮಾಡಲು ನಮ್ಮ ರಾಜ್ಯ ಏನು ಉತ್ತರ ಪ್ರದೇಶ ಮತ್ತು ಬಿಹಾರ ಮಾದರಿ ಹಾಳಾಗಿದೆಯಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಗತ್ಯ ಬಿದ್ದರೆ ಯೋಗಿ ಮಾದರಿ ಆಡಳಿತ ಮಾಡಬೇಕಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿಕೆಗೆ ಏನರ್ಥ? ಪರಿಸ್ಥಿತಿಯನ್ನು ನಿಯಂತ್ರಿಸಲು ಆಗದೇ ಇರುವ ಬೊಮ್ಮಾಯಿ ರಾಜ್ಯ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಎಂದರು.
ರಾಜ್ಯದಲ್ಲಿ ಸರಣಿ ಹತ್ಯೆಗಳು ಆಗುತ್ತಿವೆ. ಸರ್ಕಾರದಿಂದ ಯಾರನ್ನೂ ರಕ್ಷಣೆ ಮಾಡಲು ಆಗುತ್ತಿಲ್ಲ. ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆಗಷ್ಟೇ ಸೀಮಿತವಾಗಿದ್ದಾರೆ. ಬಸವರಾಜ ಬೊಮ್ಮಾಯಿ ದುರ್ಬಲ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದಲ್ಲಿ ಸಂಫೂರ್ಣವಾಗಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಸರ್ಕಾರದಿಂದ ಯಾರನ್ನೂ ರಕ್ಷಣೆ ಮಾಡಲು ಆಗುತ್ತಿಲ್ಲ . ಇಂಟಲಿಜೆನ್ಸ್ ಕೂಡ ಸಿಎಂ ಬಳಿಯೇ ಇದೆ. ಆದರೇ ರಾಜ್ಯದಲ್ಲಿ ಸರಣಿ ಹತ್ಯೆಗಳು ಆಗುತ್ತಿವೆ. ಇದರ ಹೊಣೆಯನ್ನ ಸಿಎಂ ಬೊಮ್ಮಾಯಿ ಹೊರಬೇಕು ಎಂದು ಅವರು ಆಗ್ರಹಿಸಿದರು.
ಆರಗ ಜ್ಞಾನೇಂದ್ರ ಸಚಿವರಾಗಿ ಮಂದುವರೆಯಲು ನೈತಿಕತೆ ಇಲ್ಲ. ಸರ್ಕಾರ ಕೂಡಲೇ ಕೊಲೆ ಆರೋಪಿಗಳನ್ನ ಪತ್ತೆ ಹಚ್ಚಬೇಕು. ಫಾಜಿಲ್, ಪ್ರವೀಣ್ ಯಾರೇ ಆದರೂ ಎಲ್ಲವೂ ಜೀವಗಳೇ. ಮತಾಂಧ ಶಕ್ತಿಗಳು ಯಾರೇ ಆಗಲಿ ಕಠಿಣ ಕ್ರಮ ಕೈಗೊಳ್ಳಲಿ ಎಂದು ಸಿದ್ಧರಾಮಯ್ಯ ಆಗ್ರಹಿಸಿದರು.






