ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿ ಕ್ರಮ ಜಾರಿಗೆ ಚಿಂತನೆ ನಡೆಸಲಾಗಿದೆ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಶಾಸಕ ಕೃಷ್ಣ ಭೈರೇಗೌಡ ಕಿಡಿಕಾರಿದ್ದಾರೆ.
ಶುಕ್ರವಾರ ಸರಣಿ ಟ್ವೀಟ್ ಮಾಡಿ ಸಿಎಂ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ಮೊದಲು ರಾಜ್ಯದಲ್ಲಿ ಉದ್ಯೋಗಗಳನ್ನು ಸೃಷ್ಟಿಸಿ ದ್ವೇಷವನ್ನಲ್ಲ. ಕರ್ನಾಟಕದಂತಹ ಆದಾಯ ತರುವ ರಾಜ್ಯಗಳು ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯಗಳನ್ನು ಸುಭಿಕ್ಷವಾಗಿರುವಂತೆ ನೋಡಿಕೊಳ್ಳುತ್ತಿದೆ ಎಂದರು.
ದ್ಷೇಷ ರಾಜಕಾರಣದಿಂದಾಗಿ ಉತ್ತರಪ್ರದೇಶ ಹಿಂದುಳಿದಿದ್ದು ಬೇರೆ ರಾಜ್ಯಗಳ ಮೇಲೆ ಹೆಚ್ಚು ಅವಲಂಬನೆಯಾಗುವಂತಾಗಿದೆ. ಕರ್ನಾಟಕ ಶಾಂತಿ ಹಾಗೂ ಪ್ರಗತಿ ಕಾಣುತ್ತಿರುವ ರಾಜ್ಯವಾಗಿರುವ ಕಾರಣ ತೆರಿಗೆ ಪಾವತಿದಾರರಲ್ಲಿ ದೇಶಕ್ಕೆ 2ನೇ ರಾಜ್ಯವಾಗಿದೆ ಎಂದರು.
ರಾಜ್ಯ ಬಿಜೆಪಿ ಸರ್ಕಾರವು ಶಾಂತಿ ಸುವ್ಯವಸ್ಥೆಯನ್ನು ಕದಡುವ ಪ್ರಯತ್ನ ಮಾಡುತ್ತಿದೆ. ಉತ್ತರಪ್ರದೇಶದಿಂದ ದ್ವೇಷ ರಾಜಕಾರಣವನ್ನ ಅಮದು ಮಾಡಿಕೊಳ್ಳುತ್ತಿದೆ. ನಮ್ಮ ನಾಡಿನ ಪರಂಪರೆ ಹಾಗೂ ಸಾಧನೆಗಳ ಬಗ್ಗೆ ನಮ್ಮಗೆ ಹೆಮ್ಮೆ ಶೇ.60ರಷ್ಟು ಬೆಲೆ ಏರಿಕೆ, 40% ಭ್ರಷ್ಟಾಚಾರವನ್ನು ಮೊದಲು ನಿಲ್ಲಿಸಿ ಉದ್ಯೋಗಗಳನ್ನು ಸೃಷ್ಟಿಸಿ ದ್ವೇಷವನ್ನಲ್ಲ ಎಂದು ಕಿಡಿಕಾರಿದ್ದಾರೆ.






