ಮುಂಬೈನಲ್ಲಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಮನೆ ಮೇಲೆ ಇಡಿ ದಾಳಿ ಮಾಡಿ ಶೋಧ ಮತ್ತು ವಿಚಾರಣೆ ನಡೆಸಿದ ನಂತರ ಭಾನುವಾರ ಸಂಜಯ್ ರಾವತ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಬೆಳಿಗ್ಗೆ 7 ಗಂಟೆಗೆ, ತನಿಖಾ ಸಂಸ್ಥೆ ತಂಡವು ಸಿಐಎಸ್ಎಫ್ ಅಧಿಕಾರಿಗಳೊಂದಿಗೆ ಮುಂಬೈನ ಪೂರ್ವ ಉಪನಗರ ಬಂಡಪ್ನಲ್ಲಿರುವ ರಾವುತ್ ಅವರ ಮನೆ ಮೇಲೆ ದಾಳಿ ಮಾಡಿ ಶೋಧಿಸಿತ್ತು. 9 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿ ನಂತರ ಅವರನ್ನು ಬಂಧಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನೆ ನಾಯಕರಿಗೆ ಎರಡು ಬಾರಿ ವಿಚಾರಣೆಗೆ ಸಮನ್ಸ್ ನೀಡಿದ್ದರು ವಿಚಾರಣೆಗೆ ಹಾಜರಾಗಿರಲಿಲ್ಲ.