ಜಾರ್ಖಂಡ್ನ ಮೂವರು ಕಾಂಗ್ರೆಸ್ ಶಾಸಕರು ಹಣದ ರಾಶಿಯೊಂದಿಗೆ ಪಶ್ಚಿಮ ಬಂಗಾಳದ ಹೌರಾದಲ್ಲಿ ಸೆರೆ ಹಿಡಯಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಸುದ್ದಿಗೋಷ್ಠಿಉನ್ನುದ್ದೇಶಿಸಿ ಮಾತನಾಡಿದ ಜಾರ್ಖಂಡ್ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ ಸೋನಿಯ ಗಾಂಧಿ ಆದೇಶದ ಮೇರೆಗೆ ಮೂವರು ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲಾಗಿದ್ದು ಜಾರ್ಖಂಡ್ನಲ್ಲಿರುವ ಹಾಲಿ ಕಾಂಗ್ರೆಸ್-ಜೆಎಂಎಂ ಮೈತ್ರಿ ಸರ್ಕಾರವನ್ನು ಉರುಳಿಸುವುದಕ್ಕಾಗಿ ಬಿಜೆಪಿ ಈ ರೀತಿ ಮಾಡುತ್ತಿದೆ ಪ್ರತಿ ಶಾಸಕನಿಗೂ ಬಿಜೆಪಿ 10 ಕೋಟಿ ರೂಪಾಯಿ ಹಾಗೂ ಸಚಿವ ಸ್ಥಾನದ ಆಮಿಷ ಒಡ್ಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಶನಿವಾರ ಪಶ್ಚಿಮ ಬಂಗಾಳದ ಹೌರಾದಲ್ಲಿ ಪೊಲೀಸರಿಗೆ ದೊರೆತಿರುವ ಕಚಿತ ಮಾಹಿತ ಮೇರೆಗೆ ಶಾಸಕರ ಕಾರನ್ನು ತಡೆದು ತಪಾಸಣೆ ಮಾಡಿದ ಸಮಯದಲ್ಲಿ ಹಣದ ರಾಶಿ ದೊರೆತಿದೆ.
ತಮ್ಮ ಪಕ್ಷದೊಳಗೆ ನಡೆಯುತ್ತಿರುವ ಭ್ರಷ್ಟಾಚಾರವನ್ನಮುಚ್ಚಿಹಾಕುವ ಸಲುವಾಗಿ ಕಾಂಗ್ರೆಸ್ ಬಿಜೆಪಿಯ ಮಾನ ಹಾನಿ ಮಾಡುತ್ತಿದೆ ಎಂದು ಬಿಜೆಪಿ ಕಿಡಿಕಾರಿದೆ.