ದೇಶಕ್ಕೆ ಸ್ವಾತಂತ್ರ್ಯ ಬಂದರೂ ಹಿಂದೂ ಸಮಾಜಕ್ಕಾಗಿ ಹೋರಾಡುವ ನನ್ನಂತಹ ವ್ಯಕ್ತಿಗೆ ರಾಜ್ಯದ 21 ಜಿಲ್ಲೆಗಳಲ್ಲಿ ನಿರ್ಬಂಧ ಹೇರಿದ್ದಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬೇಸರ ವ್ಯಕ್ತಪಡಿಸಿದ್ದಾರೆ.
ಶಿರಸಿ ನಗರದ ಅಂಜನಾದ್ರಿ ದೇವಸ್ಥಾನದಲ್ಲಿ ಭಾನುವಾರ ಮಾತನಾಡಿದ ಮುತಾಲಿಕ್, ಬಿಜೆಪಿ ಅಧಿಕಾರದಲ್ಲಿರುವ ಗೋವಾಕ್ಕೆ ವಿದೇಶಿಗರು ಬರುತ್ತಾರೆ ಆದರೆ ಎಂಟು ವರ್ಷದಿಂದ ನನಗೆ ಪ್ರವೇಶ ನೀಡುತ್ತಿಲ್ಲ. ವೀರ ಸಾವರ್ಕರ್ ಬಗ್ಗೆ ಅರಿಯದ ಮುಸ್ಲಿಂ ಗೂಂಡಾಗಳು ಅವರನ್ನು ಅವಮಾನಿಸಿದ್ದಾರೆ. ಅಂತಹವರನ್ನು ಹುಡುಕಿ ಗುಂಡೇಟು ಹಾಕಬೇಕು ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದರು. ಹಿಂದೂ ಸಂಘಟನೆಗಳು ಒಗ್ಗಟ್ಟಾಗಿ ಹೋಗಬೇಕು. ಬಿಜೆಪಿ ನಂಬಿ ಕೂತರೆ ಪ್ರಯೋಜನವಿಲ್ಲ. ಕಠಿಣ ಕ್ರಮ ಎಂಬ ಸರ್ಕಾರದ ಬೊಗಳೆ ನಂಬಲು ಜನರು ತಯಾರಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ನಾಯಕರು ತುಷ್ಟೀಕರಣದ ಸಲುವಾಗಿ ದೇಶದ್ರೋಹಿಗಳಿಗೂ ದೇಶಭಕ್ತರ ಪಟ್ಟ ಕಟ್ಟಿದ್ದಾರೆ. ಈ ಕಾರಣಕ್ಕಾಗಿಯೇ ಟಿಪ್ಪುನಂತಹ ಹಿಂದೂ ವಿರೋಧಿಯನ್ನು ಕಾಂಗ್ರೆಸ್ ನಾಯಕರು ಮೆರೆಸಿದ್ದಾರೆ. ಹಿಂದೂಗಳು ತಮ್ಮ ರಕ್ಷಣೆಗೆ ಮನೆಯಲ್ಲಿತಲವಾರ್ ಇಟ್ಟುಕೊಳ್ಳಬೇಕು. ಕ್ಷತ್ರೀಯ ಗುಣ ಬೆಳೆಸಿಕೊಳ್ಳಬೇಕು ಎಂದಿದ್ದಾರೆ.