• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

12 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್; ಇಲ್ಲಿವೆ ಪ್ರಮುಖ ಅಂಶಗಳು

ಪ್ರತಿಧ್ವನಿ by ಪ್ರತಿಧ್ವನಿ
August 20, 2022
in ದೇಶ, ರಾಜಕೀಯ
0
12 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್; ಇಲ್ಲಿವೆ ಪ್ರಮುಖ ಅಂಶಗಳು
Share on WhatsAppShare on FacebookShare on Telegram

ನೂತನ ಅಬಕಾರಿ ನೀತಿಯಲ್ಲಿನ ವ್ಯಾಪಕ ಭ್ರಷ್ಟಾಚಾರ ಸಂಬಂಧ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಂತರ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ದೆಹಲಿ ಲೆಫ್ಟಿನೆಂಟ್ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಆದೇಶ ಹೊರಡಿಸಿದ್ದಾರೆ.

ADVERTISEMENT

ಇಲ್ಲಿವೆ ಪ್ರಮುಖ ಅಂಶಗಳು

1) ನೂತನ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ನಂತರ ಪ್ರಥಮ ಮಾಹಿತಿ ವರದಿ (FIR)ನಲ್ಲಿ ನೀತಿಯ ಉಲ್ಲಂಘನೆಗಳ ಕುರಿತು ಆರೋಪಿತರನ್ನು ಹೆಸರಿಸಿದ ಕೆಲವೇ ಘಂಟೆಗಳ ಒಳಗಾಗಿ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.

2) ಸದ್ಯ FIRನಲ್ಲಿ ಹೆಸರಿಸಲಾಗಿರುವ 15 ಮಂದಿ ಆರೋಪಿತರ ಪೈಕಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಮೊದಲಿಗರೆಂದು(A1) ಎಂದು ಹೆಸರಿಸಲಾಗಿದೆ. ಸದ್ಯ ಸಿಬಿಐ ಸಲ್ಲಿಸಿರುವ 11 ಪುಟಗಳ ಚಾರ್ಜ್ ಶೀಟ್ನಲ್ಲಿ ಭ್ರಷ್ಟಾಚಾರ ಸೇರಿದಂತೆ ಅನೇಕ ಪ್ರಕರಣಗಳನ್ನು ದಾಖಲಿಸಲಾಗಿದೆ.

3) ದೆಹಲಿಯಲ್ಲಿರುವ ಮನೀಶ್ ಸಿಸೋಡಿಯಾ ನಿವಾಸ ಸೇರಿದಂತೆ ದೇಶದ 31 ಕಡೆ ಅವರಿಗೆ ಸೇರಿದ ಆಸ್ತಿಗಳ ಮೇಲೆ ದಾಳಿ ಮಾಡಲಾಗಿತ್ತು. ಒಟ್ಟು 7 ಘಂಟೆಗಳ ಕಾರ್ಯಾಚರಣೆಯ ನಂತರ ಸಿಸೋಡಿಯಾಗೆ ಸೇರಿದ್ದ ಕಂಪ್ಯೂಟರ್ ಹಾಘು ಮೊಬೈಲ್ ಪೋನ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

4) ನವೆಂಬರ್ನಲ್ಲಿ ಜಾರಿಗೆ ತಂದ ನೂತನ ಅಬಕಾರಿ ನೀತಿಯಲ್ಲಿ ಮಧ್ಯದಂಗಡಿಗಳ ಪರವಾನಗಿಯನ್ನು ಖಾಸಗಿಯವರಿಗೆ ಹಸ್ತಾಂತರಿಸಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ನೀತಿಯ ವಿರುದ್ದ ವ್ಯಾಪಕ ಆರೋಪ ಕೇಳಿ ಬಂದ ನಂತರ ಜುಕೈ 30ರಂದು ನೀತಿಯನ್ನು ದೆಹಲಿ ಸರ್ಕಾರ ಹಿಂಪಡೆಸಿತ್ತು.

5) ಸಿಬಿಐ ಪ್ರಕಾರ ದೆಹಲಿಯಲ್ಲಿ ನೂತನ ಅಬಕಾರಿ ನೀತಿಯ ಅಡಿಯಲ್ಲಿ ವ್ಯಕ್ತಿಯೊಬ್ಬ ಲೆಫ್ಟಿನೆಂಟ್ ಗವರ್ನರ್ ಅನುಮತಿಯಿಲ್ಲದೆ ಮಧ್ಯ ಮಾರಾಟ ಮಾಡಬಹುದು ಎಂದು ಸಿಬಿಐ ತನ್ನ ಪ್ರಾಥಮಿಕ ವರದಿಯಲ್ಲಿ ತಿಳಿಸಿದೆ.

6) ಸಿಬಿಐ ಸಲ್ಲಿಸಿರುವ FIRನಲ್ಲಿ ವ್ಯಕ್ತಿಯೋರ್ವ ಪರವಾನಗಿ ಪಡೆಯಲು ಮನೀಶ್ ಸಿಸೋಡಿಯಾ ಸೇರಿದ್ದ ಕಂಪನಿಗೆ 1 ಕೋಟಿ ಕೊಟ್ಟಿರುವುದಾಗಿ ಆರೋಪಿಸಿದ್ದರು. ಮಧ್ಯ ನೀತಿ ಜಾರಿ ನಂತರ ಕಂಪನಿಗಳು ಹಾಗೂ ಮಧ್ಯವರ್ತಿಗಳು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರವು ಎಂದು ಸಿಬಿಐ ತನ್ನ ದೋಷಾರೋಪ ಪಟ್ಟಿಯಲ್ಲಿ ತಿಳಿಸಿದೆ.

7) ಮುಖ್ಯ ಕಾರ್ಯದರ್ಶಿ ನೀಡಿದ ವರದಿ ಆಧರಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿದ್ದರು.

8) ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ದೆಹಲಿ ಸರ್ಕಾರದ ನೂತನ ಅಬಕಾರಿ ನೀತಿಯನ್ನು ಏಕಪಕ್ಷೀಯ ನಿರ್ಧಾರ ಎಂದು ದೂಷಿಸಿದ್ದರು. ಇದು ಸರ್ಕಾರ ಹಾಗು ಜನರಿಗಿಂತ ಉನ್ನತ ಮಟ್ಟದ ವ್ಯಕ್ತಿಗಳಿಗೆ ಲಾಭದಾಯಕವಾಗಿ ಎಂದು ಆರೋಪಿಸಿದ್ದರು.

9) ಆರಂಭದಲ್ಲಿ ಆರೋಪಗಳನ್ನು ತಳ್ಳಿ ಹಾಕಿದ ಮನೀಶ್ ಸಿಸೋಡಿಯಾ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಕಾಯ್ದೆ ಜಾರಿಯ ಬಗ್ಗೆ ಸಮರ್ಥಿಸಿಕೊಂಡಿದ್ದರು.

10) ಇತ್ತ ಎಎಪಿಯು ಕೇಂದ್ರ ಸರ್ಕಾರವು ದೆಹಲಿ ಸರ್ಕಾರದ ಜನಪ್ರಿಯ ಯೋಜನೆಗಳನ್ನು ಸಹಿಸಲಾರದೆ ಈ ರೀತಿ ಮಾಡುತ್ತಿದೆ ಎಂದು ಕಿಡಿಕಾರಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಇಂದು ಭಾರತ – ಜಿಂಬಾಬ್ವೆ 2ನೇ ಏಕದಿನ ಪಂದ್ಯ : ಸರಣಿ ವಶಕ್ಕೆ ರಾಹುಲ್ ಪಡೆ ಸಜ್ಜು!

Next Post

ಮೈಸೂರಿನಿಂದ ಮಡಿಕೇರಿಗೆ ಪಾದಯಾತ್ರೆಗೆ ಕಾಂಗ್ರೆಸ್‌ ಸಿದ್ದತೆ

Related Posts

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!
Top Story

KPSC ಆಯ್ತು ಈಗ KEAದಲ್ಲೂ ಅಕ್ರಮದ ವಾಸನೆ : ಸಾಮ್ರಾಟ್‌ ಅಶೋಕ್‌ ಸಿಡಿಸಿದ್ರು ಹೊಸ ಬಾಂಬ್‌..!

by ಪ್ರತಿಧ್ವನಿ
May 17, 2026
0

ಬೆಂಗಳೂರು : ರಾಜ್ಯ ಸರ್ಕಾರದ ನೇಮಕಾತಿಗಳಲ್ಲಿ ಅಕ್ರಮಗಳು ನಡೆಯುತ್ತಿವೆ. ಇದರಿಂದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಭಾರಿ ಅನ್ಯಾಯವಾಗುತ್ತಿದೆ ಎಂಬ ಆರೋಪಗಳು ಕೆಪಿಎಸ್‌ಸಿ ವಿರುದ್ಧ ವ್ಯಕ್ತವಾಗುತ್ತಿವೆ. ಆದರೆ ಇದೀಗ ರಾಜ್ಯದ...

Read moreDetails
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
Next Post
ಮೈಸೂರಿನಿಂದ ಮಡಿಕೇರಿಗೆ ಪಾದಯಾತ್ರೆಗೆ ಕಾಂಗ್ರೆಸ್‌ ಸಿದ್ದತೆ

ಮೈಸೂರಿನಿಂದ ಮಡಿಕೇರಿಗೆ ಪಾದಯಾತ್ರೆಗೆ ಕಾಂಗ್ರೆಸ್‌ ಸಿದ್ದತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada