ಗುರುವಾರ ಮಡಿಕೇರಿಗೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿರುವ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದು ಈ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಕೆಸರೆರಚಾಟ ಜೋರಾಗಿಯೇ ನಡೆಯುತ್ತಿದೆ.
ಈ ಮಧ್ಯೆ ಕಾಂಗ್ರೆಸ್ ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದತೆ ನಡೆಸಿದ್ದು ಪಾದಯಾತ್ರೆಯ ರೂಪುರೇಷೆ ಕುರಿತು ಮೈಸೂರಿನಲ್ಲಿ ಸಿದ್ದತೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಇದೇ ತಿಂಗಳ ಆಗಸ್ಟ್ 26ರಂದು ಮಡಿಕೇರಿಯಲ್ಲಿ ಎಸ್ಪಿ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನ ಕಾಂಗ್ರೆಸ್ ಹಮ್ಮಿಕೊಂಡಿದೆ. ಇದಕ್ಕು ಮುನ್ನ ಬಳ್ಳಾರಿ ಚಲೋ ಪಾದಯಾತ್ರೆಯ ರೀತಿಯಲ್ಲಿ ಮೈಸೂರಿನಿಂದ ಮಡಿಕೇರಿ ಚಲೋ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲು ಸಿದ್ದರಾಮಯ್ಯ ಬಣ ಯೋಜನೆ ರೂಪಿಸಿದೆ ಎಂದು ವರದಿಯಾಗಿದೆ.
ನಮ್ಮ ನಡಿಗೆ ಮಡಿಕೇರಿ ಕಡೆಗೆ ಎಂಬ ಶೀರ್ಷಿಕೆಯಡಿಯಲ್ಲಿ ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ದ ರಣಕಹಳೆ ಊದಲು ಕೈ ಪಡೆ ಸಜ್ಜಾಗಿದೆ. ಈ ಮೂಲಕ ತಮ್ಮ ವರ್ಚಸ್ಸನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲಿರುವ ಸಿದ್ದರಾಮಯ್ಯ.

ರಾಜ್ಯ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲೇ ಆಡಳಿತರೂಢ ಬಿಜೆಪಿ ಸರ್ಕಾರದಿಂದ ಒಂದರ ಮೇಲ್ಲೊಂದು ಎಡವಟ್ಟು. ಮೊಟ್ಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಭ ಪಡೆಯಲು ಕಾಂಗ್ರೆಸ್ ಯತ್ನ.
ಸಿದ್ದರಾಮಯ್ಯ ಅಮೃತ ಮಹೋತ್ಸವದ ನಂತರ ಕಾಂಗ್ರೆಸ್ ನಾಯಕರ ಒಗ್ಟ್ಟು ಪ್ರದರ್ಶನಕ್ಕೆ ಮಡಿಕೇರಿ ಚಲೋಗೆ ಅನುವು ಮಾಡಿಕೊಟ್ಟ ಬಿಜೆಪಿ.
ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹಾಗೂ ಯತೀಂದ್ರ ಶ=ಸಿದ್ದರಾಮಯ್ಯ ನೇತೃತ್ವದಲ್ಲಿ ಕಾರ್ಯಕ್ರಮದ ರೂಪುರೇಷೆ ಸಿದ್ದಪಡಿಸಲಾಗುತ್ತಿದೆ.












