• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿಯಲ್ಲಿ ಎಸ್‌ಕೆಎಂ ಕಿಸಾನ್ ಮಹಾಪಂಚಾಯತ್ : ಮತ್ತೆ ಚಳುವಳಿಗೆ ಸಿದ್ದರಾದ ರೈತರು!

ಪ್ರತಿಧ್ವನಿ by ಪ್ರತಿಧ್ವನಿ
August 22, 2022
in ದೇಶ
0
ದೆಹಲಿಯಲ್ಲಿ ಎಸ್‌ಕೆಎಂ ಕಿಸಾನ್ ಮಹಾಪಂಚಾಯತ್ : ಮತ್ತೆ ಚಳುವಳಿಗೆ ಸಿದ್ದರಾದ ರೈತರು!
Share on WhatsAppShare on FacebookShare on Telegram

ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ವಿರುದ್ಧ ಮತ್ತು ರೈತರ ಭೆಟಿಕೆಯನ್ನು ಈಡೇರಿಸದ ಕಾರಣ ಪ್ರತಿಭಟಿಸಲು ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾ ನೇತೃತ್ವದಲ್ಲಿ ಸೋಮವಾರ ನವದೆಹಲಿಯ ಜಂತರ್ ಮಂತರ್‌ನಲ್ಲಿ ‘ಮಹಾಪಂಚಾಯತ್’ ನಡೆಯುತ್ತಿದ್ದೆ. ವಿವಿಧ ರಾಜ್ಯಗಳಿಂದ ಸಾವಿರಾರು ರೈತರು ಪ್ರತಿಭಟನಾ ಸ್ಥಳಕ್ಕೆ ತಲುಪಿದ್ದಾರೆ. ದೆಹಲಿಯ ಗಡಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿದ್ದು, ಗಾಜಿಪುರ, ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಪೊಲೀಸರು ಬಿಗಿಭದ್ರತೆ ಕೈಗೊಂಡಿದ್ದಾರೆ.

ADVERTISEMENT

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ಸಾವಿರಾರು ರೈತರು ಪ್ರತಿಭಟನಾ ಸ್ಥಳಕ್ಕೆ ತಲುಪಿದ್ದಾರೆ. ಇದು ಒಂದು ದಿನದ ಕಾರ್ಯಕ್ರಮವಾಗಿದ್ದು ಸಂಪೂರ್ಣ ಶಾಂತಿ ಮತ್ತು ಶಿಸ್ತಿನಿಂದ ನಡೆಯಲಿದೆ. ಪಂಚಾಯತ್‌ನ ಸಮಯವು ಬೆಳಿಗ್ಗೆ 11 ರಿಂದ ಸಂಜೆ 4 ರವರೆಗೆ ಇರುತ್ತದೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಕೆಲವೆಡೆ ರೈತರನ್ನು ಜಂತರ್ ಮಂತರ್ ತಲುಪದಂತೆ ತಡೆಯಲಾಗುತ್ತಿದೆ ಎಂದು ಎಸ್‌ಕೆಎಂ ಮುಖಂಡರು ಆರೋಪಿಸಿದ್ದಾರೆ. ಆದರೆ, ದೆಹಲಿ ಪೊಲೀಸರು ರೈತರ ಆರೋಪಗಳನ್ನು ನಿರಾಕರಿಸಿದ್ದಾರೆ. ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಲು ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದರು. ‘ಪ್ರತಿಭಟನೆ ನಡೆಸಲು ಅನುಮತಿ ಕೇಳಲಾಗಿತ್ತು. ಆದರೆ ಜನಸಂದಣಿಯಿಂದಾಗಿ ಅವಕಾಶ ನೀಡಿ’ ಎಂದು ದೆಹಲಿಯ ಉಪ ಪೊಲೀಸ್ ಆಯುಕ್ತ ಅಮೃತ ಗುಗುಲೋತ್ ತಿಳಿಸಿದ್ದಾರೆ.

ಈ ಹಿಂದೆ ರೈತರ ಚಳವಳಿಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಮ್ಮ ಎಲ್ಲ ಬೇಡಿಕೆಗಳನ್ನು ಪರಿಗಣಿಸುವುದಾಗಿ ಭರವಸೆ ನೀಡಿತ್ತು. ಆದರೆ, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ನಮ್ಮ ಬೇಡಿಕೆಗಳ ಕುರಿತು ಮತ್ತೊಮ್ಮೆ ಚರ್ಚಿಸಲು ಮತ್ತು ಚಳವಳಿಯ ಭವಿಷ್ಯದ ಕಾರ್ಯತಂತ್ರವನ್ನು ರೂಪಿಸಲು ಇಲ್ಲಿಗೆ ಬಂದಿದ್ದೇವೆ ಎಂದು ಕೊಹರ್ ಹೇಳಿದ್ದಾರೆ.

ಕಿಸಾನ್ ಪಂಚಾಯತ್‌ನ ಬೇಡಿಕೆಗಳು ಹೀಗಿವೆ.

1. ಲಖೀಂಪುರ ಖೇರಿ “ಹತ್ಯಾಕಾಂಡ”ದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ರೈತರ ಕುಟುಂಬಗಳಿಗೆ ನ್ಯಾಯ ನೀಡಬೇಕು. ಕಳೆದ ಒಂಬತ್ತು ತಿಂಗಳಿನಿಂದ ಜೈಲಿನಲ್ಲಿರುವ ರೈತರ ಬಿಡುಗಡೆಯಾಗಬೇಕು. ಲಖೀಂಪುರ ಖೇರಿ ಹತ್ಯಾಕಾಂಡದ ಪ್ರಮುಖ ಅಪರಾಧಿ ಕೇಂದ್ರ ಸಚಿವ ಅಜಯ್ ಮಿಶ್ರಾ ತೇನಿ ಬಂಧಿಸಬೇಕು.

2. “C2+50% ಸೂತ್ರ” ದ ಸ್ವಾಮಿನಾಥನ್ ಆಯೋಗದ ವರದಿಯ ಪ್ರಕಾರ ಕನಿಷ್ಠ ಬೆಂಬಲ ಬೆಲೆ (MSP) ಖಾತರಿಪಡಿಸಬೇಕು. MSP ಯನ್ನು ಖಾತರಿಪಡಿಸಲು ಕಾನೂನನ್ನು ಮಾಡುವ ಭರವಸೆ ನೀಡಬೇಕು.

3. ದೇಶದ ಎಲ್ಲ ರೈತರನ್ನು ಋಣಮುಕ್ತರನ್ನಾಗಿ ಮಾಡಬೇಕು.

4. ವಿದ್ಯುತ್ ತಿದ್ದುಪಡಿ ಮಸೂದೆ 2022 ರದ್ದಾಗಬೇಕು.

5. ಕಬ್ಬಿನ ಬೆಂಬಲ ಬೆಲೆಯನ್ನು ಹೆಚ್ಚಿಸಬೇಕು ಮತ್ತು ಕಬ್ಬಿನ ಬಾಕಿ ಹಣವನ್ನು ಕೂಡಲೇ ಪಾವತಿಸಬೇಕು.

6. ಭಾರತವು WTO ದಿಂದ ಹೊರಬರಬೇಕು ಮತ್ತು ಎಲ್ಲಾ ಮುಕ್ತ ವ್ಯಾಪಾರ ಒಪ್ಪಂದಗಳನ್ನು ರದ್ದುಗೊಳಿಸಬೇಕು.

7. ರೈತರ ಚಳವಳಿ ಸಂದರ್ಭದಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು.

8. ಅಗ್ನಿಪಥ ಯೋಜನೆ ಹಿಂಪಡೆಯಬೇಕು. ಇನ್ನು, ದೆಹಲಿ-ಯುಪಿ ಗಡಿಯಲ್ಲಿರುವ ಗಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹನ ಕೆಲಸ: ಯತೀಂದ್ರ ಸಿದ್ದರಾಮಯ್ಯ ಕಿಡಿ

Next Post

ಭಾರತದ ರಾಜಕೀಯ ನಾಯಕನ ಹತ್ಯೆಗೆ ಸಂಚು: ರಷ್ಯಾದಲ್ಲಿ ಐಸಿಸ್ ಉಗ್ರನ ಬಂಧನ!

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ಜಮ್ಮು ಕಾಶ್ಮೀರದಲ್ಲಿ ಬ್ಯಾಂಕ್‌ ಮ್ಯಾನೇಜರ್‌ ಗುಂಡಿಕ್ಕಿ ಹತ್ಯೆ

ಭಾರತದ ರಾಜಕೀಯ ನಾಯಕನ ಹತ್ಯೆಗೆ ಸಂಚು: ರಷ್ಯಾದಲ್ಲಿ ಐಸಿಸ್ ಉಗ್ರನ ಬಂಧನ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada