• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ರಮಾಸ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಅದ್ದೂರಿ ನಿರ್ಮಾಣ ಸಂಸ್ಥೆ

ಪ್ರತಿಧ್ವನಿ by ಪ್ರತಿಧ್ವನಿ
August 23, 2022
in ಸಿನಿಮಾ
0
ರಮಾಸ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಅದ್ದೂರಿ ನಿರ್ಮಾಣ ಸಂಸ್ಥೆ
Share on WhatsAppShare on FacebookShare on Telegram

ಕನ್ನಡ ಚಿತ್ರಗಳು ಈಗ ವಿಶ್ವದಾದ್ಯಂತ ಜನಪ್ರಿಯ. ಕನ್ನಡ ಚಿತ್ರಗಳ ಮೇಲೆ ಅಪಾರ ಅಭಿಮಾನವಿರುವ ನೆರೆ ರಾಜ್ಯಗಳ ನಿರ್ಮಾಣ ಸಂಸ್ಥೆಗಳು ಕನ್ನಡ ಚಿತ್ರ ನಿರ್ಮಾಣಕ್ಕೆ ಮುಂದಾಗುತ್ತಿದೆ. ಆಂದ್ರಪ್ರದೇಶದಲ್ಲಿ ಕೆಲವು ತೆಲುಗು ಚಿತ್ರಗಳನ್ನು ನಿರ್ಮಾಣ ಮಾಡಿರುವ ರಮಾ ಅವರು ತಮ್ಮ “ರಮಾಸ್ ಮೀಡಿಯಾ ಕ್ರಿಯೇಷನ್ಸ್” ಎಂಬ ನೂತನ ನಿರ್ಮಾಣ ಸಂಸ್ಥೆಯನ್ನು ಕರ್ನಾಟಕದಲ್ಲೂ ಆರಂಭಿಸಿದ್ದಾರೆ. ಸಂಸ್ಥೆಯ ಲೋಗೊ ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಬಿಡುಗಡೆಯಾಯಿತು. ಈ ಸಂಸ್ಥೆಯ ಮೊದಲ ಚಿತ್ರವಾಗಿ ನಿರಂಜನ್ ಸುಧೀಂದ್ರ ಅಭಿನಯದ “ಸೂಪರ್ ಸ್ಟಾರ್” ಪ್ಯಾನ್ ಇಂಡಿಯಾ ಚಿತ್ರ ನಿರ್ಮಾಣವಾಗುತ್ತಿದೆ. ನಿವೃತ್ತ ಪೊಲೀಸ್ ಅಧಿಕಾರಿ ಸತ್ಯನಾರಾಯಣ ಹಾಗೂ ಅವರ ಮಗಳು ರಮಾ ಈ ಸಂಸ್ಥೆಯ ರೂವಾರಿಗಳು.

ADVERTISEMENT

ತೆಲುಗಿನಲ್ಲಿ “ರಮಾಸ್ ಮೀಡಿಯಾ ಕ್ರಿಯೇಷನ್ಸ್” ಮೂಲಕ ಕೆಲವು ಚಿತ್ರಗಳನ್ನು ನಿರ್ಮಾಣ ಮಾಡಿದ್ದೇವೆ. “ಸೂಪರ್ ಸ್ಟಾರ್” ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದೇವೆ. ನಮ್ಮದು ಸಿನಿಮಾ ನಿರ್ಮಾಣವಲ್ಲದೆ ಸಾಕಷ್ಟು ಬೇರೆಬೇರೆ ಉದ್ಯಮಗಳು ಇದೆ. ಕೆಲಸದ ನಿಮಿತ್ತ ಬೆಂಗಳೂರಿಗೆ ಬಂದಾಗ ನಿರ್ದೇಶಕ ರಮೇಶ್ ವೆಂಕಟೇಶ್ ಬಾಬು ಈ ಚಿತ್ರದ ಬಗ್ಗೆ ಹೇಳಿದರು. ಕೆಲವು ಸಮಯ ತೆಗೆದುಕೊಂಡು ನಂತರ ನಿರ್ಮಾಣ ಮಾಡೋಣ ಅಂದೆ. ನಿರ್ದೇಶಕರು ಹೆಣೆದಿರುವ ಕಥೆ ನನ್ನನ್ನು ಆಕರ್ಷಿಸಿತ್ತು. ‌ ನಿರಂಜನ್ ಸುರದ್ರೂಪಿ ನಟ. ಚೆನ್ನಾಗಿ ಅಭಿನಯಿಸುತ್ತಿದ್ದಾರೆ. ನಿರ್ದೇಶಕ ಹಾಗೂ ನಾಯಕ, ಇವರಿಬ್ಬರ ಕಾಂಬಿನೇಷನ್ ನಲ್ಲಿ ಉತ್ತಮ ಚಿತ್ರ ಬರುವುದಂತೂ ಖಚಿತ. ಈ ಚಿತ್ರದ ನಂತರ ಇವರಿಬ್ಬರ ಜೋಡಿಯಲ್ಲೇ ಮತ್ತೊಂದು ಚಿತ್ರ ನಿರ್ಮಾಣ ಮಾಡುತ್ತೇನೆ. ನಮ್ಮ ಸಂಸ್ಥೆಗೆ ನಿಮ್ಮ ಬೆಂಬಲವಿರಲಿ ಎಂದರು ನಿರ್ಮಾಪಕಿ ರಮಾ. ನಿರ್ಮಾಪಕ ಸತ್ಯನಾರಾಯಣ ಚಿತ್ರ ನಿರ್ಮಾಣ ಆರಂಭವಾದ ಬಗ್ಗೆ ಮಾಹಿತಿ ನೀಡಿದ್ದಾರೆ.

ನಾನು ಹಾಗೂ ನಿರಂಜನ್ ಈ ಚಿತ್ರದ ಕುರಿತು ಮಾತನಾಡುತ್ತಿದ್ದಾಗ, ನಮಗೆ ರಮಾ ಮೇಡಮ್ ಅವರ ಪರಿಚಯವಾಯಿತು. ಅವರಿಗೆ ಕಥೆ ಹೇಳಿದಾಗ, ಕಥೆಯನ್ನು ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾಗಿದ್ದಾರೆ. ಯಾವುದೇ ಕೊರೆತೆ ಇಲ್ಲದಂತೆ ಚಿತ್ರವನ್ನು ‌ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ ಅವರಿಗೆ, ನನ್ನ ತಂಡಕ್ಕೆ ಹಾಗೂ ಚಿತ್ರ ಆರಂಭದಿಂದ ಪ್ರೋತ್ಸಾಹ ನೀಡುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅವರಿಗೆ ಧನ್ಯವಾದ . ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಚಿತ್ರ ಅಂತಿಮಹಂತದಲ್ಲಿದೆ ಎಂದು ನಿರ್ದೇಶಕ ರಮೇಶ್ ವೆಂಕಟೇಶ್ ಬಾಬು ಮಾಹಿತಿ ಹಂಚಿಕೊಂಡಿದ್ದಾರೆ.

ನಾನು ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮವಹಿಸುತ್ತಿದ್ದೇನೆ. ಏಕೆಂದರೆ “ಸೂಪರ್ ಸ್ಟಾರ್” ನನ್ನ ಚಿಕ್ಕಪ್ಪನ ಟೈಟಲ್. ಅವರಿಂದ ಅನುಮತಿ ಪಡೆದು ಶೀರ್ಷಿಕೆಯಿಟ್ಟಿದ್ದೇನೆ. ಆ ಹೆಸರಿಗೆ ಧಕ್ಕೆ ಬಾರದ ಹಾಗೆ ನೋಡಿಕೊಳ್ಳುವುದೇ ನನ್ನ ಮೊದಲ ಆದ್ಯತೆ. ನಮ್ಮ ಮೇಲೆ ನಂಬಿಕೆಯಿಟ್ಟು ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ “ರಮಾಸ್ ಮೀಡಿಯಾ ಕ್ರಿಯೇಷನ್ಸ್” ಅವರಿಗೆ, ನಿರ್ದೇಶಕರಿಗೆ ,ಆಗಮಿಸಿರುವ ಗಣ್ಯರಿಗೆ ಹಾಗೂ ಕುಟುಂಬದವರಿಗೆ ನಿರಂಜನ್ ಸುಧೀಂದ್ರ ಧನ್ಯವಾದಗಳನ್ನು ತಿಳಿಸಿದ್ದಾರೆ.

ಪಕ್ಕದ ರಾಜ್ಯದಿಂದ ಕನ್ನಡ ಚಿತ್ರವೊಂದರ ನಿರ್ಮಾಣಕ್ಕೆ ಆಗಮಿಸಿರುವ ಒಳ್ಳೆಯದಾಗಲಿ. ಇನ್ನೂ ನಮ್ಮ ನಿರಂಜನ್ ಸುಧೀಂದ್ರ ಬಹಳ ಶ್ರಮ ಜೀವಿ. ಇತ್ತೀಚೆಗೆ “ಸೂಪರ್ ಸ್ಟಾರ್” ಚಿತ್ರದ ಸಾಹಸ ಸನ್ನಿವೇಶವೊಂದನ್ನು ನಾನು ಹಾಗೂ ಸುದೀಪ್ ನೋಡಿ ಸಂತೋಷಪಟ್ಟೆವು. ಸುದೀಪ್ ಅಂತೂ ನಿರಂಜನ್ ಅಭಿನಯದ ಬಗ್ಗೆ ಉತ್ತಮ ಮಾತುಗಳಾಡಿದರು. ಅವನಿಗೆ ಹಾಗೂ ಈ ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ರಿಯಲ್‌ ಸ್ಟಾರ್‌ ಉಪೇಂದ್ರ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.

Tags: Covid 19ಕರೋನಾಕೋವಿಡ್-19
Previous Post

ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ನಡೆಸುವ ಹೆಸರಲ್ಲಿ‌ ಹಣ ವಸೂಲಿ! 

Next Post

ಬಿಡುಗಡೆಗೂ ಮುನ್ನವೇ 87 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ‘ಲೈಗರ್’!: ಹೇಗೆ ಗೊತ್ತೇ?

Related Posts

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..
ಸಿನಿಮಾ

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ : ರಾಮೋಜಿ ಫಿಲಂ ಸಿಟಿಯಲ್ಲಿ ಅದ್ದೂರಿ ಟೀಸರ್ ಅನಾವರಣ..

by ಪ್ರತಿಧ್ವನಿ
November 16, 2025
0

ರಾಜಮೌಳಿ – ಮಹೇಶ್‍ ಬಾಬು ಹೊಸ ಚಿತ್ರ ‘ವಾರಣಾಸಿ.. ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಟೀಸರ್ ಅನಾವರಣ.. ಅದ್ದೂರಿ ಸಮಾರಂಭದಲ್ಲಿ 50 ಸಾವಿರಕ್ಕೂ ಹೆಚ್ಚಿನ ಜನರು ಭಾಗಿ.....

Read moreDetails
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಲೈಂಗಿಕ‌ ಕಿರುಕುಳ ಆರೋಪ: ಬಂಧನವಾಗಿದ್ದ ಅರವಿಂದ್ ರೆಡ್ಡಿಗೆ ಜಾಮೀನು

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

November 15, 2025
ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ  ರೆಡ್ಡಿ ಅರೆಸ್ಟ್‌

ಕನ್ನಡ ಚಿತ್ರರಂಗದ ನಟಿಗೆ ಕಿರುಕುಳ: ನಿರ್ಮಾಪಕ ಅರವಿಂದ್ ವೆಂಕಟೇಶ ರೆಡ್ಡಿ ಅರೆಸ್ಟ್‌

November 15, 2025
ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

November 14, 2025
Next Post
ಬಿಡುಗಡೆಗೂ ಮುನ್ನವೇ 87 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ‘ಲೈಗರ್’!: ಹೇಗೆ ಗೊತ್ತೇ?

ಬಿಡುಗಡೆಗೂ ಮುನ್ನವೇ 87 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ 'ಲೈಗರ್'!: ಹೇಗೆ ಗೊತ್ತೇ?

Please login to join discussion

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada